Advertisement
MIRROR FOCUS

ಜಪಾನ್‌ನಲ್ಲಿ ಒಂದೇ ದಿನ ಬರೋಬ್ಬರಿ 155 ಬಾರಿ ಕಂಪಿಸಿದ ಭೂಮಿ | ಭೂಕಂಪಕ್ಕೆ 30 ಮಂದಿ ಸಾವು | ಜೊತೆಗೆ ಸುನಾಮಿ ಭೀತಿ

Share

ಪ್ರಕೃತಿಯ ಮುನಿಸನ್ನು(Natural Disaster) ತಡೆಯುವ ಶಕ್ತಿ ಈ ಮಾನವನಿಗೆ(Human) ಅಸಾಧ್ಯದ ಮಾತು. ವಿಜ್ಞಾನ ಎಷ್ಟೇ ಮುಂದುವರೆದರು ಇದು ಮಾತ್ರ ಅಸಾಧ್ಯ. ಪರಿಸರವನ್ನು ನಾಶ ಮಾಡಬಹುದೇ ವಿನಃ ಅದರ ಪ್ರಕೋಪವನ್ನು ತಡೆಯುವ ಶಕ್ತಿ ಇಲ್ಲ.  ಜಪಾನ್‌ನಲ್ಲಿ(Japan) ಒಂದೇ ದಿನ 155 ಬಾರಿ ಭೂಕಂಪ(Earthquakes) ಸಂಭವಿಸಿದ ಪರಿಣಾಮ  30 ಮಂದಿ ಸಾವಿಗೀಡಾಗಿದ್ದಾರೆ. ಹೊಸ ವರ್ಷದಂದೇ(New year)) ಭೂಕಂಪ ಸಂಭವಿಸಿದೆ ಎನ್ನುವುದು ವಿಷಾದ. 

ಹೊನ್ಶುವಿನ ಮುಖ್ಯ ದ್ವೀಪದಲ್ಲಿರುವ ಇಶಿಕಾವಾ ಪ್ರಾಂತ್ಯದಲ್ಲಿ 7.5 ತೀವ್ರತೆಯ ಭೂಕಂಪವು ಒಂದು ಮೀಟರ್ ಎತ್ತರದ ಸುನಾಮಿ ಅಲೆಗಳನ್ನು ಸೃಷ್ಟಿಸಿತು. ಭೂಕಂಪದ ತೀವ್ರತೆಗೆ ಕಟ್ಟಡಗಳು ನೆಲಕ್ಕುರುಳಿವೆ, ಪ್ರಮುಖ ಬಂದರು ಬೆಂಕಿ ಅವಘಡಕ್ಕೆ ಕಾರಣವಾಯಿತು, ರಸ್ತೆಗಳು ಬಿರುಕು ಬಿಟ್ಟಿವೆ. ಜಪಾನ್‌ನಲ್ಲಿ ಸಂಭವಿಸಿದ ವಿನಾಶಕಾರಿ ಭೂಕಂಪದಿಂದಾಗಿ ಹಲವಾರು ಸಾವುನೋವುಗಳು, ಕಟ್ಟಡ ಕುಸಿತಗಳು ಮತ್ತು ಬೆಂಕಿ ಸೇರಿದಂತೆ ಬಹಳ ವ್ಯಾಪಕ ಹಾನಿಯಾಗಿದೆ ಎಂದು ವಿಪತ್ತು ನಿರ್ವಹಣಾ ಸಭೆಯ ಬಳಿಕ ಪ್ರಧಾನ ಮಂತ್ರಿ ಫ್ಯೂಮಿಯೊ ಕಿಶಿಡಾ ತಿಳಿಸಿದ್ದಾರೆ.

ವಾಜಿಮಾ ಬಂದರಿನಲ್ಲಿ ಏಳು ಮಂದಿ ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ ಎಂದು ಕ್ಯೋಡೋ ಸುದ್ದಿ ಸಂಸ್ಥೆ ವರದಿ ಮಾಡಿದೆ. ಏರಿಯಲ್ ನ್ಯೂಸ್ ಫೂಟೇಜ್ ಬಂದರಿನಲ್ಲಿ ಭೂಕಂಪದಿಂದ ಬೆಂಕಿ ಅವಘಡ ಸಂಭವಿಸಿತು. ಏಳು ಅಂತಸ್ತಿನ ಕಟ್ಟಡವು ಕುಸಿದಿದೆ. ಈ ಪ್ರದೇಶದಲ್ಲಿ ಸುಮಾರು 45,000 ಕುಟುಂಬಗಳು ವಿದ್ಯುತ್‌ ಸಮಸ್ಯೆಯಿಂದ ಕತ್ತಲಲ್ಲಿ ಜೀವನ ನಡೆಸುವಂತಾಗಿದೆ. ಘಟನೆಯಲ್ಲಿ ಇದುವರೆಗೆ ಒಟ್ಟು 30 ಮಂದಿ ಸಾವನ್ನಪ್ಪಿದ ಬಗ್ಗೆ ವರದಿಯಾಗಿದೆ. ಭೂಕಂಪದ ಕೇಂದ್ರಬಿಂದು ಬಳಿ ಕೇವಲ 5,000 ಮನೆಗಳಿರುವ ಕರಾವಳಿ ಪಟ್ಟಣವಾದ ಸುಜುದಲ್ಲಿ,  1,000 ಮನೆಗಳು ನಾಶವಾದವು ಎಂದು ವರದಿಯಾಗಿದೆ.

 

ಭೂಕಂಪದ ತೀವ್ರತೆ 7.5ರಷ್ಟಿತ್ತು ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ (USGS) ತಿಳಿಸಿದೆ. ಜಪಾನ್‌ನ ಹವಾಮಾನ ಸಂಸ್ಥೆ ಇದನ್ನು 7.6 ಎಂದು ಹೇಳಿದೆ. ಇಶಿಕಾವಾ, ನೈಕತಾ ಮತ್ತು ಟೊಯಾಮಾ ನಗರಗಳ ಕರಾವಳಿ ತೀರಗಳಲ್ಲಿ ಸುನಾಮಿ (Tsunami) ಎಚ್ಚರಿಕೆ ನೀಡಲಾಗಿದೆ. ಇಶಿಕಾವಾ ಜಿಲ್ಲೆಯ ಕರಾವಳಿ ನೋಟೋಗೆ 5 ಮೀಟರ್ ಎತ್ತರದವರೆಗಿನ ಬೃಹತ್ ಅಲೆಗಳು ಅಪ್ಪಳಿಸುವ ಸಾಧ್ಯತೆ ಇದೆ. ನೈಗತ ಮತ್ತು ಟೊಯಾಮಾ ಸೇರಿದಂತೆ ಉಳಿದ ಕೆಲವು ಕರಾವಳಿ ತೀರಗಳಲ್ಲಿ 3 ಮೀಟರ್‍ವರೆಗೂ ಅಲೆಗಳು ಏಳಬಹುದು ಎಂದು ಜಪಾನ್ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

13 people have died as a result of 155 earthquakes (Earthquakes) occurred in Japan in one day. An earthquake occurred in the New Year and caused huge casualties. A 7.5-magnitude earthquake in Ishikawa Prefecture on the main island of Honshu generated tsunami waves up to one meter high.

- ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

2 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago