Advertisement
ಸುದ್ದಿಗಳು

ಜ.30 ರಂದು ಹುತಾತ್ಮರ ದಿನಾಚರಣೆ | ಬೆಳಿಗ್ಗೆ 11 ಗಂಟೆಗೆ ರಾಜ್ಯದೆಲ್ಲೆಡೆ ಎರಡು ನಿಮಿಷಗಳ ಕಾಲ ಮೌನ

Share

ದೇಶದ ಸ್ವಾತಂತ್ರ ಸಂಗ್ರಾಮದಲ್ಲಿ ಹುತಾತ್ಮರಾದವರ ಜ್ಞಾಪಕಾರ್ಥವಾಗಿ ಪ್ರತಿ ವರ್ಷದ ಜನವರಿ 30 ರಂದು ಹುತಾತ್ಮರ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಅದರಂತೆ 2023ರ ಜ.30ರ ಮೌನ ಆಚರಣೆಗೆ ಕೇಂದ್ರ ಸರ್ಕಾರದ ಸೂಚನೆಯಂತೆ  ಸೂಚನೆಗಳನ್ನು ಪ್ರಕಟಿಸಲಾಗಿದೆ. ಜ. 30ರ ಬೆಳಿಗ್ಗೆ 11 ಗಂಟೆಗೆ ರಾಜ್ಯದಲ್ಲಿಡೆ ಎರಡು ನಿಮಿಷಗಳ ಕಾಲ ಮೌನ ಆಚರಿಸಲಾಗುತ್ತಿದೆ.

ಎಲ್ಲಿ ಸೈರನ್ ಗಳು ಅಥವಾ ಸೈನಿಕರ ಬಂದೂಕುಗಳು ಲಭ್ಯವಿದೆಯೋ ಅಲ್ಲಿ ಎರಡು ನಿಮಿಷಗಳ ಮೌನ ಆಚರಣೆಯ ಕಾಲವನ್ನು ಪ್ರಾರಂಭ ಮತ್ತು ಮುಕ್ತಾಯಕ್ಕೆ ಸೈರನ್ ಅಥವಾ ಸೈನಿಕರ ಬಂದುಗಳ ಶಬ್ದದ ಮೂಲಕ ಎರಡು ನಿಮಿಷಗಳ ಮೌನ ಆಚರಣೆಗೆ ಬೆಳಗ್ಗೆ 10:58 ರಿಂದ 11 ಗಂಟೆವರೆಗೆ ಸೈರನ್ ಅಥವಾ ಬಂದೂಕು ಶಬ್ದ ಮಾಡಿಸುವುದು ಹಾಗೂ ಎರಡು ನಿಮಿಷಗಳ ಮೌನ ಆಚರಣೆಯ ನಂತರ ಪುನಃ 11.02 ರಿಂದ 11.03 ನಿಮಿಷದವರೆಗೆ ಸೈರನ್ ಅಥವಾ ಬಂದೂಕು ಶಬ್ದವನ್ನು ಮಾಡಿಸುವುದು ಈ ಪದ್ಧತಿಯನ್ನು ಸೈರನ್ ಅಥವಾ ಬಂದೂಕು ಸೌಲ್ಯಭ್ಯವಿರುವ ಕಡೆ ಅಳವಡಿಸಿಕೊಳ್ಳಬೇಕು.

Advertisement

ಸಾಧ್ಯವಾಗುವಂತಹ ಸಂದರ್ಭದಲ್ಲಿ ಎಲ್ಲರೂ ಒಂದೆಡೆ ಮೌನವನ್ನು ಆಚರಿಸಬೇಕು. ಆದಾಗ್ಯೂ ಇದು ಕೆಲಸ ಕಾರ್ಯಗಳಿಗೆ ತೀವ್ರ ತೊಂದರೆ ಆಗುವಂತಿದ್ದರೆ ಮೇಲೆ ತಿಳಿಸಿದಂತೆ ಒಂದೇ ಸ್ಥಳದಲ್ಲಿ ಸೇರಲು ಪುಯತ್ನಸದೇ ಇರಬಹುದು. ಸಂಕೇತ ವ್ಯವಸ್ಥೆ ಇರದಂತಹ ಪ್ರದೇಶದಲ್ಲಿ ಬೆಳಗೆ, 11 ಗಂಟೆಗೆ 2 ನಿಮಿಷಗಳ ಮೌನ ಆಚರಿಸಲು ಸಂಬಂಧಪಟ್ಟವರಿಗೆಲ್ಲ ಸೂಕ್ತ ನಿರ್ದೇಶನವನ್ನು ಕಳುಹಿಸಬೇಕು.  ಹುತಾತ್ಮರ ದಿನಾಚರಣೆಯನ್ನು ತಪ್ಪದೇ ಅಚರಿಸಬೇಕಾಗಿರುವುದರಿಂದ, ಈ ಉದ್ದೇಶಕ್ಕಾಗಿ ಸೂಚಿಸಲಾಗಿರುವ ಕ್ರಮಗಳನ್ನು ಕೈಗೊಳ್ಳಲು ತಿಳಿಸಲಾಗಿದೆ.

ಹುತಾತ್ಮರ ದಿನವನ್ನು ಪೂರ್ಣ ಪಾವಿತ್ರತೆ ಮತ್ತು ಯೋಗ್ಯವಾದ ರೀತಿಯಲ್ಲಿ ಆಚರಿಸಲು ರಾಜ್ಯದ ಎಲ್ಲಾ ವಿದ್ಯಾ ಸಂಸ್ಥೆಗಳಿಗೆ ಸೂಚನೆ ನೀಡಬೇಕು. ಈ ದಿನದ ವಿಶೇಷತ್ಯಕ್ಕೆ ಸಂಬಂಧಿಸಿದಂತೆ ಭಾಷಣಗಳನ್ನು ಅದರಲ್ಲೂ ವಿಶೇಷವಾಗಿ ಭಾರತದ ಸ್ವಾತಂತ್ರ್ಯದಲ್ಲಿ ಸ್ವಾತಂತ್ರ ಹೋರಾಟಗಾರರ ಪಾತ್ರವನ್ನು ತಿಳಿಸುವ ಭಾಷಣ/ ಚರ್ಚೆಗಳನ್ನು ಏರ್ಪಡಿಸಬೇಕು. ಈ ಭಾಷಣಗಳ ಮುಖ್ಯಾಂಶಗಳಲ್ಲಿ ಕಷ್ಟಪಟ್ಟು ಗಳಿಸಿದ ಸ್ವಾತಂತ್ರ್ಯವನ್ನು ಉಳಿಸುವುದು, ಸಂರಕ್ಷಿಸುವುದು ಮತ್ತು ಶ್ರೀಮಂತಗೊಳಿಸುವುದಲ್ಲದೆ, ರಾಷ್ಟ್ರದ ಐಕ್ಯತೆಯನ್ನು ಉತ್ತೇಜಿಸುವುದು ಮತ್ತು ಒಂದೇ ಗುರಿಗಳು ಮತ್ತು ಆದರ್ಶಗಳಿಗೆ ಬದ್ಧರಾಗುವ ಅಂಶಗಳನ್ನೊಳಗೊಂಡಿರಬೇಕು.

Advertisement

ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಹುತಾತ್ಮರಾದವರ ಪಾತ್ರ ಮತ್ತು ರಾಷ್ಟ್ರೀಯ ಐಕ್ಯತೆಯ ಮೂಲ ಉದ್ದೇಶಗಳು ಇರುವ ಸಾಂಸ್ಕೃತಿಕ ಕಾರ್ಯಕ್ರಮಗಳ / ಡಾಕ್ಯುಮೆಂಟರಿ ಚಿತ್ರ ಪದರ್ಶನಗಳ ಏರ್ಪಾಡುಗಳನ್ನು ರಾಜ್ಯದ ಪ್ರಚಾರ ಘಟಕಗಳು ಮಾಡಬಹುದು. ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಎಲ್ಲಾ ಪ್ರಾದೇಶಿಕ ಆಯುಕ್ತರು, ಇಲಾಖಾ ಮುಖ್ಯಸ್ಥರು, ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತಿತರೆ ಸಂಬಂಧಪಟ್ಟ ಅಧಿಕಾರಿಗಳು ಈ ನಿರ್ದೇಶನಗಳನ್ನು ತಕ್ಕುದಾದ ರೀತಿಯಲ್ಲಿ ಅನುಸರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

12 hours ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

21 hours ago

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

2 days ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

2 days ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

2 days ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

2 days ago