Advertisement
ಸುದ್ದಿಗಳು

17 ಮಂದಿ ಅನರ್ಹ ಶಾಸಕರಿಗೆ ರಿಲೀಫ್ : ಚುನಾವಣೆಗೆ ಸ್ಫರ್ಧೆಗೆ ಅವಕಾಶ : ನಾಳೆ ಬಿಜೆಪಿಗೆ ಸೇರ್ಪಡೆ

Share

ಬೆಂಗಳೂರು: 17 ಮಂದಿ ಅನರ್ಹ ಶಾಸಕರಿಗೆ  ರಿಲೀಫ್ ಸಿಕ್ಕಿದೆ. ಉಪಚುನಾವಣೆಗೆ ಸ್ಪರ್ಧಿಸಬಹುದು ಎಂದು ಸುಪ್ರೀಂ ಕೋರ್ಟ್  ತೀರ್ಪು ಪ್ರಕಟಿಸಿದೆ. ಇದರ ಬೆನ್ನಲ್ಲೇ ಎಲ್ಲಾ 17 ಮಂದಿ ನಾಳೆ ಬೆಳಗ್ಗೆ ಬಿಜೆಪಿಗೆ ಸೇರ್ಪಡೆಗೊಳ್ಳುತ್ತಾರೆ ಎಂದು ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ  ಹೇಳಿದ್ದಾರೆ.

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅನರ್ಹ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾ. ಎನ್.ವಿ. ರಮಣ, ನ್ಯಾ. ಸಂಜೀವ್ ಖನ್ನಾ, ನ್ಯಾ. ಕೃಷ್ಣ ಮುರಾರಿ ನೇತೃತ್ವದ ಪೀಠ ಬುಧವಾರ  ಆದೇಶ ಪ್ರಕಟಿಸಿದೆ. 17 ಮಂದಿ ಶಾಸಕರನ್ನು ಅನರ್ಹ ಮಾಡಿದ ಸ್ಪೀಕರ್ ನಿರ್ಧಾರ ಸರಿ. ಆದರೆ ವಿಧಾನಸಭೆ ಅವಧಿ ಮುಗಿಯವರೆಗೆ ಅನರ್ಹ ಮಾಡಿದ ಸ್ಪೀಕರ್ ನಿರ್ಧಾರ ಸರಿಯಲ್ಲ. ಹೀಗಾಗಿ ಅನರ್ಹ ಶಾಸಕರು ಚುನಾವಣೆಗೆ ಸ್ಪರ್ಧಿಸಬಹುದು ಎಂದು ತೀರ್ಪು ನೀಡಿದೆ. ಮರು ಚುನಾವಣೆಯಲ್ಲಿ ಆಯ್ಕೆಯಾಗದ ಹೊರತು ಸರ್ಕಾರದಲ್ಲಿ ಯಾವುದೇ ಅಧಿಕಾರ ಹೊಂದುವಂತಿಲ್ಲ ಎಂದು ತಿಳಿಸಿದೆ.

ಈ ತೀರ್ಪು ಪ್ರಕಟದ ಬಳಿಕ ಎಲ್ಲಾ 17 ಅನರ್ಹ ಶಾಸಕರು ನವೆಂಬರ್ 14ರಂದು ಬಿಜೆಪಿ ಸೇರಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ ಅವರು ಹೇಳಿದ್ದಾರೆ. ಅನರ್ಹ ಶಾಸಕರು ಬಿಜೆಪಿ ಸೇರಲು ಆಸಕ್ತಿ ತೋರಿಸುತ್ತಿದ್ದು, ಈ ಸಂಬಂಧ ಈಗಾಗಲೇ ನಮ್ಮ ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಿದ್ದಾರೆ. ಅವರನ್ನು ಪಕ್ಷಕ್ಕೆ ಸ್ವಾಗತಿಸಲಾಗುತ್ತಿದೆ ಎಂದು  ಹೇಳಿದ್ದಾರೆ. ನಾವೆಲ್ಲರೂ ಬಿಜೆಪಿಗೆ ಸೇರ್ಪಡೆಯಾಗುತ್ತೇವೆ ಎಂದು ಅನರ್ಹ ಶಾಸಕ ನಾರಾಯಣಗೌಡ , ಬಿ.ಸಿ ಪಾಟೀಲ್, ರಮೇಶ್ ಜಾರಕಿಹೊಳಿ ಮಾಧ್ಯಮದ ಮುಂದೆ ಹೇಳಿದ್ದಾರೆ.

17 ಮಂದಿ ಶಾಸಕರು ರಾಜೀನಾಮೆ ನೀಡುವ ಮೂಲಕ ಸರಕಾರವನ್ನು  ಬೀಳಿಸಿದ್ದರು. ಆ ಸಂದರ್ಭ ಬಿಜೆಪಿಗೂ ನಮಗೂ ಯಾವುದೇ ಸಂಬಂಧ ಇಲ್ಲ ಎಂದೂ ಹೇಳಿದ್ದರು.

 

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

5 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

12 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

16 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

24 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

24 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

1 day ago