Advertisement
ಸುದ್ದಿಗಳು

1912 ಬಗ್ಗೆ ಮೆಸ್ಕಾಂ ಸಿಬಂದಿಗಳಿಗೆ ತರಬೇತಿ

Share

ಸುಳ್ಯ: ವಿವಿಧ ಮಾಧ್ಯಮಗಳ ಮೂಲಕ ಮೆಸ್ಕಾಂ ಗ್ರಾಹಕರ ಸೇವಾ ಕೇಂದ್ರ 1912 ಸೌಲಭ್ಯದ  ಬಗ್ಗೆ ವಿವಿಧ ಭಾಗಗಳಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡುವ ಉದ್ದೇಶ ಹೊಂದಲಾಗಿದೆ ಎಂದು ಸ್ಕಾಡಾ ಮತ್ತು ಕೇಂದಿಕೃತ ಗ್ರಾಹಕರ ಸೇವಾ ಕೇಂದ್ರದ ಅಧೀಕ್ಷಕ ಎಂಜಿನಿಯರ್ ಪಿ.ಡಿ.ಬಿ.ರಾವ್ ಹೇಳಿದರು.

ಅವರು ತಾ.ಪಂ.ಸಭಾಂಗಣದಲ್ಲಿ ಮಂಗಳವಾರ ಸ್ಕಾಡಾ ಮತ್ತು ಕೇಂದಿಕೃತ ಗ್ರಾಹಕರ ಸೇವಾ ಕೇಂದ್ರ 1912 ಕುರಿತು ಮೆಸ್ಕಾಂ ಸುಳ್ಯ ಉಪ ವಿಭಾಗದ ಅಧಿಕಾರಿ ನೌಕರರುಗಳಿಗೆ ನಡೆದ ತರಬೇತಿ ಕಾರ್ಯಕ್ರಮದಲ್ಲಿ  ಮಾಹಿತಿ ನೀಡಿದರು.

Advertisement

ಬಿಎಸ್‍ಎನ್‍ಎಲ್ ನೆಟ್‍ವರ್ಕ್ ಇಲ್ಲದೆ ಸೇವಾ ಕೇಂದ್ರದ ದೂರವಾಣಿ ಸಂಪರ್ಕ ಸಾಧ್ಯವಾಗದ ಬಗ್ಗೆ ನೌಕರರು ಪ್ರಸ್ತಾವಿಸಿದರು. ಇಂತಹ ಸಮಸ್ಯೆ ಇರುವುದು ನಿಜ. ಆದರೆ ನೆಟ್‍ವರ್ಕ್ ಇಲ್ಲದ ಕಡೆ ಸಂವಹನ ಕಷ್ಟ. ಆದರೆ ಲಭ್ಯ ಇರುವ ಕಡೆ ಸಮರ್ಪಕ ಸೇವೆ ನೀಡಲು ಆ ಸಂಸ್ಥೆಗೆ ಮನವಿ ಮಾಡಲಾಗಿದೆ ಎಂದು ಪಿಡಿಬಿ ರಾವ್ ಹೇಳಿದರು.

ಕರೆ ಮಾಡುವ ಗ್ರಾಹಕರು ಸಮಸ್ಯೆ ಕುರಿತು ಸಮರ್ಪಕ ಮಾಹಿತಿ ನೀಡಬೇಕು. ಶೇ. 99 ಪ್ರಕರಣಗಳಲ್ಲಿ ಸೂಕ್ತ ಮಾಹಿತಿ ದಾಖಲಿಸಲು ಸಾಧ್ಯವಿದೆ. ಶೇ.1 ರಷ್ಟು ಮಾಹಿತಿ ನೀಡಲು ಸಾಧ್ಯವಿಲ್ಲದ ಸಂದರ್ಭ ಇರಬಹುದಷ್ಟೆ. ಕರೆ ಮಾಡಿದ ಗ್ರಾಹಕರು ಸಮಸ್ಯೆ ಇರುವ ವ್ಯಾಪ್ತಿಯ ಆರ್ ಆರ್ ನಂಬರ್, ಪ್ರದೇಶದ ಬಗ್ಗೆ ಮಾಹಿತಿ ಕೊಡಬೇಕು. ಬಳಿಕ ಅದನ್ನು ಸಂಬಂಧಿಸಿದ ಮೆಸ್ಕಾಂ ವಿಭಾಗಕ್ಕೆ ವರ್ಗಾಯಿಸಲಾಗುತ್ತದೆ. ಸಾಪ್ಟ್ ವೇರ್ ಕೂಡ ಅದೇ ತರಹ ಇದ್ದು, ವಾರ್ಡ್ ಪ್ರಕಾರವೇ ಅಪ್ಲೋಡ್ ಮಾಡುವ ನಿಯಮವಿದೆ ಎಂದು ಪಿ.ಡಿ.ಬಿ.ರಾವ್ ಹೇಳಿದರು.

Advertisement

ಈ ಸಂದರ್ಭದಲ್ಲಿ ಸ್ಕಾಡಾ ಮತ್ತು ಕೇಂದಿಕೃತ ಗ್ರಾಹಕರ ಸೇವಾ ಕೇಂದ್ರದ ಸಹಾಯಕ ಎಂಜಿನಿಯರ್ ನಂದ ಕುಮಾರ್, ಸುಳ್ಯ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಹರೀಶ್ ನಾಯ್ಕ ಮೊದಲಾದವರು ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂಕುಸಿತ ಎಚ್ಚರಿಕೆ: ಸಾರ್ವಜನಿಕರು ಎಚ್ಚರ ವಹಿಸಲು ಸೂಚನೆ

ರಾಜ್ಯದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಜುಲೈ 5ರಿಂದ 9ರವರೆಗೆ ಒಂದು ಅಥವಾ ಎರಡು…

15 hours ago

ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…

1 day ago

ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…

1 day ago

ಗ್ರಾಮಸಭೆಗೆ ಜನ ಯಾಕೆ ಬರುತ್ತಿಲ್ಲ? ಗ್ರಾಮಸಭೆಗಳು ಔಪಚಾರಿಕತೆಗೆ ಸೀಮಿತವೇ?

ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…

2 days ago