ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಭಾರತ ಮೂರನೇ ಅತಿದೊಡ್ಡ ರಾಷ್ಟ್ರವಾಗಿದ್ದು, ಹಸಿರು ಪರಿವರ್ತನೆಯಂತಹ ಕ್ಷೇತ್ರದಲ್ಲಿ 2030ರ ವೇಳೆಗೆ 170 ಮಿಲಿಯನ್ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.……..ಮುಂದೆ ಓದಿ…..
ಗುಜರಾತಿನಲ್ಲಿ 5.4 ಗಿಗಾವ್ಯಾಟ್ ಸಾಮರ್ಥ್ಯದ ಸೌರ ಘಟಕವನ್ನು ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ವಿಶ್ವ ಆರ್ಥಿಕ ವೇದಿಕೆ ಬಿಡುಗಡೆ ಮಾಡಿರುವ ಭವಿಷ್ಯದ ಔದ್ಯೋಗಿಕ ವರದಿ 2025ರ ಪ್ರಕಾರ ಹಸಿರು ಇಂಧನ ಪರಿವರ್ತನೆ ಕ್ಷೇತ್ರದಲ್ಲಿ ಜಾಗತಿಕವಾಗಿ ಅತಿ ಹೆಚ್ಚು ಉದ್ಯೋಗ ಸೃಷ್ಟಿಯಾಗಲಿವೆ . 2030ರ ವೇಳೆಗೆ 170 ಮಿಲಿಯನ್ ಉದ್ಯೋಗ ಸೃಷ್ಟಿಯಾಗಲಿದೆ ಎಂದರು. 2014ರಲ್ಲಿ ದೇಶದಲ್ಲಿ ಕೇವಲ 2.82 ಗಿಗಾವ್ಯಾಟ್ ಸೌರಶಕ್ತಿ ಉತ್ಪಾದಿಸಲಾಗುತ್ತಿತ್ತು. ಆದರೆ ಇದೀಗ 104 ಗಿಗಾವ್ಯಾಟ್ ಸೌರಶಕ್ತಿಯನ್ನು ಉತ್ಪಾದಿಸಲಾಗುತ್ತಿದ್ದು, ಶೇ. 3 ಸಾವಿರದ 580 ರಷ್ಟು ಸೌರಶಕ್ತಿ ಉತ್ಬಾದನೆ ಪ್ರಮಾಣ ಹೆಚ್ಚಳವಾಗಿದೆ. ನರೇಂದ್ರ ಮೋದಿ ಅವರು ಪ್ರಧಾನಿ ಆದ ಬಳಿಕ ಪರಿಸರ ಸುಸ್ಧಿರತೆಗೆ ಹೆಚ್ಚಿನ ಆದ್ಯತೆ ನೀಡಿದ್ದು, ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಭಾರತ ವಿಶ್ವ ನಾಯಕನಾಗುವತ್ತ ದಾಪುಗಾಲು ಇಡುತ್ತಿದೆ. 2030ರ ವೇಳೆಗೆ ಭಾರತದಲ್ಲಿ ಸೌರ ಮಾಡ್ಯೂಲ್ ಗಳ ಉತ್ಪಾದನೆಯಲ್ಲಿ 150 ಗಿಗಾವ್ಯಾಟ್ ತಲುಪುವ ವಿಶ್ವಾಸವಿದೆ ಎಂದು ಸಚಿವ ಪ್ರಲ್ದಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…