Advertisement
ಸುದ್ದಿಗಳು

1912 ಬಗ್ಗೆ ಮೆಸ್ಕಾಂ ಸಿಬಂದಿಗಳಿಗೆ ತರಬೇತಿ

Share

ಸುಳ್ಯ: ವಿವಿಧ ಮಾಧ್ಯಮಗಳ ಮೂಲಕ ಮೆಸ್ಕಾಂ ಗ್ರಾಹಕರ ಸೇವಾ ಕೇಂದ್ರ 1912 ಸೌಲಭ್ಯದ  ಬಗ್ಗೆ ವಿವಿಧ ಭಾಗಗಳಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡುವ ಉದ್ದೇಶ ಹೊಂದಲಾಗಿದೆ ಎಂದು ಸ್ಕಾಡಾ ಮತ್ತು ಕೇಂದಿಕೃತ ಗ್ರಾಹಕರ ಸೇವಾ ಕೇಂದ್ರದ ಅಧೀಕ್ಷಕ ಎಂಜಿನಿಯರ್ ಪಿ.ಡಿ.ಬಿ.ರಾವ್ ಹೇಳಿದರು.

ಅವರು ತಾ.ಪಂ.ಸಭಾಂಗಣದಲ್ಲಿ ಮಂಗಳವಾರ ಸ್ಕಾಡಾ ಮತ್ತು ಕೇಂದಿಕೃತ ಗ್ರಾಹಕರ ಸೇವಾ ಕೇಂದ್ರ 1912 ಕುರಿತು ಮೆಸ್ಕಾಂ ಸುಳ್ಯ ಉಪ ವಿಭಾಗದ ಅಧಿಕಾರಿ ನೌಕರರುಗಳಿಗೆ ನಡೆದ ತರಬೇತಿ ಕಾರ್ಯಕ್ರಮದಲ್ಲಿ  ಮಾಹಿತಿ ನೀಡಿದರು.

ಬಿಎಸ್‍ಎನ್‍ಎಲ್ ನೆಟ್‍ವರ್ಕ್ ಇಲ್ಲದೆ ಸೇವಾ ಕೇಂದ್ರದ ದೂರವಾಣಿ ಸಂಪರ್ಕ ಸಾಧ್ಯವಾಗದ ಬಗ್ಗೆ ನೌಕರರು ಪ್ರಸ್ತಾವಿಸಿದರು. ಇಂತಹ ಸಮಸ್ಯೆ ಇರುವುದು ನಿಜ. ಆದರೆ ನೆಟ್‍ವರ್ಕ್ ಇಲ್ಲದ ಕಡೆ ಸಂವಹನ ಕಷ್ಟ. ಆದರೆ ಲಭ್ಯ ಇರುವ ಕಡೆ ಸಮರ್ಪಕ ಸೇವೆ ನೀಡಲು ಆ ಸಂಸ್ಥೆಗೆ ಮನವಿ ಮಾಡಲಾಗಿದೆ ಎಂದು ಪಿಡಿಬಿ ರಾವ್ ಹೇಳಿದರು.

ಕರೆ ಮಾಡುವ ಗ್ರಾಹಕರು ಸಮಸ್ಯೆ ಕುರಿತು ಸಮರ್ಪಕ ಮಾಹಿತಿ ನೀಡಬೇಕು. ಶೇ. 99 ಪ್ರಕರಣಗಳಲ್ಲಿ ಸೂಕ್ತ ಮಾಹಿತಿ ದಾಖಲಿಸಲು ಸಾಧ್ಯವಿದೆ. ಶೇ.1 ರಷ್ಟು ಮಾಹಿತಿ ನೀಡಲು ಸಾಧ್ಯವಿಲ್ಲದ ಸಂದರ್ಭ ಇರಬಹುದಷ್ಟೆ. ಕರೆ ಮಾಡಿದ ಗ್ರಾಹಕರು ಸಮಸ್ಯೆ ಇರುವ ವ್ಯಾಪ್ತಿಯ ಆರ್ ಆರ್ ನಂಬರ್, ಪ್ರದೇಶದ ಬಗ್ಗೆ ಮಾಹಿತಿ ಕೊಡಬೇಕು. ಬಳಿಕ ಅದನ್ನು ಸಂಬಂಧಿಸಿದ ಮೆಸ್ಕಾಂ ವಿಭಾಗಕ್ಕೆ ವರ್ಗಾಯಿಸಲಾಗುತ್ತದೆ. ಸಾಪ್ಟ್ ವೇರ್ ಕೂಡ ಅದೇ ತರಹ ಇದ್ದು, ವಾರ್ಡ್ ಪ್ರಕಾರವೇ ಅಪ್ಲೋಡ್ ಮಾಡುವ ನಿಯಮವಿದೆ ಎಂದು ಪಿ.ಡಿ.ಬಿ.ರಾವ್ ಹೇಳಿದರು.

ಈ ಸಂದರ್ಭದಲ್ಲಿ ಸ್ಕಾಡಾ ಮತ್ತು ಕೇಂದಿಕೃತ ಗ್ರಾಹಕರ ಸೇವಾ ಕೇಂದ್ರದ ಸಹಾಯಕ ಎಂಜಿನಿಯರ್ ನಂದ ಕುಮಾರ್, ಸುಳ್ಯ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಹರೀಶ್ ನಾಯ್ಕ ಮೊದಲಾದವರು ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

6 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

7 hours ago

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

17 hours ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

18 hours ago