Advertisement
ಸುದ್ದಿಗಳು

ದಿನದಿಂದ ದಿನಕ್ಕೆ ಏರುತ್ತಿದೆ ಕೋವಿಡ್ ಪ್ರಕರಣಗಳು | 24 ಗಂಟೆಗಳಲ್ಲಿ 1,573 ಕೊರೋನಾ ವೈರಸ್ ಸೋಂಕು ಪತ್ತೆ..!

Share

ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿರುವುದು ಆತಂಕ ಸೃಷ್ಟಿ ಮಾಡಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 1,573 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 10,981ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ದಿನವೊಂದರಲ್ಲಿ ಕೇರಳದಲ್ಲಿ ನಾಲ್ವರು ಕೋವಿಡ್‌ನಿಂದ ಸಾವಿಗೀಡಾಗಿದ್ದು, ಈವರೆಗೆ ಒಟ್ಟು 5,30,841 ಮಂದಿ ಮೃತಪಟ್ಟಿದ್ದಾರೆ.

ದೈನಂದಿನ ಪಾಸಿಟಿವಿಟಿ ದರ ಶೇ 1.30ರಷ್ಟಿದೆ ಮತ್ತು ವಾರದ ಪಾಸಿಟಿವಿಟಿ ದರ ಶೇ 1.47 ರಷ್ಟಿದೆ. ಈವರೆಗೆ ದೇಶದಾದ್ಯಂತ ಒಟ್ಟು ಸೋಂಕಿತರ ಸಂಖ್ಯೆ 4,47,07,525ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ.

ದೈನಂದಿನ ಮರಣ ಪ್ರಮಾಣ ಶೇ 1.19 ರಷ್ಟಿದೆ. ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.02 ರಷ್ಟು ಸಕ್ರಿಯ ಪ್ರಕರಣಗಳಿದ್ದರೆ, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.79 ರಷ್ಟಿದೆ. ದೇಶದಲ್ಲಿ ಒಟ್ಟಾರೆ 4,41,65,703 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸಚಿವಾಲಯದ ವೆಬ್‌ಸೈಟಿನಲ್ಲಿ ನೀಡಿರುವ ಮಾಹಿತಿ ಪ್ರಕಾರ, ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ 220.65 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

1 hour ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

2 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

14 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

17 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

23 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

1 day ago