Advertisement
MIRROR FOCUS

#HeavyRain | ಉತ್ತರ ಭಾರತದ ಹಲವು ಕಡೆ ಭಾರೀ ಮಳೆ | ಮಳೆಗೆ 15 ಮಂದಿ ಬಲಿ | ಹಲವು ಕಡೆ ಭೂಕುಸಿತ, ಪ್ರವಾಹ |

Share

ಭಾರೀ ಮಳೆಯಿಂದಾಗಿ ಉತ್ತರ ಭಾರತದ ಹಲವಾರು ಭಾಗಗಳಲ್ಲಿ ಭೂಕುಸಿತ, ಪ್ರವಾಹದ ಕಂಡುಬಂದಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು, ಈಗಿನ ಮಾಹಿತಿ ಪ್ರಕಾರ  15 ಮಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.

ಭಾನುವಾರ ಉತ್ತರ ಭಾರತದ ಹಲವು ಭಾಗಗಳಲ್ಲಿ ಧಾರಾಕಾರ ಮಳೆ ಸುರಿದಿದ್ದು, ಭೂಕುಸಿತ ಮತ್ತು ಇತರ ಮಳೆ ಸಂಬಂಧಿತ ಘಟನೆಗಳಲ್ಲಿ 15 ಜನರು ಸಾವನ್ನಪ್ಪಿದ್ದಾರೆ. ದೆಹಲಿಯ ಯಮುನಾ ಸೇರಿದಂತೆ ಹೆಚ್ಚಿನ ನದಿಗಳು ಉಕ್ಕಿ ಹರಿಯುತ್ತಿವೆ. ದಾಖಲೆ ಪ್ರಮಾಣದ ಮಳೆಯ ಕಾರಣದಿಂದ ಅನೇಕ ರಸ್ತೆಗಳು ಮತ್ತು ವಸತಿ ಪ್ರದೇಶಗಳು ನೀರಿನಲ್ಲಿ ಮುಳುಗಿವೆ. ಪ್ರವಾಹದ ಕಾರಣದಿಂದ ಗುಡ್ಡಗಾಡು ಪ್ರದೇಶಗಳಲ್ಲಿನ ರಸ್ತೆಗಳನ್ನು ಕೊಚ್ಚಿಕೊಂಡು ಹೋಗಿ ಸಂಪರ್ಕ ಕಡಿತವಾಗಿದೆ.

ಹಿಮಾಚಲ ಪ್ರದೇಶದಲ್ಲಿ ಪ್ರವಾಹದ ಪರಿಸ್ಥಿತಿ

ಹಿಮಾಚಲ ಪ್ರದೇಶದಲ್ಲಿ ಮೂರು ಬಾರಿ ಭೂಕುಸಿತ ಸಂಭವಿಸಿದ್ದು, ಏಳು ಜಿಲ್ಲೆಗಳಿಗೆ ಅತಿ ಹೆಚ್ಚು ಮಳೆಯಾಗುವ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಐವರು ಸಾವನ್ನಪ್ಪಿದ್ದಾರೆ. ಶಿಮ್ಲಾ ಜಿಲ್ಲೆಯ ಕೋಟ್‌ಗಢ ಪ್ರದೇಶದಲ್ಲಿ ಭೂಕುಸಿತದಿಂದ ಮನೆ ಕುಸಿದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದರೆ, ಕುಲು ಮತ್ತು ಚಂಬಾ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.
ರಾಜ್ಯದ ಕಾಶಿಪುರ ಪ್ರದೇಶದಲ್ಲಿ ಎರಡು ಮನೆಗಳು ಕುಸಿದು ದಂಪತಿ ಸಾವನ್ನಪ್ಪಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ದೋಡಾ ಜಿಲ್ಲೆಯಲ್ಲಿ ಪ್ರಯಾಣಿಕರ ಬಸ್‌ಗೆ ಭೂಕುಸಿತ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದಾರೆ.

ಹಲವು ಕಡೆ ರೈಲ್ವೆ ಸೇವೆಗಳಿಗೂ ಸಮಸ್ಯೆಯಾಗಿದೆ. ಸುಮಾರು 17 ರೈಲುಗಳನ್ನು ರದ್ದುಗೊಳಿಸಲಾಗಿದೆ ಮತ್ತು ಸುಮಾರು 12 ರೈಲುಗಳನ್ನು ಬೇರೆಡೆಗೆ ತಿರುಗಿಸಲಾಗಿದೆ ಎಂದು ಉತ್ತರ ರೈಲ್ವೆ ಇಲಾಖೆ ಹೇಳಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

6 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

16 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

17 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

17 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

23 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

1 day ago