ಈ ಬಾರಿ ಮಾರ್ಚ್ ಕೊನೆಯ ವಾರದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗುವ ನಿರೀಕ್ಷೆ ಇದೆ.ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕವಾಗಿದೆ. ಈ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದರು.
ಅಲ್ಲದೇ, ಅಕ್ಟೋಬರ್, ನವೆಂಬರ್, ಡಿಸೆಂಬರ್ನಲ್ಲಿ ಕಡಿಮೆ ಮಳೆಯಾಗಲಿದ್ದು, ಪೂರ್ವ ಮುಂಗಾರಿನಲ್ಲಿ ಮಳೆ ಅಧಿಕವಾಗುವ ಸಾಧ್ಯತೆ ಇದೆ ಎಂದು ಹೇಳಿದರು. ರಾಜ್ಯದ 13 ಜಲಾಶಯಗಳಲ್ಲಿ 538.9 ಟಿಎಂಸಿ ನೀರು ಲಭ್ಯವಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ333.8 ಟಿಎಂಸಿ ನೀರು ಮಾತ್ರ ಲಭ್ಯವಿತ್ತು ಎಂದು ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದರು.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

