ಸರ್ಕಾರಿ ನೌಕರರ ಮುಷ್ಕರಕ್ಕೆ ಮಣಿದ ಸರ್ಕಾರ : ಶೇ 17ರಷ್ಟು ವೇತನ ಹೆಚ್ಚಿಸಿ ಸರ್ಕಾರ ಆದೇಶ : ಮುಷ್ಕರ ತಾತ್ಕಾಲಿಕವಾಗಿ ವಾಪಸ್

March 1, 2023
1:17 PM

ಎಲ್ಲಾ ಸರ್ಕಾರಿ ಕಾರ್ಯಗಳಲ್ಲಿ ವ್ಯತ್ಯಯ ಆಗಿದ್ದನ್ನು ಮನಗಂಡ ಸರ್ಕಾರ, ಸರ್ಕಾರಿ ನೌಕರರ ಮುಷ್ಕರಕ್ಕೆ ಮಣಿದು ಶೇಕಡಾ 17ರಷ್ಟು ವೇತನ ಹೆಚ್ಚಳ ಮಾಡಿ ಆದೇಶಿಸಿದೆ. ಸರ್ಕಾರದ ಈ ನಿರ್ಧಾರವನ್ನು ನೌಕರರ ಸಂಘ ಸ್ವಾಗತಿಸಿದೆ.  ಈ ಮೂಲಕ ಮುಷ್ಕರವನ್ನು ವಾಪಸ್​ ಪಡೆದುಕೊಂಡಿದೆ.

Advertisement
Advertisement

7ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ರಾಜ್ಯಾದ್ಯಂತ ಇಂದು ಮುಷ್ಕರ ಕೈಗೊಂಡಿದ್ದರು. ಇದರಿಂದ ರಾಜ್ಯದಲ್ಲಿ ಸರ್ಕಾರಿ ಸೇವೆಗಳಲ್ಲಿ ವ್ಯತ್ಯಯವಾಗಿದ್ದು ಭಾರೀ ಸಮಸ್ಯೆಗಳು ಎದುರಾಗಿದ್ದವು. ಸದ್ಯ ಈ ಬಗ್ಗೆ ಸಭೆ ನಡೆಸಿ ಅಂತಿಮ ತೀರ್ಮಾನಕ್ಕೆ ಬಂದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯ ನೌಕರರ  ಶೇ.17ರಷ್ಟು ವೇತನ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ. ಶೇ.17ರಷ್ಟು ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಮಧ್ಯಂತರ ಪರಿಹಾರ ಘೋಷಣೆ ಮಾಡಿದರು.

ಮುಷ್ಕರ ಹಿಂಪಡೆದ ರಾಜ್ಯ ಸರ್ಕಾರಿ ನೌಕರರ ಸಂಘ

ಶೇಕಡಾ 17ರಷ್ಟು ವೇತನ ಹೆಚ್ಚಿಸಿ ಸರ್ಕಾರದಿಂದ ಆದೇಶ ಹಿನ್ನೆಲೆ ಮುಷ್ಕರ ಕೈಬಿಟ್ಟಿದ್ದಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಘೋಷಣೆ ಮಾಡಿದೆ. ತಕ್ಷಣದಿಂದಲೇ ಕರ್ತವ್ಯಕ್ಕೆ ಹಾಜರಾಗುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ C.S.ಷಡಕ್ಷರಿ ಸೂಚಿಸಿದ್ದಾರೆ. ಹಾಗೂ ಕರ್ತವ್ಯ ಬಹಿಷ್ಕರಿಸಿದ್ದರಿಂದ ಜನರಿಗೆ ಆಗಿರುವ ತೊಂದರೆಗೆ ಕ್ಷಮೆಯಾಚಿಸಿದ್ದಾರೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ
July 26, 2025
10:25 PM
by: The Rural Mirror ಸುದ್ದಿಜಾಲ
ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ
July 26, 2025
10:13 PM
by: The Rural Mirror ಸುದ್ದಿಜಾಲ
ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ
July 26, 2025
10:05 PM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ
July 26, 2025
9:12 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group