ಬೆಂಗಳೂರಿನ ಯಲಹಂಕ ಬಳಿಯ ಮಾದಪ್ಪನಹಳ್ಳಿಯಲ್ಲಿರುವ 153 ಎಕರೆ ನೀಲಗಿರಿ ನೆಡುತೋಪು ಪ್ರದೇಶದಲ್ಲಿ ಔಷಧೀಯ ಸಸ್ಯವನ, ಪಕ್ಷಿಲೋಕ, ಕಿರು ಮೃಗಾಲಯ, ವೃಕ್ಷೋದ್ಯಾನ, ಮತ್ತು ಜೈವಿಕ ವನ ನಿರ್ಮಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಮಾದಪ್ಪನಹಳ್ಳಿ ನೆಡುತೋಪಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದ ಅವರು, ಬೆಂಗಳೂರು ಉತ್ತರ ಭಾಗದಲ್ಲಿ ಲಾಲ್ ಬಾಗ್, ಕಬ್ಬನ್ ಪಾರ್ಕ್ ನಂತಹ ಯಾವುದೇ ಸಸ್ಯೋದ್ಯಾನವಿಲ್ಲ. ಹೀಗಾಗಿ ಇಲ್ಲಿನ ಅರಣ್ಯ ಭೂಮಿಯಲ್ಲಿ ಇಂದಿರಾಗಾಂಧೀ ಜೈವಿಕ ಉದ್ಯಾನ, ವಿಶ್ವಗುರು ಬಸವಣ್ಣ ದಿವ್ಯೌಷಧೀಯ ಸಸ್ಯ ವನ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಪಕ್ಷಿ ಲೋಕ, ನಾಡಪ್ರಭು ಕೆಂಪೇಗೌಡ ಕಿರು ಮೃಗಾಲಯ ಹಾಗೂ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನ ನಿರ್ಮಾಣ ಮಾಡಲು ಚಿಂತಿಸಲಾಗಿದೆ ಎಂದು ತಿಳಿಸಿದ್ದಾರೆ. ನವೆಂಬರ್ ಕೊನೆಯ ವಾರದಲ್ಲಿ ಈ ಬೃಹತ್ ಉದ್ಯಾನದ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಅವರು ಹೇಳಿದ್ದಾರೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…