Advertisement
MIRROR FOCUS

ಬಾಂಗ್ಲಾದೇಶದಿಂದ ಭಾರತಕ್ಕೆ ಬರಲು 150 ಟ್ರಕ್‌ ಅಡಿಕೆ ಸಿದ್ಧವಾಗಿದೆ..!

Share

ಬಾಂಗ್ಲಾದೇಶದಿಂದ ಭಾರತಕ್ಕೆ ಅಡಿಕೆ ರಫ್ತು ಮಾಡಲು ಕಳೆದ ಎರಡು ತಿಂಗಳಿನಿಂದ ಸಿದ್ಧತೆ ನಡೆಯುತ್ತಿದೆ. ಇದೀಗ ಸುಮಾರು 100 ಕೋಟಿ ರೂಪಾಯಿ ಮೌಲ್ಯದ 150 ಕ್ಕೂ ಹೆಚ್ಚು ಲಾರಿಗಳು ಬಾಂಗ್ಲಾದೇಶದ ಬೆನಪೋಲ್‌ ಬಂದರಿನಲ್ಲಿ ನಿಂತಿವೆ ಎಂದು ಅಲ್ಲಿನ ಮಾಧ್ಯಮ ವರದಿ ಮಾಡಿದೆ. ಭಾರತಕ್ಕೆ ಪ್ರವೇಶಿಸಲು ಅನುಮತಿಗಾಗಿ ಕಾಯುತ್ತಿವೆ ಎನ್ನುವ ಮಾಹಿತಿ ಇದೆ.

ಈಚೆಗಷ್ಟೇ ಅಧಿವೇಶನದಲ್ಲಿ ಸಂಸದ ಬಿ ವೈ ರಾಘವೇಂದ್ರ ಅವರ ಪ್ರಶ್ನೆಗೆ ವಾಣಿಜ್ಯ ಸಚಿವಾಲಯದಿಂದ ಲಭ್ಯವಾಗಿರುವ ಮಾಹಿತಿ ಪ್ರಕಾರ  ಬಾಂಗ್ಲಾದೇಶದಿಂದ 2024-25 ನೇ ಸಾಲಿನಲ್ಲಿ 12155 ಮೆಟ್ರಿಕ್‌ ಟನ್‌ ಅಡಿಕೆ ಆಮದು ಆಗಿತ್ತು.  ಈ ವರ್ಷ ಅಂದರೆ 2025–26ರ ಆರ್ಥಿಕ ವರ್ಷದ ಮೊದಲ ಐದು ತಿಂಗಳಲ್ಲಿ 10,650 ಟನ್ ಅಡಿಕೆಯನ್ನು ಭಾರತಕ್ಕೆ ರಫ್ತು ಮಾಡಲಾಗಿದೆ ಎಂದು ಬಾಂಗ್ಲಾದೇಶದ ಬೆನಪೋಲ್ ಬಂದರಿನ ಅಧಿಕಾರಿಗಳು ಹೇಳಿದ್ದಾರೆ. ಇದೀಗ 150 ಕ್ಕೂ ಹೆಚ್ಚು ಲಾರಿಗಳು ಅಡಿಕೆಯನ್ನು ಹೊತ್ತು ಕಳೆದ ಎರಡು ತಿಂಗಳನಿಂದ ಭಾರತಕ್ಕೆ ಸಾಗಾಟಕ್ಕೆ ಕಾದು ನಿಂತಿವೆ. ಆದರೆ ಭಾರತದಿಂದ ಅಡಿಕೆ ಗುಣಮಟ್ಟದ ಬಗ್ಗೆ ಖಾತ್ರಿ ಲಭ್ಯವಾಗದ ಹಿನ್ನೆಯಲ್ಲಿ ಹಾಗೂ  ಗುಣಮಟ್ಟ ಪರಿಶೀಲನೆಯಲ್ಲಿನ ವಿಳಂಬದ ಕಾರಣದಿಂದ ಭಾರತಕ್ಕೆ ಬರಲು ತಡವಾಗಿದೆ. ಹೀಗಾಗಿ ಬಾಂಗ್ಲಾದೇಶದ ರಫ್ತುದಾರರಿಗೂ ನಷ್ಟವಾಗುತ್ತಿದೆ.  ಹೀಗಾಗಿ ಭಾರತಕ್ಕೆ ಅಡಿಕೆ ರವಾನೆ ಮಾಡುವ ಬಗ್ಗೆ ಉನ್ನತಮಟ್ಟದಲ್ಲಿ ಮಾತುಕತೆಗಳನ್ನು ನಡೆಸುತ್ತಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಬಾಂಗ್ಲಾದೇಶ ದೇಶವು ವಾರ್ಷಿಕವಾಗಿ ಸುಮಾರು 700 ಕೋಟಿ ಟನ್ ಮೌಲ್ಯದ ಅಡಿಕೆಯನ್ನು ಭಾರತಕ್ಕೆ ರಫ್ತು ಮಾಡುತ್ತದೆ ಎಂದು ಅಲ್ಲಿನ ದಾಖಲೆ ಹೇಳುತ್ತದೆ. ಈ ಬಾರಿ ಬಾಂಗಾದೇಶದಿಂದ  ಶೇ. 37 ರಷ್ಟು ರಫ್ತು ಏರಿಕೆಯಾಗಿತ್ತು. ಹಿಂದಿನ ವರ್ಷಕ್ಕಿಂತ ಸುಮಾರು ನಾಲ್ಕು ಪಟ್ಟು ಹೆಚ್ಚಾಗಿತ್ತು. ಆದರೆ ಆಗಸ್ಟ್‌ ನಂತರ ಅಡಿಕೆ ಭಾರತಕ್ಕೆ ಬರುವುದಕ್ಕೆ ತಡೆಯಾಗಿದೆ. ಈಗ ಅಡಿಕೆ ಗುಣಮಟ್ಟದ ಮೇಲೆ ಭಾರತವೂ ನಿಯಮಗಳನ್ನು ವಿಧಿಸಿದೆ. ಹೀಗಾಗಿ ಸಮಸ್ಯೆ ಆಗಿದೆ. ಈಗ ಈ ಅಡಿಕೆ ಮತ್ತೆ ಭಾರತಕ್ಕೆ ಪ್ರವೇಶವಾಗದಂತೆ ಆಡಳಿತವು ಗಮನಹರಿಸಿದರೆ ಭಾರತದ ಅಡಿಕೆ ಧಾರಣೆ ಸ್ಥಿರತೆ ಹಾಗೂ ಏರಿಕೆ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

3 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

12 hours ago

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ

ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…

12 hours ago

ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…

13 hours ago

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

1 day ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

1 day ago