1912 ಬಗ್ಗೆ ಮೆಸ್ಕಾಂ ಸಿಬಂದಿಗಳಿಗೆ ತರಬೇತಿ

May 1, 2019
12:10 PM

ಸುಳ್ಯ: ವಿವಿಧ ಮಾಧ್ಯಮಗಳ ಮೂಲಕ ಮೆಸ್ಕಾಂ ಗ್ರಾಹಕರ ಸೇವಾ ಕೇಂದ್ರ 1912 ಸೌಲಭ್ಯದ  ಬಗ್ಗೆ ವಿವಿಧ ಭಾಗಗಳಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡುವ ಉದ್ದೇಶ ಹೊಂದಲಾಗಿದೆ ಎಂದು ಸ್ಕಾಡಾ ಮತ್ತು ಕೇಂದಿಕೃತ ಗ್ರಾಹಕರ ಸೇವಾ ಕೇಂದ್ರದ ಅಧೀಕ್ಷಕ ಎಂಜಿನಿಯರ್ ಪಿ.ಡಿ.ಬಿ.ರಾವ್ ಹೇಳಿದರು.

Advertisement

ಅವರು ತಾ.ಪಂ.ಸಭಾಂಗಣದಲ್ಲಿ ಮಂಗಳವಾರ ಸ್ಕಾಡಾ ಮತ್ತು ಕೇಂದಿಕೃತ ಗ್ರಾಹಕರ ಸೇವಾ ಕೇಂದ್ರ 1912 ಕುರಿತು ಮೆಸ್ಕಾಂ ಸುಳ್ಯ ಉಪ ವಿಭಾಗದ ಅಧಿಕಾರಿ ನೌಕರರುಗಳಿಗೆ ನಡೆದ ತರಬೇತಿ ಕಾರ್ಯಕ್ರಮದಲ್ಲಿ  ಮಾಹಿತಿ ನೀಡಿದರು.

ಬಿಎಸ್‍ಎನ್‍ಎಲ್ ನೆಟ್‍ವರ್ಕ್ ಇಲ್ಲದೆ ಸೇವಾ ಕೇಂದ್ರದ ದೂರವಾಣಿ ಸಂಪರ್ಕ ಸಾಧ್ಯವಾಗದ ಬಗ್ಗೆ ನೌಕರರು ಪ್ರಸ್ತಾವಿಸಿದರು. ಇಂತಹ ಸಮಸ್ಯೆ ಇರುವುದು ನಿಜ. ಆದರೆ ನೆಟ್‍ವರ್ಕ್ ಇಲ್ಲದ ಕಡೆ ಸಂವಹನ ಕಷ್ಟ. ಆದರೆ ಲಭ್ಯ ಇರುವ ಕಡೆ ಸಮರ್ಪಕ ಸೇವೆ ನೀಡಲು ಆ ಸಂಸ್ಥೆಗೆ ಮನವಿ ಮಾಡಲಾಗಿದೆ ಎಂದು ಪಿಡಿಬಿ ರಾವ್ ಹೇಳಿದರು.

ಕರೆ ಮಾಡುವ ಗ್ರಾಹಕರು ಸಮಸ್ಯೆ ಕುರಿತು ಸಮರ್ಪಕ ಮಾಹಿತಿ ನೀಡಬೇಕು. ಶೇ. 99 ಪ್ರಕರಣಗಳಲ್ಲಿ ಸೂಕ್ತ ಮಾಹಿತಿ ದಾಖಲಿಸಲು ಸಾಧ್ಯವಿದೆ. ಶೇ.1 ರಷ್ಟು ಮಾಹಿತಿ ನೀಡಲು ಸಾಧ್ಯವಿಲ್ಲದ ಸಂದರ್ಭ ಇರಬಹುದಷ್ಟೆ. ಕರೆ ಮಾಡಿದ ಗ್ರಾಹಕರು ಸಮಸ್ಯೆ ಇರುವ ವ್ಯಾಪ್ತಿಯ ಆರ್ ಆರ್ ನಂಬರ್, ಪ್ರದೇಶದ ಬಗ್ಗೆ ಮಾಹಿತಿ ಕೊಡಬೇಕು. ಬಳಿಕ ಅದನ್ನು ಸಂಬಂಧಿಸಿದ ಮೆಸ್ಕಾಂ ವಿಭಾಗಕ್ಕೆ ವರ್ಗಾಯಿಸಲಾಗುತ್ತದೆ. ಸಾಪ್ಟ್ ವೇರ್ ಕೂಡ ಅದೇ ತರಹ ಇದ್ದು, ವಾರ್ಡ್ ಪ್ರಕಾರವೇ ಅಪ್ಲೋಡ್ ಮಾಡುವ ನಿಯಮವಿದೆ ಎಂದು ಪಿ.ಡಿ.ಬಿ.ರಾವ್ ಹೇಳಿದರು.

ಈ ಸಂದರ್ಭದಲ್ಲಿ ಸ್ಕಾಡಾ ಮತ್ತು ಕೇಂದಿಕೃತ ಗ್ರಾಹಕರ ಸೇವಾ ಕೇಂದ್ರದ ಸಹಾಯಕ ಎಂಜಿನಿಯರ್ ನಂದ ಕುಮಾರ್, ಸುಳ್ಯ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಹರೀಶ್ ನಾಯ್ಕ ಮೊದಲಾದವರು ಉಪಸ್ಥಿತರಿದ್ದರು.

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಶಿಗಳಿಗೆ ಲಕ್ಷ್ಮಿದೇವಿ ಆಶೀರ್ವಾದದಿಂದ ಅಪಾರ ಸಂಪತ್ತು ಪ್ರಾಪ್ತಿ | ಏನು ಮಾಡ್ಬೇಕು? |
May 12, 2025
7:32 AM
by: ದ ರೂರಲ್ ಮಿರರ್.ಕಾಂ
ಕದನ ವಿರಾಮ ಬಳಿಕ ಪರಿಸ್ಧಿತಿ ಸಾಮಾನ್ಯ ಸ್ಧಿತಿಗೆ | ಶಾಂತಿ ಸ್ಧಾಪನೆಯ ಉದ್ದೇಶಕ್ಕೆ ಪೂರಕ ವಾತಾವರಣ
May 11, 2025
10:11 PM
by: The Rural Mirror ಸುದ್ದಿಜಾಲ
ಮುಳಿಯ ಕೃಷಿಗೋಷ್ಟಿ | ಕೃಷಿಕರೇ ಕೃಷಿ ಮಾರುಕಟ್ಟೆ ಸೃಷ್ಟಿಸಿಕೊಳ್ಳುವುದು ಹೇಗೆ..?
May 11, 2025
9:54 PM
by: The Rural Mirror ಸುದ್ದಿಜಾಲ
ಈ ರಾಶಿಯವರಿಗೆ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ…!
May 11, 2025
7:21 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group