ಸುದ್ದಿಗಳು

ದಿನದಿಂದ ದಿನಕ್ಕೆ ಏರುತ್ತಿದೆ ಕೋವಿಡ್ ಪ್ರಕರಣಗಳು | 24 ಗಂಟೆಗಳಲ್ಲಿ 1,573 ಕೊರೋನಾ ವೈರಸ್ ಸೋಂಕು ಪತ್ತೆ..!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿರುವುದು ಆತಂಕ ಸೃಷ್ಟಿ ಮಾಡಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 1,573 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 10,981ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.

Advertisement
Advertisement

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ದಿನವೊಂದರಲ್ಲಿ ಕೇರಳದಲ್ಲಿ ನಾಲ್ವರು ಕೋವಿಡ್‌ನಿಂದ ಸಾವಿಗೀಡಾಗಿದ್ದು, ಈವರೆಗೆ ಒಟ್ಟು 5,30,841 ಮಂದಿ ಮೃತಪಟ್ಟಿದ್ದಾರೆ.

ದೈನಂದಿನ ಪಾಸಿಟಿವಿಟಿ ದರ ಶೇ 1.30ರಷ್ಟಿದೆ ಮತ್ತು ವಾರದ ಪಾಸಿಟಿವಿಟಿ ದರ ಶೇ 1.47 ರಷ್ಟಿದೆ. ಈವರೆಗೆ ದೇಶದಾದ್ಯಂತ ಒಟ್ಟು ಸೋಂಕಿತರ ಸಂಖ್ಯೆ 4,47,07,525ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ.

ದೈನಂದಿನ ಮರಣ ಪ್ರಮಾಣ ಶೇ 1.19 ರಷ್ಟಿದೆ. ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.02 ರಷ್ಟು ಸಕ್ರಿಯ ಪ್ರಕರಣಗಳಿದ್ದರೆ, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.79 ರಷ್ಟಿದೆ. ದೇಶದಲ್ಲಿ ಒಟ್ಟಾರೆ 4,41,65,703 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸಚಿವಾಲಯದ ವೆಬ್‌ಸೈಟಿನಲ್ಲಿ ನೀಡಿರುವ ಮಾಹಿತಿ ಪ್ರಕಾರ, ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ 220.65 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಂಭಾವ್ಯ ಮಳೆ ಅನಾಹುತ ಪ್ರದೇಶಗಳನ್ನು ಗುರುತಿಸಲು ದ ಕ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ…

22 minutes ago

ಹವಾಮಾನ ವರದಿ | 10-06-2025 | ಜೂ.11 ರಿಂದ ರಾಜ್ಯದ ವಿವಿದೆಡೆ ಉತ್ತಮ ಮಳೆಯ ಮುನ್ಸೂಚನೆ

ಜೂನ್ 12ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ…

7 hours ago

ಮುಂದಿನ 4-5 ದಿನಗಳಲ್ಲಿ ದೇಶದ ವಾಯುವ್ಯ ಭಾಗಗಳಲ್ಲಿ ತೀವ್ರ ತಾಪಮಾನ | ದಕ್ಷಿಣದಲ್ಲಿ ಉತ್ತಮ ಮಳೆ |

ಜೂನ್‌ 12 ರಿಂದ 15 ರವರೆಗೆ ಕರ್ನಾಟಕದಲ್ಲಿ  ಮತ್ತು ಜೂನ್ 13 ರಿಂದ…

13 hours ago

ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ

ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…

13 hours ago

11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ತಗ್ಗಿದೆ – ಸಚಿವ ಪ್ರಹ್ಲಾದ್ ಜೋಶಿ

ಕಳೆದ 11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ಶೇಕಡ 21.1 ರಿಂದ…

14 hours ago

25 ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್ ಹೆದ್ದಾರಿಗಳ ನಿರ್ಮಾಣ -ಸಚಿವ ನಿತಿನ್‌ ಗಡ್ಕರಿ

ಬಂದರು ಸಂಪರ್ಕಕ್ಕಾಗಿ ಮತ್ತು ಧಾರ್ಮಿಕ ಪ್ರವಾಸೋದ್ಯಮಕ್ಕಾಗಿ 3 ಸಾವಿರ ಕಿಲೋ ಮೀಟರ್‌ಗಿಂತ  ಹೆಚ್ಚಿನ…

14 hours ago