Advertisement
ಕೃಷಿ

150 ರೂಪಾಯಿ ದಾಟಿದ ರಬ್ಬರ್ ಧಾರಣೆ

Share

ಸುಳ್ಯ: ಅನೇಕ ಸಮಯಗಳ ಬಳಿಕ ರಬ್ಬರ್ ಧಾರಣೆ 150 ರೂಪಾಯಿ ದಾಟಿದೆ. ಕಳೆದ ವಾರ 145 ರೂಪಾಯಿ ಆಸುಪಾಸಿನಲ್ಲಿ ಇದ್ದ ಧಾರಣೆ ಗುರುವಾರದಂದು 151 ರೂಪಾಯಿಗೆ ತಲಪಿದೆ.

ಕಳೆದ ವರ್ಷದ ಕೇರಳದಲ್ಲಿ ಉಂಟಾದ ವಾತಾವರಣದ ಪ್ರತಿಕೂಲ ಪರಿಸ್ಥಿತಿಯಿಂದ ಕೇರಳದಲ್ಲಿ ರಬ್ಬರ್ ಉತ್ಪಾದನೆಯಲ್ಲಿ  ಗಣನೀಯ ಇಳಿಕೆ ಕಂಡಿದ್ದರೆ ವಿದೇಶದಲ್ಲೂ ರಬ್ಬರ್ ಬೇಡಿಕೆ ಹೆಚ್ಚಾಗಿದೆ. ಆದರೆ ಪೂರೈಕೆ ಸಾಧ್ಯವಾಗದ ಹಿನ್ನೆಲೆಯಲ್ಲಿ  ಧಾರಣೆ ಏರಿಕೆಯಾಗುತ್ತಿದೆ. ಇದೀಗ ಮಳೆಗಾಲ ಆರಂಭವಾದ ಬಳಿಕ ರಬ್ಬರ್ ಗೆ ಪ್ಲಾಸ್ಟಿಕ್ ಅಳವಡಿಕೆ ಕಾರ್ಯ ನಡೆಯುತ್ತಿದೆ. ನಂತರ ಟ್ಯಾಪಿಂಗ್ ಆರಂಭವಾಗುವ ಹೊತ್ತಿಗೆ ಧಾರಣೆಯಲ್ಲಿ  ಇಳಿಕೆ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.

2018 ರಲ್ಲಿ ವಿಶ್ವದ ಬಳಕೆಯಲ್ಲಿ ಶೇ 40 ರಷ್ಟು ರಬ್ಬರ್ ಬಳಕೆ ಇತ್ತು. ಇದೀಗ ಬಹುಪಾಲು ರಬ್ಬರ್ ಬಳಕೆ ಹೊಂದಿರುವ ಚೀನಾದ ಬಳಕೆ 2019 ರಲ್ಲಿ 3.2 ಶೇಕಡದಿಂದ 5.85 ಮಿ.ಟಿ.ಗೆ ಹೆಚ್ಚಳವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಪ್ರಾಥಮಿಕ ಅಂದಾಜು ಪ್ರಕಾರ, ಭಾರತವು 2018 ರ ಅವಧಿಯಲ್ಲಿ 1.218 ಮೆಟ್ರಿಕ್ ಟನ್ ರಬ್ಬರ್ ಬಳಕೆ ಮಾಡಿದ್ದರೆ ಈ ವರ್ಷ ಶೇ 12.6 ರಷ್ಟು ಏರಿಕೆಯಾಗಿದೆ.
2010-12ರ ಅವಧಿಯಲ್ಲಿ ರಬ್ಬರ್ ಬೆಲೆಯಲ್ಲಿ ಗಣನೀಯ ಏರಿಕೆ ಇದೆ ಎಂದು ಈ ಹಿಂದೆ ವಿಶ್ಲೇಷಣೆ ಮಾಡಲಾಗಿತ್ತು. ಹೀಗಾಗಿ ಈಗಿನ ಧಾರಣೆ ಅದಕ್ಕೆ ಪೂರಕವಾಗುತ್ತಿದೆ.
ಆಗಸ್ಟ್ 2018 ರಲ್ಲಿ ಕೇರಳದ ಪ್ರವಾಹದಿಂದಾಗಿ ಈ ಪ್ರವಾಹವು ಮಣ್ಣಿನ ಗುಣಮಟ್ಟವನ್ನು ಕುಸಿದಿದೆ. ಹೀಗಾಗಿ ಇಳುವರಿಯಲ್ಲೂ ಕೊರತೆ ಕಂಡಿದೆ. ಇದೆಲ್ಲಾ ಸದ್ಯ ಬೆಲೆ ಏರಿಕೆಗೆ ಕಾರಣವಾಗಿದೆ.

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

5 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

12 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago