ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿರುವುದು ಆತಂಕ ಸೃಷ್ಟಿ ಮಾಡಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 1,573 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 10,981ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.
ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ದಿನವೊಂದರಲ್ಲಿ ಕೇರಳದಲ್ಲಿ ನಾಲ್ವರು ಕೋವಿಡ್ನಿಂದ ಸಾವಿಗೀಡಾಗಿದ್ದು, ಈವರೆಗೆ ಒಟ್ಟು 5,30,841 ಮಂದಿ ಮೃತಪಟ್ಟಿದ್ದಾರೆ.
ದೈನಂದಿನ ಪಾಸಿಟಿವಿಟಿ ದರ ಶೇ 1.30ರಷ್ಟಿದೆ ಮತ್ತು ವಾರದ ಪಾಸಿಟಿವಿಟಿ ದರ ಶೇ 1.47 ರಷ್ಟಿದೆ. ಈವರೆಗೆ ದೇಶದಾದ್ಯಂತ ಒಟ್ಟು ಸೋಂಕಿತರ ಸಂಖ್ಯೆ 4,47,07,525ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ.
ದೈನಂದಿನ ಮರಣ ಪ್ರಮಾಣ ಶೇ 1.19 ರಷ್ಟಿದೆ. ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.02 ರಷ್ಟು ಸಕ್ರಿಯ ಪ್ರಕರಣಗಳಿದ್ದರೆ, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.79 ರಷ್ಟಿದೆ. ದೇಶದಲ್ಲಿ ಒಟ್ಟಾರೆ 4,41,65,703 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸಚಿವಾಲಯದ ವೆಬ್ಸೈಟಿನಲ್ಲಿ ನೀಡಿರುವ ಮಾಹಿತಿ ಪ್ರಕಾರ, ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ 220.65 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್ಗಳನ್ನು ವಿತರಿಸಲಾಗಿದೆ.
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…