Advertisement
ಸುದ್ದಿಗಳು

1912 ಬಗ್ಗೆ ಮೆಸ್ಕಾಂ ಸಿಬಂದಿಗಳಿಗೆ ತರಬೇತಿ

Share

ಸುಳ್ಯ: ವಿವಿಧ ಮಾಧ್ಯಮಗಳ ಮೂಲಕ ಮೆಸ್ಕಾಂ ಗ್ರಾಹಕರ ಸೇವಾ ಕೇಂದ್ರ 1912 ಸೌಲಭ್ಯದ  ಬಗ್ಗೆ ವಿವಿಧ ಭಾಗಗಳಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡುವ ಉದ್ದೇಶ ಹೊಂದಲಾಗಿದೆ ಎಂದು ಸ್ಕಾಡಾ ಮತ್ತು ಕೇಂದಿಕೃತ ಗ್ರಾಹಕರ ಸೇವಾ ಕೇಂದ್ರದ ಅಧೀಕ್ಷಕ ಎಂಜಿನಿಯರ್ ಪಿ.ಡಿ.ಬಿ.ರಾವ್ ಹೇಳಿದರು.

ಅವರು ತಾ.ಪಂ.ಸಭಾಂಗಣದಲ್ಲಿ ಮಂಗಳವಾರ ಸ್ಕಾಡಾ ಮತ್ತು ಕೇಂದಿಕೃತ ಗ್ರಾಹಕರ ಸೇವಾ ಕೇಂದ್ರ 1912 ಕುರಿತು ಮೆಸ್ಕಾಂ ಸುಳ್ಯ ಉಪ ವಿಭಾಗದ ಅಧಿಕಾರಿ ನೌಕರರುಗಳಿಗೆ ನಡೆದ ತರಬೇತಿ ಕಾರ್ಯಕ್ರಮದಲ್ಲಿ  ಮಾಹಿತಿ ನೀಡಿದರು.

ಬಿಎಸ್‍ಎನ್‍ಎಲ್ ನೆಟ್‍ವರ್ಕ್ ಇಲ್ಲದೆ ಸೇವಾ ಕೇಂದ್ರದ ದೂರವಾಣಿ ಸಂಪರ್ಕ ಸಾಧ್ಯವಾಗದ ಬಗ್ಗೆ ನೌಕರರು ಪ್ರಸ್ತಾವಿಸಿದರು. ಇಂತಹ ಸಮಸ್ಯೆ ಇರುವುದು ನಿಜ. ಆದರೆ ನೆಟ್‍ವರ್ಕ್ ಇಲ್ಲದ ಕಡೆ ಸಂವಹನ ಕಷ್ಟ. ಆದರೆ ಲಭ್ಯ ಇರುವ ಕಡೆ ಸಮರ್ಪಕ ಸೇವೆ ನೀಡಲು ಆ ಸಂಸ್ಥೆಗೆ ಮನವಿ ಮಾಡಲಾಗಿದೆ ಎಂದು ಪಿಡಿಬಿ ರಾವ್ ಹೇಳಿದರು.

ಕರೆ ಮಾಡುವ ಗ್ರಾಹಕರು ಸಮಸ್ಯೆ ಕುರಿತು ಸಮರ್ಪಕ ಮಾಹಿತಿ ನೀಡಬೇಕು. ಶೇ. 99 ಪ್ರಕರಣಗಳಲ್ಲಿ ಸೂಕ್ತ ಮಾಹಿತಿ ದಾಖಲಿಸಲು ಸಾಧ್ಯವಿದೆ. ಶೇ.1 ರಷ್ಟು ಮಾಹಿತಿ ನೀಡಲು ಸಾಧ್ಯವಿಲ್ಲದ ಸಂದರ್ಭ ಇರಬಹುದಷ್ಟೆ. ಕರೆ ಮಾಡಿದ ಗ್ರಾಹಕರು ಸಮಸ್ಯೆ ಇರುವ ವ್ಯಾಪ್ತಿಯ ಆರ್ ಆರ್ ನಂಬರ್, ಪ್ರದೇಶದ ಬಗ್ಗೆ ಮಾಹಿತಿ ಕೊಡಬೇಕು. ಬಳಿಕ ಅದನ್ನು ಸಂಬಂಧಿಸಿದ ಮೆಸ್ಕಾಂ ವಿಭಾಗಕ್ಕೆ ವರ್ಗಾಯಿಸಲಾಗುತ್ತದೆ. ಸಾಪ್ಟ್ ವೇರ್ ಕೂಡ ಅದೇ ತರಹ ಇದ್ದು, ವಾರ್ಡ್ ಪ್ರಕಾರವೇ ಅಪ್ಲೋಡ್ ಮಾಡುವ ನಿಯಮವಿದೆ ಎಂದು ಪಿ.ಡಿ.ಬಿ.ರಾವ್ ಹೇಳಿದರು.

ಈ ಸಂದರ್ಭದಲ್ಲಿ ಸ್ಕಾಡಾ ಮತ್ತು ಕೇಂದಿಕೃತ ಗ್ರಾಹಕರ ಸೇವಾ ಕೇಂದ್ರದ ಸಹಾಯಕ ಎಂಜಿನಿಯರ್ ನಂದ ಕುಮಾರ್, ಸುಳ್ಯ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಹರೀಶ್ ನಾಯ್ಕ ಮೊದಲಾದವರು ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

10 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

11 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago