Advertisement
ಸುದ್ದಿಗಳು

1912 ಬಗ್ಗೆ ಮೆಸ್ಕಾಂ ಸಿಬಂದಿಗಳಿಗೆ ತರಬೇತಿ

Share

ಸುಳ್ಯ: ವಿವಿಧ ಮಾಧ್ಯಮಗಳ ಮೂಲಕ ಮೆಸ್ಕಾಂ ಗ್ರಾಹಕರ ಸೇವಾ ಕೇಂದ್ರ 1912 ಸೌಲಭ್ಯದ  ಬಗ್ಗೆ ವಿವಿಧ ಭಾಗಗಳಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡುವ ಉದ್ದೇಶ ಹೊಂದಲಾಗಿದೆ ಎಂದು ಸ್ಕಾಡಾ ಮತ್ತು ಕೇಂದಿಕೃತ ಗ್ರಾಹಕರ ಸೇವಾ ಕೇಂದ್ರದ ಅಧೀಕ್ಷಕ ಎಂಜಿನಿಯರ್ ಪಿ.ಡಿ.ಬಿ.ರಾವ್ ಹೇಳಿದರು.

ಅವರು ತಾ.ಪಂ.ಸಭಾಂಗಣದಲ್ಲಿ ಮಂಗಳವಾರ ಸ್ಕಾಡಾ ಮತ್ತು ಕೇಂದಿಕೃತ ಗ್ರಾಹಕರ ಸೇವಾ ಕೇಂದ್ರ 1912 ಕುರಿತು ಮೆಸ್ಕಾಂ ಸುಳ್ಯ ಉಪ ವಿಭಾಗದ ಅಧಿಕಾರಿ ನೌಕರರುಗಳಿಗೆ ನಡೆದ ತರಬೇತಿ ಕಾರ್ಯಕ್ರಮದಲ್ಲಿ  ಮಾಹಿತಿ ನೀಡಿದರು.

ಬಿಎಸ್‍ಎನ್‍ಎಲ್ ನೆಟ್‍ವರ್ಕ್ ಇಲ್ಲದೆ ಸೇವಾ ಕೇಂದ್ರದ ದೂರವಾಣಿ ಸಂಪರ್ಕ ಸಾಧ್ಯವಾಗದ ಬಗ್ಗೆ ನೌಕರರು ಪ್ರಸ್ತಾವಿಸಿದರು. ಇಂತಹ ಸಮಸ್ಯೆ ಇರುವುದು ನಿಜ. ಆದರೆ ನೆಟ್‍ವರ್ಕ್ ಇಲ್ಲದ ಕಡೆ ಸಂವಹನ ಕಷ್ಟ. ಆದರೆ ಲಭ್ಯ ಇರುವ ಕಡೆ ಸಮರ್ಪಕ ಸೇವೆ ನೀಡಲು ಆ ಸಂಸ್ಥೆಗೆ ಮನವಿ ಮಾಡಲಾಗಿದೆ ಎಂದು ಪಿಡಿಬಿ ರಾವ್ ಹೇಳಿದರು.

ಕರೆ ಮಾಡುವ ಗ್ರಾಹಕರು ಸಮಸ್ಯೆ ಕುರಿತು ಸಮರ್ಪಕ ಮಾಹಿತಿ ನೀಡಬೇಕು. ಶೇ. 99 ಪ್ರಕರಣಗಳಲ್ಲಿ ಸೂಕ್ತ ಮಾಹಿತಿ ದಾಖಲಿಸಲು ಸಾಧ್ಯವಿದೆ. ಶೇ.1 ರಷ್ಟು ಮಾಹಿತಿ ನೀಡಲು ಸಾಧ್ಯವಿಲ್ಲದ ಸಂದರ್ಭ ಇರಬಹುದಷ್ಟೆ. ಕರೆ ಮಾಡಿದ ಗ್ರಾಹಕರು ಸಮಸ್ಯೆ ಇರುವ ವ್ಯಾಪ್ತಿಯ ಆರ್ ಆರ್ ನಂಬರ್, ಪ್ರದೇಶದ ಬಗ್ಗೆ ಮಾಹಿತಿ ಕೊಡಬೇಕು. ಬಳಿಕ ಅದನ್ನು ಸಂಬಂಧಿಸಿದ ಮೆಸ್ಕಾಂ ವಿಭಾಗಕ್ಕೆ ವರ್ಗಾಯಿಸಲಾಗುತ್ತದೆ. ಸಾಪ್ಟ್ ವೇರ್ ಕೂಡ ಅದೇ ತರಹ ಇದ್ದು, ವಾರ್ಡ್ ಪ್ರಕಾರವೇ ಅಪ್ಲೋಡ್ ಮಾಡುವ ನಿಯಮವಿದೆ ಎಂದು ಪಿ.ಡಿ.ಬಿ.ರಾವ್ ಹೇಳಿದರು.

ಈ ಸಂದರ್ಭದಲ್ಲಿ ಸ್ಕಾಡಾ ಮತ್ತು ಕೇಂದಿಕೃತ ಗ್ರಾಹಕರ ಸೇವಾ ಕೇಂದ್ರದ ಸಹಾಯಕ ಎಂಜಿನಿಯರ್ ನಂದ ಕುಮಾರ್, ಸುಳ್ಯ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಹರೀಶ್ ನಾಯ್ಕ ಮೊದಲಾದವರು ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿದ್ಯಾರ್ಥಿ- ರೈತರ ವಾಕಥಾನ್ | ಪ್ರಕೃತಿ, ಯುವಜನತೆ ಮತ್ತು ಆರ್ಥಿಕತೆ – ಜೂನ್ 14 ರಂದು ಬೆಂಗಳೂರಿನಲ್ಲಿ ವಿಶೇಷ ಕಾರ್ಯಕ್ರಮ

ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಜೂನ್ 14 ರಂದು "ಸ್ಟೂಡೆಂಟ್ಸ್ ಫಾರ್ಮರ್ಸ್ ವಾಕಥಾನ್ "…

4 hours ago

ಕಾಳುಮೆಣಸು ಬೆಳೆಗಾರರಿಗೆ ಸಿಹಿ ಸುದ್ದಿ – ಜೂನ್ ಅಂತ್ಯದೊಳಗೆ ಪೆಪ್ಪರ್ ಫ್ಯೂಚರ್ಸ್ ಮರುಪ್ರಾರಂಭಕ್ಕೆ NCDEX ಸಜ್ಜು

ಸುಮಾರು ಒಂದು ದಶಕದ ಬಳಿಕ NCDEX ಕಾಳುಮೆಣಸು ಫ್ಯೂಚರ್ಸ್ ವಹಿವಾಟನ್ನು ಜೂನ್ ಅಂತ್ಯದೊಳಗೆ…

11 hours ago

ಕೇರಳಂನಲ್ಲಿ ಶಿಗೆಲ್ಲಾ ಆತಂಕ – ಕೊಲ್ಲಂನಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಸೋಂಕು ದೃಢ, ಆರೋಗ್ಯ ಇಲಾಖೆ ಅಲರ್ಟ್!

ವಯನಾಡಿನಲ್ಲಿ ಮತ್ತೊಂದು ಶಿಗೆಲ್ಲಾ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಮಕ್ಕಳಲ್ಲಿ ಸೋಂಕು…

11 hours ago

ರಬ್ಬರ್ ಕ್ಷೇತ್ರಕ್ಕೆ ಹೊಸ ಅವಕಾಶ – ಈಗ ಅಸ್ಸಾಂ ದೇಶದ ಮೂರನೇ ಅತಿದೊಡ್ಡ ರಬ್ಬರ್ ಉತ್ಪಾದಕ ರಾಜ್ಯ

ಕೇರಳ ಮತ್ತು ತ್ರಿಪುರ ನಂತರ ಅಸ್ಸಾಂ ದೇಶದ ಮೂರನೇ ಅತಿದೊಡ್ಡ ರಬ್ಬರ್ ಉತ್ಪಾದಕ…

22 hours ago

ನಕಲಿ ಹೆಲಿಕಾಪ್ಟರ್ ಬುಕ್ಕಿಂಗ್ ಜಾಲ ಭೇದಿಸಿದ ದೆಹಲಿ ಪೊಲೀಸರು, ಮೂವರು ಬಂಧನ

ಹೆಲಿಕಾಪ್ಟರ್ ಟಿಕೆಟ್ ಬುಕ್ಕಿಂಗ್ ಹೆಸರಿನಲ್ಲಿ ಲಕ್ಷಾಂತರ ವಂಚನೆ ನಡೆಸಿದ ಜಾಲವನ್ನು ದೆಹಲಿ ಪೊಲೀಸರು…

22 hours ago