ಪ್ರಕೃತಿಯ ಮುನಿಸನ್ನು(Natural Disaster) ತಡೆಯುವ ಶಕ್ತಿ ಈ ಮಾನವನಿಗೆ(Human) ಅಸಾಧ್ಯದ ಮಾತು. ವಿಜ್ಞಾನ ಎಷ್ಟೇ ಮುಂದುವರೆದರು ಇದು ಮಾತ್ರ ಅಸಾಧ್ಯ. ಪರಿಸರವನ್ನು ನಾಶ ಮಾಡಬಹುದೇ ವಿನಃ ಅದರ ಪ್ರಕೋಪವನ್ನು ತಡೆಯುವ ಶಕ್ತಿ ಇಲ್ಲ. ಜಪಾನ್ನಲ್ಲಿ(Japan) ಒಂದೇ ದಿನ 155 ಬಾರಿ ಭೂಕಂಪ(Earthquakes) ಸಂಭವಿಸಿದ ಪರಿಣಾಮ 30 ಮಂದಿ ಸಾವಿಗೀಡಾಗಿದ್ದಾರೆ. ಹೊಸ ವರ್ಷದಂದೇ(New year)) ಭೂಕಂಪ ಸಂಭವಿಸಿದೆ ಎನ್ನುವುದು ವಿಷಾದ.
ಹೊನ್ಶುವಿನ ಮುಖ್ಯ ದ್ವೀಪದಲ್ಲಿರುವ ಇಶಿಕಾವಾ ಪ್ರಾಂತ್ಯದಲ್ಲಿ 7.5 ತೀವ್ರತೆಯ ಭೂಕಂಪವು ಒಂದು ಮೀಟರ್ ಎತ್ತರದ ಸುನಾಮಿ ಅಲೆಗಳನ್ನು ಸೃಷ್ಟಿಸಿತು. ಭೂಕಂಪದ ತೀವ್ರತೆಗೆ ಕಟ್ಟಡಗಳು ನೆಲಕ್ಕುರುಳಿವೆ, ಪ್ರಮುಖ ಬಂದರು ಬೆಂಕಿ ಅವಘಡಕ್ಕೆ ಕಾರಣವಾಯಿತು, ರಸ್ತೆಗಳು ಬಿರುಕು ಬಿಟ್ಟಿವೆ. ಜಪಾನ್ನಲ್ಲಿ ಸಂಭವಿಸಿದ ವಿನಾಶಕಾರಿ ಭೂಕಂಪದಿಂದಾಗಿ ಹಲವಾರು ಸಾವುನೋವುಗಳು, ಕಟ್ಟಡ ಕುಸಿತಗಳು ಮತ್ತು ಬೆಂಕಿ ಸೇರಿದಂತೆ ಬಹಳ ವ್ಯಾಪಕ ಹಾನಿಯಾಗಿದೆ ಎಂದು ವಿಪತ್ತು ನಿರ್ವಹಣಾ ಸಭೆಯ ಬಳಿಕ ಪ್ರಧಾನ ಮಂತ್ರಿ ಫ್ಯೂಮಿಯೊ ಕಿಶಿಡಾ ತಿಳಿಸಿದ್ದಾರೆ.
ವಾಜಿಮಾ ಬಂದರಿನಲ್ಲಿ ಏಳು ಮಂದಿ ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ ಎಂದು ಕ್ಯೋಡೋ ಸುದ್ದಿ ಸಂಸ್ಥೆ ವರದಿ ಮಾಡಿದೆ. ಏರಿಯಲ್ ನ್ಯೂಸ್ ಫೂಟೇಜ್ ಬಂದರಿನಲ್ಲಿ ಭೂಕಂಪದಿಂದ ಬೆಂಕಿ ಅವಘಡ ಸಂಭವಿಸಿತು. ಏಳು ಅಂತಸ್ತಿನ ಕಟ್ಟಡವು ಕುಸಿದಿದೆ. ಈ ಪ್ರದೇಶದಲ್ಲಿ ಸುಮಾರು 45,000 ಕುಟುಂಬಗಳು ವಿದ್ಯುತ್ ಸಮಸ್ಯೆಯಿಂದ ಕತ್ತಲಲ್ಲಿ ಜೀವನ ನಡೆಸುವಂತಾಗಿದೆ. ಘಟನೆಯಲ್ಲಿ ಇದುವರೆಗೆ ಒಟ್ಟು 30 ಮಂದಿ ಸಾವನ್ನಪ್ಪಿದ ಬಗ್ಗೆ ವರದಿಯಾಗಿದೆ. ಭೂಕಂಪದ ಕೇಂದ್ರಬಿಂದು ಬಳಿ ಕೇವಲ 5,000 ಮನೆಗಳಿರುವ ಕರಾವಳಿ ಪಟ್ಟಣವಾದ ಸುಜುದಲ್ಲಿ, 1,000 ಮನೆಗಳು ನಾಶವಾದವು ಎಂದು ವರದಿಯಾಗಿದೆ.
ಭೂಕಂಪದ ತೀವ್ರತೆ 7.5ರಷ್ಟಿತ್ತು ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ (USGS) ತಿಳಿಸಿದೆ. ಜಪಾನ್ನ ಹವಾಮಾನ ಸಂಸ್ಥೆ ಇದನ್ನು 7.6 ಎಂದು ಹೇಳಿದೆ. ಇಶಿಕಾವಾ, ನೈಕತಾ ಮತ್ತು ಟೊಯಾಮಾ ನಗರಗಳ ಕರಾವಳಿ ತೀರಗಳಲ್ಲಿ ಸುನಾಮಿ (Tsunami) ಎಚ್ಚರಿಕೆ ನೀಡಲಾಗಿದೆ. ಇಶಿಕಾವಾ ಜಿಲ್ಲೆಯ ಕರಾವಳಿ ನೋಟೋಗೆ 5 ಮೀಟರ್ ಎತ್ತರದವರೆಗಿನ ಬೃಹತ್ ಅಲೆಗಳು ಅಪ್ಪಳಿಸುವ ಸಾಧ್ಯತೆ ಇದೆ. ನೈಗತ ಮತ್ತು ಟೊಯಾಮಾ ಸೇರಿದಂತೆ ಉಳಿದ ಕೆಲವು ಕರಾವಳಿ ತೀರಗಳಲ್ಲಿ 3 ಮೀಟರ್ವರೆಗೂ ಅಲೆಗಳು ಏಳಬಹುದು ಎಂದು ಜಪಾನ್ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
13 people have died as a result of 155 earthquakes (Earthquakes) occurred in Japan in one day. An earthquake occurred in the New Year and caused huge casualties. A 7.5-magnitude earthquake in Ishikawa Prefecture on the main island of Honshu generated tsunami waves up to one meter high.
- ಅಂತರ್ಜಾಲ ಮಾಹಿತಿ
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…