ದೇಶದ ಅತೀ ದೊಡ್ಡ ಆಮದು ಸಗಟು ಅಂದ್ರೆ ಅದು ಪೆಟ್ರೋಲಿಯಂ ಉತ್ಪನ್ನ. ದೇಶದ ಆರ್ಥಿಕತೆಗೆ ಬಹುದೊಡ್ಡ ಹೊರೆ ಜೊತೆಗೆ ಪರಿಸರ ಹಾನಿಗೂ ಕಾರಣವಾಗುತ್ತಿದೆ. ಅದಕ್ಕೆ ಆದಷ್ಟು ಕಡಿವಾಣ ಹಾಕಲು ಕೇಂದ್ರ ಸರ್ಕಾರ ಅನೇಕ ಪರ್ಯಾಯಗಳನ್ನು ಕಂಡು ಹಿಡಿಯುತ್ತಲೇ ಇದೆ. ಇದೀಗ ಒಂದು ಹೆಜ್ಜೆಯಾಗಿ 20 ಪ್ರತಿಶತ ಎಥೆನಾಲ್ ಮಿಶ್ರಿತ ಪೆಟ್ರೋಲ್, E20, 2025 ರ ವೇಳೆಗೆ ಭಾರತದಾದ್ಯಂತ ಲಭ್ಯವಾಗಲಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.
ಕಳೆದ ಒಂಬತ್ತು ವರ್ಷಗಳಲ್ಲಿ ಭಾರತವು ಪ್ರತಿಯೊಂದು ಕ್ಷೇತ್ರದಲ್ಲೂ ಬೆಳವಣಿಗೆಯನ್ನು ಕಂಡಿದೆ. ದೇಶವು ಈಗ ವಿಶ್ವದ ಮೂರನೇ ಅತಿದೊಡ್ಡ ಇಂಧನ ಗ್ರಾಹಕ, ಮೂರನೇ ಅತಿದೊಡ್ಡ ತೈಲ ಗ್ರಾಹಕ ಮತ್ತು ಮೂರನೇ ಅತಿದೊಡ್ಡ ಎಲ್ಪಿಜಿ ಗ್ರಾಹಕನಾಗಿ ನಿಂತಿರುವುದರಿಂದ ಬೆಳವಣಿಗೆ ಮತ್ತು ಶಕ್ತಿಯ ಪರಸ್ಪರ ಸಂಬಂಧವು ಸ್ಪಷ್ಟವಾಗಿ ಗೋಚರಿಸುತ್ತದೆ ಎಂದು ಅವರು ಹೇಳಿದರು. ದೇಶವು ನಾಲ್ಕನೇ ಅತಿದೊಡ್ಡ ಎಲ್ಎನ್ಜಿ ಆಮದುದಾರ, ನಾಲ್ಕನೇ ಅತಿದೊಡ್ಡ ರಿಫೈನರ್ ಮತ್ತು ವಿಶ್ವದ ನಾಲ್ಕನೇ ಅತಿದೊಡ್ಡ ಆಟೋಮೊಬೈಲ್ ಮಾರುಕಟ್ಟೆಯಲ್ಲಿ ನಿಂತಿದೆ. ಭಾರತದ ಬೆಳವಣಿಗೆಯು ಜಗತ್ತಿನಾದ್ಯಂತ ವಿಸ್ಮಯ ಮತ್ತು ವಿಶ್ವಾಸವನ್ನು ಹುಟ್ಟುಹಾಕಿದೆ. ಮತ್ತು ಪ್ರತಿಯೊಬ್ಬ ಭಾರತೀಯನ ಭರವಸೆ ಮತ್ತು ಹೆಮ್ಮೆಯ ಮೂಲವಾಗಿದೆ ಎಂದು ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದರು.
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…