150 ರೂಪಾಯಿ ದಾಟಿದ ರಬ್ಬರ್ ಧಾರಣೆ

June 13, 2019
4:00 PM

ಸುಳ್ಯ: ಅನೇಕ ಸಮಯಗಳ ಬಳಿಕ ರಬ್ಬರ್ ಧಾರಣೆ 150 ರೂಪಾಯಿ ದಾಟಿದೆ. ಕಳೆದ ವಾರ 145 ರೂಪಾಯಿ ಆಸುಪಾಸಿನಲ್ಲಿ ಇದ್ದ ಧಾರಣೆ ಗುರುವಾರದಂದು 151 ರೂಪಾಯಿಗೆ ತಲಪಿದೆ.

ಕಳೆದ ವರ್ಷದ ಕೇರಳದಲ್ಲಿ ಉಂಟಾದ ವಾತಾವರಣದ ಪ್ರತಿಕೂಲ ಪರಿಸ್ಥಿತಿಯಿಂದ ಕೇರಳದಲ್ಲಿ ರಬ್ಬರ್ ಉತ್ಪಾದನೆಯಲ್ಲಿ  ಗಣನೀಯ ಇಳಿಕೆ ಕಂಡಿದ್ದರೆ ವಿದೇಶದಲ್ಲೂ ರಬ್ಬರ್ ಬೇಡಿಕೆ ಹೆಚ್ಚಾಗಿದೆ. ಆದರೆ ಪೂರೈಕೆ ಸಾಧ್ಯವಾಗದ ಹಿನ್ನೆಲೆಯಲ್ಲಿ  ಧಾರಣೆ ಏರಿಕೆಯಾಗುತ್ತಿದೆ. ಇದೀಗ ಮಳೆಗಾಲ ಆರಂಭವಾದ ಬಳಿಕ ರಬ್ಬರ್ ಗೆ ಪ್ಲಾಸ್ಟಿಕ್ ಅಳವಡಿಕೆ ಕಾರ್ಯ ನಡೆಯುತ್ತಿದೆ. ನಂತರ ಟ್ಯಾಪಿಂಗ್ ಆರಂಭವಾಗುವ ಹೊತ್ತಿಗೆ ಧಾರಣೆಯಲ್ಲಿ  ಇಳಿಕೆ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.

Advertisement

2018 ರಲ್ಲಿ ವಿಶ್ವದ ಬಳಕೆಯಲ್ಲಿ ಶೇ 40 ರಷ್ಟು ರಬ್ಬರ್ ಬಳಕೆ ಇತ್ತು. ಇದೀಗ ಬಹುಪಾಲು ರಬ್ಬರ್ ಬಳಕೆ ಹೊಂದಿರುವ ಚೀನಾದ ಬಳಕೆ 2019 ರಲ್ಲಿ 3.2 ಶೇಕಡದಿಂದ 5.85 ಮಿ.ಟಿ.ಗೆ ಹೆಚ್ಚಳವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಪ್ರಾಥಮಿಕ ಅಂದಾಜು ಪ್ರಕಾರ, ಭಾರತವು 2018 ರ ಅವಧಿಯಲ್ಲಿ 1.218 ಮೆಟ್ರಿಕ್ ಟನ್ ರಬ್ಬರ್ ಬಳಕೆ ಮಾಡಿದ್ದರೆ ಈ ವರ್ಷ ಶೇ 12.6 ರಷ್ಟು ಏರಿಕೆಯಾಗಿದೆ.
2010-12ರ ಅವಧಿಯಲ್ಲಿ ರಬ್ಬರ್ ಬೆಲೆಯಲ್ಲಿ ಗಣನೀಯ ಏರಿಕೆ ಇದೆ ಎಂದು ಈ ಹಿಂದೆ ವಿಶ್ಲೇಷಣೆ ಮಾಡಲಾಗಿತ್ತು. ಹೀಗಾಗಿ ಈಗಿನ ಧಾರಣೆ ಅದಕ್ಕೆ ಪೂರಕವಾಗುತ್ತಿದೆ.
ಆಗಸ್ಟ್ 2018 ರಲ್ಲಿ ಕೇರಳದ ಪ್ರವಾಹದಿಂದಾಗಿ ಈ ಪ್ರವಾಹವು ಮಣ್ಣಿನ ಗುಣಮಟ್ಟವನ್ನು ಕುಸಿದಿದೆ. ಹೀಗಾಗಿ ಇಳುವರಿಯಲ್ಲೂ ಕೊರತೆ ಕಂಡಿದೆ. ಇದೆಲ್ಲಾ ಸದ್ಯ ಬೆಲೆ ಏರಿಕೆಗೆ ಕಾರಣವಾಗಿದೆ.

Advertisement

 

 

Advertisement

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆ ಕೊರತೆ ಆತಂಕ – ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸಿ – ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ
June 30, 2026
8:50 PM
by: ದ ರೂರಲ್ ಮಿರರ್.ಕಾಂ
ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ
June 28, 2026
6:57 AM
by: ದ ರೂರಲ್ ಮಿರರ್.ಕಾಂ
ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ
June 26, 2026
1:15 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ
June 25, 2026
8:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror