ನವದೆಹಲಿ : 68 ವರ್ಷದ ನರೇಂದ್ರ ದಾಮೋದರ ದಾಸ್ ಮೋದಿ ಭಾರತದ ಪ್ರಧಾನಮಂತ್ರಿಯಾಗಿ ಎರಡನೇ ಬಾರಿಗೆ ಗುರುವಾರ ಸಂಜೆ 7 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಮಾಡಿದರು. ಇನ್ನೀಗ ನಮೋ 2.0 ಸರಕಾರ.
ರಾಷ್ಟ್ರಪತಿ ಭವನದ ರೈಸಿನಾ ಹಿಲ್ಸ್ ನಲ್ಲಿ ನರೇಂದ್ರ ಮೋದಿ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಮಾಣ ವಚನ ಬೋಧಿಸಿದರು. ‘ನವ ಭಾರತ’ ನಿರ್ಮಾಣಕ್ಕೆ ಸಿದ್ಧವಾಗಿರುವ ಮೋದಿ ಅವರು ತಮ್ಮ ಹೊಸ ಸಚಿವ ಸಂಪುಟವನ್ನೂ ಇದೇ ಬಾರಿಗೆ ರಚಿಸಿಕೊಂಡರು. ಏಪ್ರಿಲ್ 11 ರಿಂದ ಮೇ 19 ರವರೆಗೆ ಏಳು ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟ 352 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಅದರಲ್ಲೂ ಬಿಜೆಪಿ ಅತ್ಯಧಿಕ ಸ್ಥಾನ ಪಡೆಯಿತು.
ಪ್ರಮಾಣ ವಚನ ಕಾರ್ಯಕ್ರಮಕ್ಕೂ ಮುನ್ನ ಇಂದು ಮುಂಜಾನೆ ದೆಹಲಿಯಲ್ಲಿ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಸ್ವಾತಂತ್ರ್ಯ ನಂತರ ಹುತಾತ್ಮರಾದ ಯೋಧರಿಗೆ ನರೇಂದ್ರ ಮೋದಿ ಪುಷ್ಪ ನಮನ ಸಲ್ಲಿಸಿದರು. ಮಹಾತ್ಮಾ ಗಾಂಧಿ ಮತ್ತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಸಮಾಧಿ ಬಳಿ ತೆರಳಿ ಅಗಲಿದ ಹಿರಿಯ ಗಣ್ಯರಿಗೆ ಗೌರವ ನಮನ ಸಲ್ಲಿಸಿದರು.
ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಸುಮಾರು 8 ಸಾವಿರಕ್ಕೂ ಹೆಚ್ಚು ಅತಿಥಿಗಳು ಭಾಗವಹಿಸಿದ್ದರು. ಪೇಜಾವರ ಶ್ರೀ, ಮಂತ್ರಾಲಯ ಶ್ರೀ , ಆದಿಚುಂಚನಗಿರಿ ಶ್ರೀಗಳು ಸೇರಿದಂತೆ ರಾಜ್ಯದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಅನೇಕ ಗಣ್ಯರು ರಾಜ್ಯದಿಂದ ಭಾಗವಹಿಸಿದ್ದರು.
ಸಚಿವರಾಗಿ ರಾಜನಾಥ ಸಿಂಗ್, ಅಮಿತ್ ಷಾ, ನಿತಿನ್ ಗಡ್ಕರಿ , ಡಿ.ವಿ.ಸದಾನಂದ ಗೌಡ , ನಿರ್ಮಲಾ ಸೀತಾರಾಮನ್ , ರಾಮ್ ವಿಲಾಸ್ ಪಾಸ್ವಾನ್ , ರವಿ ಶಂಕರ್ ಪ್ರಸಾದ್, ಸೇರಿದಂತೆ ವಿವಿಧ ಸಂಸದರು ಪ್ರಮಾಣವಚನ ಸ್ವೀಕರಿಸಿದರು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…