Advertisement
ಕೃಷಿ

150 ರೂಪಾಯಿ ದಾಟಿದ ರಬ್ಬರ್ ಧಾರಣೆ

Share

ಸುಳ್ಯ: ಅನೇಕ ಸಮಯಗಳ ಬಳಿಕ ರಬ್ಬರ್ ಧಾರಣೆ 150 ರೂಪಾಯಿ ದಾಟಿದೆ. ಕಳೆದ ವಾರ 145 ರೂಪಾಯಿ ಆಸುಪಾಸಿನಲ್ಲಿ ಇದ್ದ ಧಾರಣೆ ಗುರುವಾರದಂದು 151 ರೂಪಾಯಿಗೆ ತಲಪಿದೆ.

ಕಳೆದ ವರ್ಷದ ಕೇರಳದಲ್ಲಿ ಉಂಟಾದ ವಾತಾವರಣದ ಪ್ರತಿಕೂಲ ಪರಿಸ್ಥಿತಿಯಿಂದ ಕೇರಳದಲ್ಲಿ ರಬ್ಬರ್ ಉತ್ಪಾದನೆಯಲ್ಲಿ  ಗಣನೀಯ ಇಳಿಕೆ ಕಂಡಿದ್ದರೆ ವಿದೇಶದಲ್ಲೂ ರಬ್ಬರ್ ಬೇಡಿಕೆ ಹೆಚ್ಚಾಗಿದೆ. ಆದರೆ ಪೂರೈಕೆ ಸಾಧ್ಯವಾಗದ ಹಿನ್ನೆಲೆಯಲ್ಲಿ  ಧಾರಣೆ ಏರಿಕೆಯಾಗುತ್ತಿದೆ. ಇದೀಗ ಮಳೆಗಾಲ ಆರಂಭವಾದ ಬಳಿಕ ರಬ್ಬರ್ ಗೆ ಪ್ಲಾಸ್ಟಿಕ್ ಅಳವಡಿಕೆ ಕಾರ್ಯ ನಡೆಯುತ್ತಿದೆ. ನಂತರ ಟ್ಯಾಪಿಂಗ್ ಆರಂಭವಾಗುವ ಹೊತ್ತಿಗೆ ಧಾರಣೆಯಲ್ಲಿ  ಇಳಿಕೆ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.

2018 ರಲ್ಲಿ ವಿಶ್ವದ ಬಳಕೆಯಲ್ಲಿ ಶೇ 40 ರಷ್ಟು ರಬ್ಬರ್ ಬಳಕೆ ಇತ್ತು. ಇದೀಗ ಬಹುಪಾಲು ರಬ್ಬರ್ ಬಳಕೆ ಹೊಂದಿರುವ ಚೀನಾದ ಬಳಕೆ 2019 ರಲ್ಲಿ 3.2 ಶೇಕಡದಿಂದ 5.85 ಮಿ.ಟಿ.ಗೆ ಹೆಚ್ಚಳವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಪ್ರಾಥಮಿಕ ಅಂದಾಜು ಪ್ರಕಾರ, ಭಾರತವು 2018 ರ ಅವಧಿಯಲ್ಲಿ 1.218 ಮೆಟ್ರಿಕ್ ಟನ್ ರಬ್ಬರ್ ಬಳಕೆ ಮಾಡಿದ್ದರೆ ಈ ವರ್ಷ ಶೇ 12.6 ರಷ್ಟು ಏರಿಕೆಯಾಗಿದೆ.
2010-12ರ ಅವಧಿಯಲ್ಲಿ ರಬ್ಬರ್ ಬೆಲೆಯಲ್ಲಿ ಗಣನೀಯ ಏರಿಕೆ ಇದೆ ಎಂದು ಈ ಹಿಂದೆ ವಿಶ್ಲೇಷಣೆ ಮಾಡಲಾಗಿತ್ತು. ಹೀಗಾಗಿ ಈಗಿನ ಧಾರಣೆ ಅದಕ್ಕೆ ಪೂರಕವಾಗುತ್ತಿದೆ.
ಆಗಸ್ಟ್ 2018 ರಲ್ಲಿ ಕೇರಳದ ಪ್ರವಾಹದಿಂದಾಗಿ ಈ ಪ್ರವಾಹವು ಮಣ್ಣಿನ ಗುಣಮಟ್ಟವನ್ನು ಕುಸಿದಿದೆ. ಹೀಗಾಗಿ ಇಳುವರಿಯಲ್ಲೂ ಕೊರತೆ ಕಂಡಿದೆ. ಇದೆಲ್ಲಾ ಸದ್ಯ ಬೆಲೆ ಏರಿಕೆಗೆ ಕಾರಣವಾಗಿದೆ.

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತೀಯ ಮಾವಿನ ಹಣ್ಣಿಗೆ ನೇಪಾಳ ನಿಷೇಧವಿಲ್ಲ – ಸುಳ್ಳು ವರದಿಗಳಿಗೆ ಭಾರತ-ನೇಪಾಳ ಸರ್ಕಾರಗಳ ಸ್ಪಷ್ಟನೆ

ಭಾರತೀಯ ಮಾವಿನ ಹಣ್ಣಿನ ಆಮದಿಗೆ ನೇಪಾಳ ಯಾವುದೇ ನಿಷೇಧ ಹೇರಿಲ್ಲ ಎಂದು ಭಾರತ…

2 hours ago

ಮುಂದಿನ 5 ದಿನ ರಾಜ್ಯಾದ್ಯಂತ ಭಾರೀ ಮಳೆ ಎಚ್ಚರಿಕೆ- ಕರಾವಳಿ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಣೆ

ರಾಜ್ಯದ ಹಲವೆಡೆ ಮುಂದಿನ ಐದು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ…

5 hours ago

ಸುಲಭವಾಗಿ ಮಾಡಿ ರುಚಿಕರ ಹಲಸಿನ ಕಾಯಿ ಚಟ್ನಿ – ಬಿಸಿ ಅನ್ನಕ್ಕೆ ಸೂಪರ್ ಕಾಂಬಿನೇಷನ್!

ಹಲಸಿನ ಕಾಯಿ, ಕಾಯಿತುರಿ ಹಾಗೂ ಜೀರಿಗೆ ಬಳಸಿ ತಯಾರಿಸುವ ಈ ಚಟ್ನಿ ಬಿಸಿ…

6 hours ago

ಅಡಿಕೆ ಕೃಷಿ ಲಾಭದಾಯಕವೇ..? – ಮೂರು ವರ್ಷದಲ್ಲಿ ಕೆಜಿಗೆ ₹34.53 ವೆಚ್ಚ ಏರಿಕೆ – ನ್ಯಾಯಸಮ್ಮತ ಬೆಲೆಗಾಗಿ ರೈತರ ಒತ್ತಾಯ

2023ರಿಂದ 2026ರವರೆಗೆ ಅಡಿಕೆ ಉತ್ಪಾದನಾ ವೆಚ್ಚ ಸುಮಾರು 27% ಏರಿಕೆಯಾಗಿದೆ. ಈ ಲೆಕ್ಕಾಚಾರದ…

14 hours ago

ಎಲ್ ನೀನೋ, ಲಾ ನೀನಾ ಮತ್ತು ಮಳೆ ಅನಿಶ್ಚಿತತೆ – ಮುಂದಿನ ಪೀಳಿಗೆಗಾಗಿ ಮಳೆನೀರು ಉಳಿಸುವುದು ಈಗಲೇ ಅನಿವಾರ್ಯ..!

ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…

15 hours ago

ರಸ್ತೆ ಬದಿ ತ್ಯಾಜ್ಯ ಎಸೆದರೆ ಎಚ್ಚರ – ದಂಡ ಖಚಿತ | ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ₹5,000 ದಂಡ

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…

16 hours ago