Advertisement
ಸುದ್ದಿಗಳು

19 ತಿಂಗಳಲ್ಲಿ ಅರೆಭಾಷೆ ಅಕಾಡೆಮಿಯ ಕೆಲಸ ತೃಪ್ತಿದಾಯಕ – ಪಿ.ಸಿ.ಜಯರಾಮ

Share

ಸುಳ್ಯ:ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಮೂರನೇ ಅವಧಿಯಲ್ಲಿ ಕೇವಲ 19 ತಿಂಗಳು ಮಾತ್ರ ಕಾಲಾವಕಾಶ ಸಿಕ್ಕಿತ್ತು. ಈ ಅವಧಿಯಲ್ಲಿ ಮಾಡಿದ ಕೆಲಸ ಕಾರ್ಯಗಳು ತೃಪ್ತಿದಾಯಕವಾಗಿತ್ತು ಎಂದು ಅಕಾಡೆಮಿ ನಿಕಟಪೂರ್ವಾಧ್ಯಕ್ಷ ಪಿ.ಸಿ.ಜಯರಾಮ ಹೇಳಿದ್ದಾರೆ.

ಸುಳ್ಯದ ವೆಂಕಟ್ರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಇನ್ನಷ್ಟು ಸಮಯಾವಕಾಶ ಇರುತ್ತಿದ್ದರೆ ಹಮ್ಮಿಕೊಂಡ ಹಲವಾರು ಯೋಜನೆಗಳು ಪೂರ್ತಿಗೊಳಿಸಬಹುದಿತ್ತು. ಸೀಮಿತ ಅವಧಿಯಲ್ಲಿ ಹಲವು ಕೆಲಸ ಕಾರ್ಯಗಳನ್ನು ನಡೆಸಿದ ತೃಪ್ತಿ ಇದೆ ಎಂದು ಅವರು ಹೇಳಿದರು.

ರಾಷ್ಟ್ರೀಯ ಅರೆಭಾಷೆ ವಿಚಾರ ಸಂಕಿರಣ, ತರಬೇತಿ ಕಮ್ಮಟ, ಅರೆಭಾಷೆ ಸಾಹಿತ್ಯ ಸಮ್ಮೇಳನ, ಶ್ರೀ ವೆಂಕಟರಮಣ ದೇವರ ಘನ ಹರಿಸೇವೆ ದಾಖಲೀಕರಣ, ಅರೆಭಾಷೆ ಕಥೆಗಳ ಸಿ.ಡಿ ನಿರ್ಮಾಣ ಯೋಜನೆ, ಶಾಲಾ ಕಾಲೇಜುಗಳಲ್ಲಿ ಅರೆಭಾಷೆ ಕಾರ್ಯಕ್ರಮ, ಶಾಲಾ ಗ್ರಂಥಾಲಯಗಳಿಗೆ ಪುಸ್ತಕಗಳ ಕೊಡುಗೆ, ಪುಸ್ತಕಗಳ ಪ್ರಕಟಣೆ, ಮಂಗಳೂರು ವಿಶ್ವವಿದ್ಯಾಲಯದಲ್ಲಿ ಅರೆಭಾಷೆಗೆ ಮಾನ್ಯತೆ, ಆಕಾಶವಾಣಿಯಲ್ಲಿ ಅರೆಭಾಷೆ ಕಾರ್ಯಕ್ರಮ ಯೋಜನೆ, ತ್ರೈಮಾಸಿಕ ಪತ್ರಿಕೆ ಹಿಂಗಾರದ ಚಂದಾದಾರರು ವೃದ್ಧಿ, ಅರೆಭಾಷೆ ಸಂಸ್ಕೃತಿ ಕಲಾಗ್ರಾಮ ನಿರ್ಮಾಣ ಯೋಜನೆ ಹಾಗೂ ಅರೆಭಾಷೆ ಅಧ್ಯಯನ ಪೀಠ ಸ್ಥಾಪನೆಗೆ ಪ್ರಯತ್ನ, ಅರೆಭಾಷೆ ಗೌರವ ಪ್ರಶಸ್ತಿ, ಅರೆಭಾಷೆ ಫೆಲೋಷಿಪ್, ಮೊದಲಾದ ಅನೇಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಅಕಾಡೆಮಿಯ ನಿಕಟಪೂರ್ವ ಸದಸ್ಯರಾದ ಎ.ಕೆ.ಹಿಮಕರ, ದಿನೇಶ್ ಹಾಲೆಮಜಲು, ಕೆ.ಟಿ.ವಿಶ್ವನಾಥ, ತಿರುಮಲೇಶ್ವರಿ ಜಾಲ್ಸೂರು, ಸುರೇಶ ಎಂ.ಎಚ್., ಯತೀಶ್‌ಕುಮಾರ್ ಗೌಡ, ಬಾರಿಯಂಡ ಜೋಯಪ್ಪ, ಕಡ್ಲೇರ ತುಳಸಿ ಮೋಹನ್, ಕಾಣೆಹಿತ್ಲು ಮೊಣ್ಣಪ್ಪ, ಕುಂಬುಗೌಡನ ಪ್ರಸನ್ನ, ದೇವರಾಜ ಬೇಕಲ್ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

2 days ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

2 days ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

2 days ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

2 days ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

2 days ago