ಎಲ್ಲಾ ಸರ್ಕಾರಿ ಕಾರ್ಯಗಳಲ್ಲಿ ವ್ಯತ್ಯಯ ಆಗಿದ್ದನ್ನು ಮನಗಂಡ ಸರ್ಕಾರ, ಸರ್ಕಾರಿ ನೌಕರರ ಮುಷ್ಕರಕ್ಕೆ ಮಣಿದು ಶೇಕಡಾ 17ರಷ್ಟು ವೇತನ ಹೆಚ್ಚಳ ಮಾಡಿ ಆದೇಶಿಸಿದೆ. ಸರ್ಕಾರದ ಈ ನಿರ್ಧಾರವನ್ನು ನೌಕರರ ಸಂಘ ಸ್ವಾಗತಿಸಿದೆ. ಈ ಮೂಲಕ ಮುಷ್ಕರವನ್ನು ವಾಪಸ್ ಪಡೆದುಕೊಂಡಿದೆ.
7ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ರಾಜ್ಯಾದ್ಯಂತ ಇಂದು ಮುಷ್ಕರ ಕೈಗೊಂಡಿದ್ದರು. ಇದರಿಂದ ರಾಜ್ಯದಲ್ಲಿ ಸರ್ಕಾರಿ ಸೇವೆಗಳಲ್ಲಿ ವ್ಯತ್ಯಯವಾಗಿದ್ದು ಭಾರೀ ಸಮಸ್ಯೆಗಳು ಎದುರಾಗಿದ್ದವು. ಸದ್ಯ ಈ ಬಗ್ಗೆ ಸಭೆ ನಡೆಸಿ ಅಂತಿಮ ತೀರ್ಮಾನಕ್ಕೆ ಬಂದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯ ನೌಕರರ ಶೇ.17ರಷ್ಟು ವೇತನ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ. ಶೇ.17ರಷ್ಟು ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಮಧ್ಯಂತರ ಪರಿಹಾರ ಘೋಷಣೆ ಮಾಡಿದರು.
ಶೇಕಡಾ 17ರಷ್ಟು ವೇತನ ಹೆಚ್ಚಿಸಿ ಸರ್ಕಾರದಿಂದ ಆದೇಶ ಹಿನ್ನೆಲೆ ಮುಷ್ಕರ ಕೈಬಿಟ್ಟಿದ್ದಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಘೋಷಣೆ ಮಾಡಿದೆ. ತಕ್ಷಣದಿಂದಲೇ ಕರ್ತವ್ಯಕ್ಕೆ ಹಾಜರಾಗುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ C.S.ಷಡಕ್ಷರಿ ಸೂಚಿಸಿದ್ದಾರೆ. ಹಾಗೂ ಕರ್ತವ್ಯ ಬಹಿಷ್ಕರಿಸಿದ್ದರಿಂದ ಜನರಿಗೆ ಆಗಿರುವ ತೊಂದರೆಗೆ ಕ್ಷಮೆಯಾಚಿಸಿದ್ದಾರೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…