Advertisement
ಸುದ್ದಿಗಳು

19 ತಿಂಗಳಲ್ಲಿ ಅರೆಭಾಷೆ ಅಕಾಡೆಮಿಯ ಕೆಲಸ ತೃಪ್ತಿದಾಯಕ – ಪಿ.ಸಿ.ಜಯರಾಮ

Share

ಸುಳ್ಯ:ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಮೂರನೇ ಅವಧಿಯಲ್ಲಿ ಕೇವಲ 19 ತಿಂಗಳು ಮಾತ್ರ ಕಾಲಾವಕಾಶ ಸಿಕ್ಕಿತ್ತು. ಈ ಅವಧಿಯಲ್ಲಿ ಮಾಡಿದ ಕೆಲಸ ಕಾರ್ಯಗಳು ತೃಪ್ತಿದಾಯಕವಾಗಿತ್ತು ಎಂದು ಅಕಾಡೆಮಿ ನಿಕಟಪೂರ್ವಾಧ್ಯಕ್ಷ ಪಿ.ಸಿ.ಜಯರಾಮ ಹೇಳಿದ್ದಾರೆ.

ಸುಳ್ಯದ ವೆಂಕಟ್ರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಇನ್ನಷ್ಟು ಸಮಯಾವಕಾಶ ಇರುತ್ತಿದ್ದರೆ ಹಮ್ಮಿಕೊಂಡ ಹಲವಾರು ಯೋಜನೆಗಳು ಪೂರ್ತಿಗೊಳಿಸಬಹುದಿತ್ತು. ಸೀಮಿತ ಅವಧಿಯಲ್ಲಿ ಹಲವು ಕೆಲಸ ಕಾರ್ಯಗಳನ್ನು ನಡೆಸಿದ ತೃಪ್ತಿ ಇದೆ ಎಂದು ಅವರು ಹೇಳಿದರು.

ರಾಷ್ಟ್ರೀಯ ಅರೆಭಾಷೆ ವಿಚಾರ ಸಂಕಿರಣ, ತರಬೇತಿ ಕಮ್ಮಟ, ಅರೆಭಾಷೆ ಸಾಹಿತ್ಯ ಸಮ್ಮೇಳನ, ಶ್ರೀ ವೆಂಕಟರಮಣ ದೇವರ ಘನ ಹರಿಸೇವೆ ದಾಖಲೀಕರಣ, ಅರೆಭಾಷೆ ಕಥೆಗಳ ಸಿ.ಡಿ ನಿರ್ಮಾಣ ಯೋಜನೆ, ಶಾಲಾ ಕಾಲೇಜುಗಳಲ್ಲಿ ಅರೆಭಾಷೆ ಕಾರ್ಯಕ್ರಮ, ಶಾಲಾ ಗ್ರಂಥಾಲಯಗಳಿಗೆ ಪುಸ್ತಕಗಳ ಕೊಡುಗೆ, ಪುಸ್ತಕಗಳ ಪ್ರಕಟಣೆ, ಮಂಗಳೂರು ವಿಶ್ವವಿದ್ಯಾಲಯದಲ್ಲಿ ಅರೆಭಾಷೆಗೆ ಮಾನ್ಯತೆ, ಆಕಾಶವಾಣಿಯಲ್ಲಿ ಅರೆಭಾಷೆ ಕಾರ್ಯಕ್ರಮ ಯೋಜನೆ, ತ್ರೈಮಾಸಿಕ ಪತ್ರಿಕೆ ಹಿಂಗಾರದ ಚಂದಾದಾರರು ವೃದ್ಧಿ, ಅರೆಭಾಷೆ ಸಂಸ್ಕೃತಿ ಕಲಾಗ್ರಾಮ ನಿರ್ಮಾಣ ಯೋಜನೆ ಹಾಗೂ ಅರೆಭಾಷೆ ಅಧ್ಯಯನ ಪೀಠ ಸ್ಥಾಪನೆಗೆ ಪ್ರಯತ್ನ, ಅರೆಭಾಷೆ ಗೌರವ ಪ್ರಶಸ್ತಿ, ಅರೆಭಾಷೆ ಫೆಲೋಷಿಪ್, ಮೊದಲಾದ ಅನೇಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಅಕಾಡೆಮಿಯ ನಿಕಟಪೂರ್ವ ಸದಸ್ಯರಾದ ಎ.ಕೆ.ಹಿಮಕರ, ದಿನೇಶ್ ಹಾಲೆಮಜಲು, ಕೆ.ಟಿ.ವಿಶ್ವನಾಥ, ತಿರುಮಲೇಶ್ವರಿ ಜಾಲ್ಸೂರು, ಸುರೇಶ ಎಂ.ಎಚ್., ಯತೀಶ್‌ಕುಮಾರ್ ಗೌಡ, ಬಾರಿಯಂಡ ಜೋಯಪ್ಪ, ಕಡ್ಲೇರ ತುಳಸಿ ಮೋಹನ್, ಕಾಣೆಹಿತ್ಲು ಮೊಣ್ಣಪ್ಪ, ಕುಂಬುಗೌಡನ ಪ್ರಸನ್ನ, ದೇವರಾಜ ಬೇಕಲ್ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

16 minutes ago

ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ

ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…

25 minutes ago

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

10 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

10 hours ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

11 hours ago

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್‌ 14 ಅಥವಾ 15ರಿಂದ ಹಲವೆಡೆ…

19 hours ago