Advertisement
ಸುದ್ದಿಗಳು

17 ಮಂದಿ ಅನರ್ಹ ಶಾಸಕರಿಗೆ ರಿಲೀಫ್ : ಚುನಾವಣೆಗೆ ಸ್ಫರ್ಧೆಗೆ ಅವಕಾಶ : ನಾಳೆ ಬಿಜೆಪಿಗೆ ಸೇರ್ಪಡೆ

Share

ಬೆಂಗಳೂರು: 17 ಮಂದಿ ಅನರ್ಹ ಶಾಸಕರಿಗೆ  ರಿಲೀಫ್ ಸಿಕ್ಕಿದೆ. ಉಪಚುನಾವಣೆಗೆ ಸ್ಪರ್ಧಿಸಬಹುದು ಎಂದು ಸುಪ್ರೀಂ ಕೋರ್ಟ್  ತೀರ್ಪು ಪ್ರಕಟಿಸಿದೆ. ಇದರ ಬೆನ್ನಲ್ಲೇ ಎಲ್ಲಾ 17 ಮಂದಿ ನಾಳೆ ಬೆಳಗ್ಗೆ ಬಿಜೆಪಿಗೆ ಸೇರ್ಪಡೆಗೊಳ್ಳುತ್ತಾರೆ ಎಂದು ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ  ಹೇಳಿದ್ದಾರೆ.

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅನರ್ಹ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾ. ಎನ್.ವಿ. ರಮಣ, ನ್ಯಾ. ಸಂಜೀವ್ ಖನ್ನಾ, ನ್ಯಾ. ಕೃಷ್ಣ ಮುರಾರಿ ನೇತೃತ್ವದ ಪೀಠ ಬುಧವಾರ  ಆದೇಶ ಪ್ರಕಟಿಸಿದೆ. 17 ಮಂದಿ ಶಾಸಕರನ್ನು ಅನರ್ಹ ಮಾಡಿದ ಸ್ಪೀಕರ್ ನಿರ್ಧಾರ ಸರಿ. ಆದರೆ ವಿಧಾನಸಭೆ ಅವಧಿ ಮುಗಿಯವರೆಗೆ ಅನರ್ಹ ಮಾಡಿದ ಸ್ಪೀಕರ್ ನಿರ್ಧಾರ ಸರಿಯಲ್ಲ. ಹೀಗಾಗಿ ಅನರ್ಹ ಶಾಸಕರು ಚುನಾವಣೆಗೆ ಸ್ಪರ್ಧಿಸಬಹುದು ಎಂದು ತೀರ್ಪು ನೀಡಿದೆ. ಮರು ಚುನಾವಣೆಯಲ್ಲಿ ಆಯ್ಕೆಯಾಗದ ಹೊರತು ಸರ್ಕಾರದಲ್ಲಿ ಯಾವುದೇ ಅಧಿಕಾರ ಹೊಂದುವಂತಿಲ್ಲ ಎಂದು ತಿಳಿಸಿದೆ.

ಈ ತೀರ್ಪು ಪ್ರಕಟದ ಬಳಿಕ ಎಲ್ಲಾ 17 ಅನರ್ಹ ಶಾಸಕರು ನವೆಂಬರ್ 14ರಂದು ಬಿಜೆಪಿ ಸೇರಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ ಅವರು ಹೇಳಿದ್ದಾರೆ. ಅನರ್ಹ ಶಾಸಕರು ಬಿಜೆಪಿ ಸೇರಲು ಆಸಕ್ತಿ ತೋರಿಸುತ್ತಿದ್ದು, ಈ ಸಂಬಂಧ ಈಗಾಗಲೇ ನಮ್ಮ ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಿದ್ದಾರೆ. ಅವರನ್ನು ಪಕ್ಷಕ್ಕೆ ಸ್ವಾಗತಿಸಲಾಗುತ್ತಿದೆ ಎಂದು  ಹೇಳಿದ್ದಾರೆ. ನಾವೆಲ್ಲರೂ ಬಿಜೆಪಿಗೆ ಸೇರ್ಪಡೆಯಾಗುತ್ತೇವೆ ಎಂದು ಅನರ್ಹ ಶಾಸಕ ನಾರಾಯಣಗೌಡ , ಬಿ.ಸಿ ಪಾಟೀಲ್, ರಮೇಶ್ ಜಾರಕಿಹೊಳಿ ಮಾಧ್ಯಮದ ಮುಂದೆ ಹೇಳಿದ್ದಾರೆ.

17 ಮಂದಿ ಶಾಸಕರು ರಾಜೀನಾಮೆ ನೀಡುವ ಮೂಲಕ ಸರಕಾರವನ್ನು  ಬೀಳಿಸಿದ್ದರು. ಆ ಸಂದರ್ಭ ಬಿಜೆಪಿಗೂ ನಮಗೂ ಯಾವುದೇ ಸಂಬಂಧ ಇಲ್ಲ ಎಂದೂ ಹೇಳಿದ್ದರು.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

1 day ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

1 day ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

4 days ago