Advertisement
ರಾಷ್ಟ್ರೀಯ

2 ನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ : ದೇಶಾದ್ಯಂತ ಸಂಭ್ರಮ, ಸಡಗರ

Share

ನವದೆಹಲಿ : 68 ವರ್ಷದ ನರೇಂದ್ರ ದಾಮೋದರ ದಾಸ್ ಮೋದಿ ಭಾರತದ ಪ್ರಧಾನಮಂತ್ರಿಯಾಗಿ ಎರಡನೇ ಬಾರಿಗೆ ಗುರುವಾರ ಸಂಜೆ 7 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಮಾಡಿದರು. ಇನ್ನೀಗ ನಮೋ 2.0 ಸರಕಾರ.

 

 

ರಾಷ್ಟ್ರಪತಿ ಭವನದ ರೈಸಿನಾ ಹಿಲ್ಸ್ ನಲ್ಲಿ  ನರೇಂದ್ರ ಮೋದಿ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಮಾಣ ವಚನ ಬೋಧಿಸಿದರು. ‘ನವ ಭಾರತ’ ನಿರ್ಮಾಣಕ್ಕೆ ಸಿದ್ಧವಾಗಿರುವ ಮೋದಿ ಅವರು ತಮ್ಮ ಹೊಸ ಸಚಿವ ಸಂಪುಟವನ್ನೂ ಇದೇ ಬಾರಿಗೆ ರಚಿಸಿಕೊಂಡರು. ಏಪ್ರಿಲ್ 11 ರಿಂದ ಮೇ  19 ರವರೆಗೆ ಏಳು ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟ 352 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಅದರಲ್ಲೂ ಬಿಜೆಪಿ ಅತ್ಯಧಿಕ ಸ್ಥಾನ ಪಡೆಯಿತು.

 

 

ಪ್ರಮಾಣ ವಚನ ಕಾರ್ಯಕ್ರಮಕ್ಕೂ ಮುನ್ನ ಇಂದು ಮುಂಜಾನೆ ದೆಹಲಿಯಲ್ಲಿ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಸ್ವಾತಂತ್ರ್ಯ ನಂತರ ಹುತಾತ್ಮರಾದ ಯೋಧರಿಗೆ ನರೇಂದ್ರ ಮೋದಿ ಪುಷ್ಪ ನಮನ ಸಲ್ಲಿಸಿದರು. ಮಹಾತ್ಮಾ ಗಾಂಧಿ ಮತ್ತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಸಮಾಧಿ ಬಳಿ ತೆರಳಿ ಅಗಲಿದ ಹಿರಿಯ ಗಣ್ಯರಿಗೆ ಗೌರವ ನಮನ ಸಲ್ಲಿಸಿದರು.

 

 

ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಸುಮಾರು  8 ಸಾವಿರಕ್ಕೂ ಹೆಚ್ಚು ಅತಿಥಿಗಳು ಭಾಗವಹಿಸಿದ್ದರು. ಪೇಜಾವರ ಶ್ರೀ, ಮಂತ್ರಾಲಯ ಶ್ರೀ , ಆದಿಚುಂಚನಗಿರಿ ಶ್ರೀಗಳು ಸೇರಿದಂತೆ ರಾಜ್ಯದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಅನೇಕ ಗಣ್ಯರು ರಾಜ್ಯದಿಂದ ಭಾಗವಹಿಸಿದ್ದರು.

ಸಚಿವರಾಗಿ ರಾಜನಾಥ ಸಿಂಗ್,  ಅಮಿತ್ ಷಾ,  ನಿತಿನ್ ಗಡ್ಕರಿ ,  ಡಿ.ವಿ.ಸದಾನಂದ ಗೌಡ , ನಿರ್ಮಲಾ ಸೀತಾರಾಮನ್ , ರಾಮ್ ವಿಲಾಸ್ ಪಾಸ್ವಾನ್ , ರವಿ ಶಂಕರ್ ಪ್ರಸಾದ್,  ಸೇರಿದಂತೆ ವಿವಿಧ ಸಂಸದರು  ಪ್ರಮಾಣವಚನ ಸ್ವೀಕರಿಸಿದರು.

 

 

 

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

9 hours ago

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

20 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

1 day ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

1 day ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

2 days ago