Advertisement

ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ಬಿಡುಗಡೆ | 20 ಕ್ಕೂ ಹೆಚ್ಚು ಬಿಜೆಪಿ ಶಾಸಕರಿಗೆ ಕೊಕ್‌ | ಲಿಸ್ಟ್‌ನಲ್ಲಿ ಯಾರಿದ್ದಾರೆ?

Share

ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸೋಮವಾರ ಪ್ರಕಟಿಸಲಿದೆ. ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಈಗಾಗಲೇ ಬಹುತೇಕ ಸ್ಥಾನಗಳಿಗೆ ತಮ್ಮ ಅಭ್ಯರ್ಥಿಗಳನ್ನು ಘೋಷಿಸಿವೆ. ಬಿಜೆಪಿ ಸಮಯ ತೆಗೆದುಕೊಂಡು ಅಳೆದು ತೂಗಿ ನೋಡಿದೆ. ಹಲವು ಕಡೆ ಆಂತರಿಕ ಭಿನ್ನಾಭಿಪ್ರಾಯಗಳೇ ಹೆಚ್ಚಾಗಿತ್ತು.  224 ಕ್ಷೇತ್ರಗಳಲ್ಲಿ 150 ರಿಂದ 175 ಸ್ಥಾನಗಳಿಗೆ ಇಂದು ಟಿಕೆಟ್ ಘೋಷಿಸುವ ಸಾಧ್ಯತೆಯಿದೆ. ರಾಜ್ಯ ಘಟಕವು ಈಗಾಗಲೇ ಪ್ರತಿ ಕ್ಷೇತ್ರಕ್ಕೆ ಎರಡರಿಂದ ಮೂರು ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ ಪಟ್ಟಿಯನ್ನು ದೆಹಲಿಯಲ್ಲಿರುವ ಪಕ್ಷದ ಕೇಂದ್ರ ಚುನಾವಣಾ ಸಮಿತಿಗೆ (ಸಿಇಸಿ) ಕಳುಹಿಸಿದೆ.

ಅಭ್ಯರ್ಥಿಗಳ ಆಯ್ಕೆಗೆ ತೀವ್ರ ಕಸರತ್ತು ನಡೆಸುತ್ತಿರುವ ಬಿಜೆಪಿ ಇಂದು ತನ್ನ ಮೊದಲ ಪಟ್ಟಿ ಪ್ರಕಟಿಸುತ್ತಿದೆ. ಇಂದು ಮಧ್ಯಾಹ್ನದ ವೇಳೆಗೆ 175 ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಿದೆ. ಭಾನುವಾರ ಚುನಾವಣಾ ಸಮಿತಿ ಸಭೆ ನಡೆಸಿರುವ ವರಿಷ್ಠರು ಸಚಿವರು ಸೇರಿದಂತೆ 85ಕ್ಕೂ ಹೆಚ್ಚು ಹಾಲಿ ಶಾಸಕರ ಸ್ಪರ್ಧೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ.

ಕರ್ನಾಟಕದಲ್ಲಿ ಗುಜರಾತ್, ಉತ್ತರ ಪ್ರದೇಶದ ಮಾದರಿಯನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಕ್ಕೆ ಹಿಂದೇಟು ಹಾಕಿರುವ ಬಿಜೆಪಿ ಹೈಕಮಾಂಡ್‌  ಬಹುತೇಕ ಸಚಿವರು ಮತ್ತು ಹಾಲಿ ಶಾಸಕರಿಗೆ ಟಿಕೆಟ್ ನೀಡಲು ನಿರ್ಧರಿಸಿದೆ. ಸುಮಾರು 20 ಶಾಸಕರಿಗೆ ಟಿಕೆಟ್ ತಪ್ಪಬಹುದು ಎನ್ನಲಾಗಿದ್ದು ಸರ್ವೆ ವರದಿಗಳಲ್ಲಿ ಋಣಾತ್ಮಕ ವರದಿ ಬಂದಿರುವ ಹಿನ್ನಲೆಯಲ್ಲಿ ಅನಿವಾರ್ಯವಾಗಿ ಕೈ ಬಿಡಲಾಗುತ್ತಿದೆ.

ಈ ಬಾರಿ ಬಿಜೆಪಿಗೆ ಹಿನ್ನಡೆಯಾಗಬಹುದು ಎಂದು ಚುನಾವಣಾ ಸಮೀಕ್ಷೆಗಳು ತಿಳಿಸಿದ ಬೆನ್ನಲ್ಲೇ ಹೈಕಮಾಂಡ್‌  ನಾಯಕರು ಸರಣಿ ಸಭೆ ನಡೆಸಿ ಅಭ್ಯರ್ಥಿಗಳ ಹೆಸರನ್ನು ಫೈನಲ್‌ ಮಾಡುತ್ತಿದ್ದಾರೆ.  ಈ ಬಾರಿ ಎರಡು ಡಜನ್‌ಗೂ ಹೆಚ್ಚು ಶಾಸಕರನ್ನು ಕೈ ಬಿಡುವ ಸಾಧ್ಯತೆ ಇದ್ದು,  ಆಡಳಿತ ವಿರೋಧಿ ಅಲೆ, ಭ್ರಷ್ಟಾಚಾರ ಆರೋಪ, ಚಾರಿತ್ರ್ಯ ಕಾರಣದಿಂದ ಇಮೇಜ್ ಕಳೆದುಕೊಂಡ ನಾಯಕರಿಗೆ ಗೇಟ್ ಪಾಸ್ ನೀಡಲು ಸಭೆ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ.

ಈ ಶಾಸಕರಿಗೆ ಟಿಕೆಟ್‌ ಕೈತಪ್ಪುವ ಸಾಧ್ಯತೆ ಹೆಚ್ಚು ?

ಚನ್ನಗಿರಿ – ಮಾಡಾಳ್ ವಿರೂಪಾಕ್ಷಪ್ಪ
ಹಾವೇರಿ – ನೆಹರೂ ಓಲೆಕಾರ್
ಮೂಡಿಗೆರೆ – ಎಂ ಪಿ ಕುಮಾರಸ್ವಾಮಿ
ಚಿತ್ರದುರ್ಗ – ಜಿ ಎಚ್ ತಿಪ್ಪಾರೆಡ್ಡಿ
ಯಾದಗಿರಿ – ವೆಂಕಟರೆಡ್ಡಿ ಮುದ್ನಾಳ

ಕನಕಗಿರಿ – ಬಸವರಾಜ ದಡೇಸುಗೂರು
ಶಿವಮೊಗ್ಗ – ಕೆ ಎಸ್ ಈಶ್ವರಪ್ಪ
ಅಥಣಿ – ಮಹೇಶ್ ಕುಮಟಳ್ಳಿ
ರಾಣೆಬೆನ್ನೂರು – ಅರುಣ್ ಕುಮಾರ್ ಪೂಜಾರ್
ರಾಯಚೂರು – ಡಾ.ಶಿವರಾಜ್ ಪಾಟೀಲ್
ಪುತ್ತೂರು – ಸಂಜೀವ್ ಮಠಂದೂರು

ಸುಳ್ಯ-  ಎಸ್‌ ಅಂಗಾರ

ಉಡುಪಿ – ರಘುಪತಿ ಭಟ್
ಭಟ್ಕಳ – ಸುನೀಲ್ ನಾಯ್ಕ
ಸೊರಬ – ಕುಮಾರ್ ಬಂಗಾರಪ್ಪ
ಆಳಂದ – ಸುಭಾಷ್ ಗುತ್ತೇದಾರ್
ಹೊಸದುರ್ಗ – ಗೂಳಿಹಟ್ಟಿ ಶೇಖರ್

ಧಾರವಾಡ – ಅಮೃತ ದೇಸಾಯಿ
ದಾವಣಗೆರೆ ಉತ್ತರ – ಎಸ್ ಎ ರವೀಂದ್ರನಾಥ್
ಕಾಪು – ಲಾಲಾಜಿ ಮೆಂಡನ್
ಚಿಕ್ಕಪೇಟೆ – ಉದಯ್ ಗರುಡಾಚಾರ್
ಎಸ್.ಎ.ರವೀಂದ್ರನಾಥ್– ದಾವಣಗೆರೆ ಉತ್ತರ (ನಿವೃತ್ತಿ ಘೋಷಣೆ)

ಲಿಂಗಣ್ಣ– ಮಾಯಕೊಂಡ
ಅಥಣಿ – ಮಹೇಶ್ ಕುಮಟಳ್ಳಿ
ಕಾಗವಾಡ- ಶ್ರೀಮಂತ ಪಾಟೀಲ್
ಬೈಂದೂರು- ಸುಕುಮಾರ್ ಶೆಟ್ಟಿ

 


 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

1 day ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

2 days ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

2 days ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago