Advertisement
ಸುದ್ದಿಗಳು

17 ಮಂದಿ ಅನರ್ಹ ಶಾಸಕರಿಗೆ ರಿಲೀಫ್ : ಚುನಾವಣೆಗೆ ಸ್ಫರ್ಧೆಗೆ ಅವಕಾಶ : ನಾಳೆ ಬಿಜೆಪಿಗೆ ಸೇರ್ಪಡೆ

Share

ಬೆಂಗಳೂರು: 17 ಮಂದಿ ಅನರ್ಹ ಶಾಸಕರಿಗೆ  ರಿಲೀಫ್ ಸಿಕ್ಕಿದೆ. ಉಪಚುನಾವಣೆಗೆ ಸ್ಪರ್ಧಿಸಬಹುದು ಎಂದು ಸುಪ್ರೀಂ ಕೋರ್ಟ್  ತೀರ್ಪು ಪ್ರಕಟಿಸಿದೆ. ಇದರ ಬೆನ್ನಲ್ಲೇ ಎಲ್ಲಾ 17 ಮಂದಿ ನಾಳೆ ಬೆಳಗ್ಗೆ ಬಿಜೆಪಿಗೆ ಸೇರ್ಪಡೆಗೊಳ್ಳುತ್ತಾರೆ ಎಂದು ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ  ಹೇಳಿದ್ದಾರೆ.

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅನರ್ಹ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾ. ಎನ್.ವಿ. ರಮಣ, ನ್ಯಾ. ಸಂಜೀವ್ ಖನ್ನಾ, ನ್ಯಾ. ಕೃಷ್ಣ ಮುರಾರಿ ನೇತೃತ್ವದ ಪೀಠ ಬುಧವಾರ  ಆದೇಶ ಪ್ರಕಟಿಸಿದೆ. 17 ಮಂದಿ ಶಾಸಕರನ್ನು ಅನರ್ಹ ಮಾಡಿದ ಸ್ಪೀಕರ್ ನಿರ್ಧಾರ ಸರಿ. ಆದರೆ ವಿಧಾನಸಭೆ ಅವಧಿ ಮುಗಿಯವರೆಗೆ ಅನರ್ಹ ಮಾಡಿದ ಸ್ಪೀಕರ್ ನಿರ್ಧಾರ ಸರಿಯಲ್ಲ. ಹೀಗಾಗಿ ಅನರ್ಹ ಶಾಸಕರು ಚುನಾವಣೆಗೆ ಸ್ಪರ್ಧಿಸಬಹುದು ಎಂದು ತೀರ್ಪು ನೀಡಿದೆ. ಮರು ಚುನಾವಣೆಯಲ್ಲಿ ಆಯ್ಕೆಯಾಗದ ಹೊರತು ಸರ್ಕಾರದಲ್ಲಿ ಯಾವುದೇ ಅಧಿಕಾರ ಹೊಂದುವಂತಿಲ್ಲ ಎಂದು ತಿಳಿಸಿದೆ.

ಈ ತೀರ್ಪು ಪ್ರಕಟದ ಬಳಿಕ ಎಲ್ಲಾ 17 ಅನರ್ಹ ಶಾಸಕರು ನವೆಂಬರ್ 14ರಂದು ಬಿಜೆಪಿ ಸೇರಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ ಅವರು ಹೇಳಿದ್ದಾರೆ. ಅನರ್ಹ ಶಾಸಕರು ಬಿಜೆಪಿ ಸೇರಲು ಆಸಕ್ತಿ ತೋರಿಸುತ್ತಿದ್ದು, ಈ ಸಂಬಂಧ ಈಗಾಗಲೇ ನಮ್ಮ ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಿದ್ದಾರೆ. ಅವರನ್ನು ಪಕ್ಷಕ್ಕೆ ಸ್ವಾಗತಿಸಲಾಗುತ್ತಿದೆ ಎಂದು  ಹೇಳಿದ್ದಾರೆ. ನಾವೆಲ್ಲರೂ ಬಿಜೆಪಿಗೆ ಸೇರ್ಪಡೆಯಾಗುತ್ತೇವೆ ಎಂದು ಅನರ್ಹ ಶಾಸಕ ನಾರಾಯಣಗೌಡ , ಬಿ.ಸಿ ಪಾಟೀಲ್, ರಮೇಶ್ ಜಾರಕಿಹೊಳಿ ಮಾಧ್ಯಮದ ಮುಂದೆ ಹೇಳಿದ್ದಾರೆ.

17 ಮಂದಿ ಶಾಸಕರು ರಾಜೀನಾಮೆ ನೀಡುವ ಮೂಲಕ ಸರಕಾರವನ್ನು  ಬೀಳಿಸಿದ್ದರು. ಆ ಸಂದರ್ಭ ಬಿಜೆಪಿಗೂ ನಮಗೂ ಯಾವುದೇ ಸಂಬಂಧ ಇಲ್ಲ ಎಂದೂ ಹೇಳಿದ್ದರು.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಲ್ಯಾಬ್‌ ಟು ಲ್ಯಾಂಡ್ – 13.4 ಕೋಟಿ ರೈತರನ್ನು ತಲುಪಿದ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’

ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…

3 hours ago

‘We the Leaders’ | ಬಿಜೆಪಿಗೆ ವಿದಾಯ ಹೇಳಿದ ಮಾಜಿ ಐಪಿಎಸ್ ಅಧಿಕಾರಿ, ‘ವಿ ದಿ ಲೀಡರ್ಸ್’ ಮೂಲಕ ಹೊಸ ಪಯಣ

ಬಿಜೆಪಿಗೆ ರಾಜೀನಾಮೆ ನೀಡಿರುವ ಅಣ್ಣಾಮಲೈ ‘ವಿ ದಿ ಲೀಡರ್ಸ್’ ಹೆಸರಿನ ಹೊಸ ರಾಜಕೀಯ…

4 hours ago

ಹವಾಮಾನ ವರದಿ | 05-06-2026 | ರಾಜ್ಯದಲ್ಲಿ ಮುಂಗಾರು ಚುರುಕು: ಜೂನ್ 8ರಿಂದ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ, ಜೂನ್ 12 ರಿಂದ ದಕ್ಷಿಣ ಒಳನಾಡಲ್ಲೂ ಮಳೆ ಹೆಚ್ಚಳ

ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ…

8 hours ago

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ

ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…

12 hours ago

ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು

ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…

12 hours ago

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

21 hours ago