Advertisement
ಕೃಷಿ

150 ರೂಪಾಯಿ ದಾಟಿದ ರಬ್ಬರ್ ಧಾರಣೆ

Share

ಸುಳ್ಯ: ಅನೇಕ ಸಮಯಗಳ ಬಳಿಕ ರಬ್ಬರ್ ಧಾರಣೆ 150 ರೂಪಾಯಿ ದಾಟಿದೆ. ಕಳೆದ ವಾರ 145 ರೂಪಾಯಿ ಆಸುಪಾಸಿನಲ್ಲಿ ಇದ್ದ ಧಾರಣೆ ಗುರುವಾರದಂದು 151 ರೂಪಾಯಿಗೆ ತಲಪಿದೆ.

ಕಳೆದ ವರ್ಷದ ಕೇರಳದಲ್ಲಿ ಉಂಟಾದ ವಾತಾವರಣದ ಪ್ರತಿಕೂಲ ಪರಿಸ್ಥಿತಿಯಿಂದ ಕೇರಳದಲ್ಲಿ ರಬ್ಬರ್ ಉತ್ಪಾದನೆಯಲ್ಲಿ  ಗಣನೀಯ ಇಳಿಕೆ ಕಂಡಿದ್ದರೆ ವಿದೇಶದಲ್ಲೂ ರಬ್ಬರ್ ಬೇಡಿಕೆ ಹೆಚ್ಚಾಗಿದೆ. ಆದರೆ ಪೂರೈಕೆ ಸಾಧ್ಯವಾಗದ ಹಿನ್ನೆಲೆಯಲ್ಲಿ  ಧಾರಣೆ ಏರಿಕೆಯಾಗುತ್ತಿದೆ. ಇದೀಗ ಮಳೆಗಾಲ ಆರಂಭವಾದ ಬಳಿಕ ರಬ್ಬರ್ ಗೆ ಪ್ಲಾಸ್ಟಿಕ್ ಅಳವಡಿಕೆ ಕಾರ್ಯ ನಡೆಯುತ್ತಿದೆ. ನಂತರ ಟ್ಯಾಪಿಂಗ್ ಆರಂಭವಾಗುವ ಹೊತ್ತಿಗೆ ಧಾರಣೆಯಲ್ಲಿ  ಇಳಿಕೆ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.

Advertisement

2018 ರಲ್ಲಿ ವಿಶ್ವದ ಬಳಕೆಯಲ್ಲಿ ಶೇ 40 ರಷ್ಟು ರಬ್ಬರ್ ಬಳಕೆ ಇತ್ತು. ಇದೀಗ ಬಹುಪಾಲು ರಬ್ಬರ್ ಬಳಕೆ ಹೊಂದಿರುವ ಚೀನಾದ ಬಳಕೆ 2019 ರಲ್ಲಿ 3.2 ಶೇಕಡದಿಂದ 5.85 ಮಿ.ಟಿ.ಗೆ ಹೆಚ್ಚಳವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಪ್ರಾಥಮಿಕ ಅಂದಾಜು ಪ್ರಕಾರ, ಭಾರತವು 2018 ರ ಅವಧಿಯಲ್ಲಿ 1.218 ಮೆಟ್ರಿಕ್ ಟನ್ ರಬ್ಬರ್ ಬಳಕೆ ಮಾಡಿದ್ದರೆ ಈ ವರ್ಷ ಶೇ 12.6 ರಷ್ಟು ಏರಿಕೆಯಾಗಿದೆ.
2010-12ರ ಅವಧಿಯಲ್ಲಿ ರಬ್ಬರ್ ಬೆಲೆಯಲ್ಲಿ ಗಣನೀಯ ಏರಿಕೆ ಇದೆ ಎಂದು ಈ ಹಿಂದೆ ವಿಶ್ಲೇಷಣೆ ಮಾಡಲಾಗಿತ್ತು. ಹೀಗಾಗಿ ಈಗಿನ ಧಾರಣೆ ಅದಕ್ಕೆ ಪೂರಕವಾಗುತ್ತಿದೆ.
ಆಗಸ್ಟ್ 2018 ರಲ್ಲಿ ಕೇರಳದ ಪ್ರವಾಹದಿಂದಾಗಿ ಈ ಪ್ರವಾಹವು ಮಣ್ಣಿನ ಗುಣಮಟ್ಟವನ್ನು ಕುಸಿದಿದೆ. ಹೀಗಾಗಿ ಇಳುವರಿಯಲ್ಲೂ ಕೊರತೆ ಕಂಡಿದೆ. ಇದೆಲ್ಲಾ ಸದ್ಯ ಬೆಲೆ ಏರಿಕೆಗೆ ಕಾರಣವಾಗಿದೆ.

Advertisement

 

 

Advertisement

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶಾದ್ಯಂತ ಚುರುಕುಗೊಂಡ ನೈಋತ್ಯ ಮುಂಗಾರು – ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಮುಂದುವರಿಕೆ

ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…

2 hours ago

ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ – ಜುಲೈ 2 ರಂದು ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 2ರಂದು ಅಂಗನವಾಡಿ, ಶಾಲೆ…

2 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿ ತಡೆ – ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಗೆ ವರ್ತಕರ ಮನವಿ

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ಹಿನ್ನೆಲೆಯಲ್ಲಿ ಶಿರಸಿಯ ವರ್ತಕರು ಸಂಸದ ವಿಶ್ವೇಶ್ವರ ಹೆಗಡೆ…

6 hours ago

ಹವಾಮಾನ ವರದಿ | 01-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಸ್ವಲ್ಪ ಇಳಿಕೆ – ಜುಲೈ 4ರಿಂದ ಮತ್ತೆ ಚುರುಕು!

ಜುಲೈ 2 ಮತ್ತು 3ರಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಸ್ವಲ್ಪ ಕಡಿಮೆಯಾಗುವ…

9 hours ago

ಶಿರಾಡಿ ಘಾಟಿಯಲ್ಲಿ ವಾರಾಂತ್ಯದ ಟ್ರಾಫಿಕ್‌ ಜಾಮ್‌ಗೆ ಬ್ರೇಕ್‌ ಯಾವಾಗ? ಶಿರಾಡಿ ಘಾಟಿಗೆ ವಿಶೇಷ ಸಂಚಾರ ಯೋಜನೆ ಜಾರಿ ಅಗತ್ಯ

ಶಿರಾಡಿ ಘಾಟಿಯಲ್ಲಿ ಪ್ರತಿ ವಾರಾಂತ್ಯ ಉಂಟಾಗುತ್ತಿರುವ ಟ್ರಾಫಿಕ್‌ ಜಾಮ್‌ಗೆ ವಿಶೇಷ ಸಂಚಾರ ನಿರ್ವಹಣಾ…

13 hours ago

ಜುಲೈನಲ್ಲಿ ದೇಶಾದ್ಯಂತ ಸಾಮಾನ್ಯಕ್ಕಿಂತ ಕಡಿಮೆ ಮಳೆ ಸಾಧ್ಯತೆ : ಐಎಂಡಿ ಎಚ್ಚರಿಕೆ

ಜುಲೈ ತಿಂಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ…

14 hours ago