Advertisement
ಸುದ್ದಿಗಳು

ಜ.30 ರಂದು ಹುತಾತ್ಮರ ದಿನಾಚರಣೆ | ಬೆಳಿಗ್ಗೆ 11 ಗಂಟೆಗೆ ರಾಜ್ಯದೆಲ್ಲೆಡೆ ಎರಡು ನಿಮಿಷಗಳ ಕಾಲ ಮೌನ

Share

ದೇಶದ ಸ್ವಾತಂತ್ರ ಸಂಗ್ರಾಮದಲ್ಲಿ ಹುತಾತ್ಮರಾದವರ ಜ್ಞಾಪಕಾರ್ಥವಾಗಿ ಪ್ರತಿ ವರ್ಷದ ಜನವರಿ 30 ರಂದು ಹುತಾತ್ಮರ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಅದರಂತೆ 2023ರ ಜ.30ರ ಮೌನ ಆಚರಣೆಗೆ ಕೇಂದ್ರ ಸರ್ಕಾರದ ಸೂಚನೆಯಂತೆ  ಸೂಚನೆಗಳನ್ನು ಪ್ರಕಟಿಸಲಾಗಿದೆ. ಜ. 30ರ ಬೆಳಿಗ್ಗೆ 11 ಗಂಟೆಗೆ ರಾಜ್ಯದಲ್ಲಿಡೆ ಎರಡು ನಿಮಿಷಗಳ ಕಾಲ ಮೌನ ಆಚರಿಸಲಾಗುತ್ತಿದೆ.

Advertisement

ಎಲ್ಲಿ ಸೈರನ್ ಗಳು ಅಥವಾ ಸೈನಿಕರ ಬಂದೂಕುಗಳು ಲಭ್ಯವಿದೆಯೋ ಅಲ್ಲಿ ಎರಡು ನಿಮಿಷಗಳ ಮೌನ ಆಚರಣೆಯ ಕಾಲವನ್ನು ಪ್ರಾರಂಭ ಮತ್ತು ಮುಕ್ತಾಯಕ್ಕೆ ಸೈರನ್ ಅಥವಾ ಸೈನಿಕರ ಬಂದುಗಳ ಶಬ್ದದ ಮೂಲಕ ಎರಡು ನಿಮಿಷಗಳ ಮೌನ ಆಚರಣೆಗೆ ಬೆಳಗ್ಗೆ 10:58 ರಿಂದ 11 ಗಂಟೆವರೆಗೆ ಸೈರನ್ ಅಥವಾ ಬಂದೂಕು ಶಬ್ದ ಮಾಡಿಸುವುದು ಹಾಗೂ ಎರಡು ನಿಮಿಷಗಳ ಮೌನ ಆಚರಣೆಯ ನಂತರ ಪುನಃ 11.02 ರಿಂದ 11.03 ನಿಮಿಷದವರೆಗೆ ಸೈರನ್ ಅಥವಾ ಬಂದೂಕು ಶಬ್ದವನ್ನು ಮಾಡಿಸುವುದು ಈ ಪದ್ಧತಿಯನ್ನು ಸೈರನ್ ಅಥವಾ ಬಂದೂಕು ಸೌಲ್ಯಭ್ಯವಿರುವ ಕಡೆ ಅಳವಡಿಸಿಕೊಳ್ಳಬೇಕು.

ಸಾಧ್ಯವಾಗುವಂತಹ ಸಂದರ್ಭದಲ್ಲಿ ಎಲ್ಲರೂ ಒಂದೆಡೆ ಮೌನವನ್ನು ಆಚರಿಸಬೇಕು. ಆದಾಗ್ಯೂ ಇದು ಕೆಲಸ ಕಾರ್ಯಗಳಿಗೆ ತೀವ್ರ ತೊಂದರೆ ಆಗುವಂತಿದ್ದರೆ ಮೇಲೆ ತಿಳಿಸಿದಂತೆ ಒಂದೇ ಸ್ಥಳದಲ್ಲಿ ಸೇರಲು ಪುಯತ್ನಸದೇ ಇರಬಹುದು. ಸಂಕೇತ ವ್ಯವಸ್ಥೆ ಇರದಂತಹ ಪ್ರದೇಶದಲ್ಲಿ ಬೆಳಗೆ, 11 ಗಂಟೆಗೆ 2 ನಿಮಿಷಗಳ ಮೌನ ಆಚರಿಸಲು ಸಂಬಂಧಪಟ್ಟವರಿಗೆಲ್ಲ ಸೂಕ್ತ ನಿರ್ದೇಶನವನ್ನು ಕಳುಹಿಸಬೇಕು.  ಹುತಾತ್ಮರ ದಿನಾಚರಣೆಯನ್ನು ತಪ್ಪದೇ ಅಚರಿಸಬೇಕಾಗಿರುವುದರಿಂದ, ಈ ಉದ್ದೇಶಕ್ಕಾಗಿ ಸೂಚಿಸಲಾಗಿರುವ ಕ್ರಮಗಳನ್ನು ಕೈಗೊಳ್ಳಲು ತಿಳಿಸಲಾಗಿದೆ.

ಹುತಾತ್ಮರ ದಿನವನ್ನು ಪೂರ್ಣ ಪಾವಿತ್ರತೆ ಮತ್ತು ಯೋಗ್ಯವಾದ ರೀತಿಯಲ್ಲಿ ಆಚರಿಸಲು ರಾಜ್ಯದ ಎಲ್ಲಾ ವಿದ್ಯಾ ಸಂಸ್ಥೆಗಳಿಗೆ ಸೂಚನೆ ನೀಡಬೇಕು. ಈ ದಿನದ ವಿಶೇಷತ್ಯಕ್ಕೆ ಸಂಬಂಧಿಸಿದಂತೆ ಭಾಷಣಗಳನ್ನು ಅದರಲ್ಲೂ ವಿಶೇಷವಾಗಿ ಭಾರತದ ಸ್ವಾತಂತ್ರ್ಯದಲ್ಲಿ ಸ್ವಾತಂತ್ರ ಹೋರಾಟಗಾರರ ಪಾತ್ರವನ್ನು ತಿಳಿಸುವ ಭಾಷಣ/ ಚರ್ಚೆಗಳನ್ನು ಏರ್ಪಡಿಸಬೇಕು. ಈ ಭಾಷಣಗಳ ಮುಖ್ಯಾಂಶಗಳಲ್ಲಿ ಕಷ್ಟಪಟ್ಟು ಗಳಿಸಿದ ಸ್ವಾತಂತ್ರ್ಯವನ್ನು ಉಳಿಸುವುದು, ಸಂರಕ್ಷಿಸುವುದು ಮತ್ತು ಶ್ರೀಮಂತಗೊಳಿಸುವುದಲ್ಲದೆ, ರಾಷ್ಟ್ರದ ಐಕ್ಯತೆಯನ್ನು ಉತ್ತೇಜಿಸುವುದು ಮತ್ತು ಒಂದೇ ಗುರಿಗಳು ಮತ್ತು ಆದರ್ಶಗಳಿಗೆ ಬದ್ಧರಾಗುವ ಅಂಶಗಳನ್ನೊಳಗೊಂಡಿರಬೇಕು.

ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಹುತಾತ್ಮರಾದವರ ಪಾತ್ರ ಮತ್ತು ರಾಷ್ಟ್ರೀಯ ಐಕ್ಯತೆಯ ಮೂಲ ಉದ್ದೇಶಗಳು ಇರುವ ಸಾಂಸ್ಕೃತಿಕ ಕಾರ್ಯಕ್ರಮಗಳ / ಡಾಕ್ಯುಮೆಂಟರಿ ಚಿತ್ರ ಪದರ್ಶನಗಳ ಏರ್ಪಾಡುಗಳನ್ನು ರಾಜ್ಯದ ಪ್ರಚಾರ ಘಟಕಗಳು ಮಾಡಬಹುದು. ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಎಲ್ಲಾ ಪ್ರಾದೇಶಿಕ ಆಯುಕ್ತರು, ಇಲಾಖಾ ಮುಖ್ಯಸ್ಥರು, ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತಿತರೆ ಸಂಬಂಧಪಟ್ಟ ಅಧಿಕಾರಿಗಳು ಈ ನಿರ್ದೇಶನಗಳನ್ನು ತಕ್ಕುದಾದ ರೀತಿಯಲ್ಲಿ ಅನುಸರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

34 minutes ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

38 minutes ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

45 minutes ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

48 minutes ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

10 hours ago

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…

1 day ago