Advertisement
ಪ್ರಮುಖ

#EthanolBlendedPetrol | ದೇಶಾದ್ಯಂತ 20% ಎಥೆನಾಲ್ ಮಿಶ್ರಿತ ಪೆಟ್ರೋಲ್, E20 ಶೀಘ್ರದಲ್ಲಿ ಲಭ್ಯ | ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ

Share

ದೇಶದ ಅತೀ ದೊಡ್ಡ ಆಮದು ಸಗಟು ಅಂದ್ರೆ ಅದು ಪೆಟ್ರೋಲಿಯಂ ಉತ್ಪನ್ನ. ದೇಶದ ಆರ್ಥಿಕತೆಗೆ ಬಹುದೊಡ್ಡ ಹೊರೆ ಜೊತೆಗೆ ಪರಿಸರ ಹಾನಿಗೂ ಕಾರಣವಾಗುತ್ತಿದೆ. ಅದಕ್ಕೆ ಆದಷ್ಟು ಕಡಿವಾಣ ಹಾಕಲು ಕೇಂದ್ರ ಸರ್ಕಾರ ಅನೇಕ ಪರ್ಯಾಯಗಳನ್ನು ಕಂಡು ಹಿಡಿಯುತ್ತಲೇ ಇದೆ. ಇದೀಗ ಒಂದು ಹೆಜ್ಜೆಯಾಗಿ 20 ಪ್ರತಿಶತ ಎಥೆನಾಲ್ ಮಿಶ್ರಿತ ಪೆಟ್ರೋಲ್, E20, 2025 ರ ವೇಳೆಗೆ ಭಾರತದಾದ್ಯಂತ ಲಭ್ಯವಾಗಲಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.

ಭಾರತವು ಮುಂದಿನ ವರ್ಷದ ಏಪ್ರಿಲ್‌ನಿಂದ ಆಯ್ದ ಪೆಟ್ರೋಲ್ ಪಂಪ್‌ಗಳಲ್ಲಿ ಶೇಕಡಾ 20 ರಷ್ಟು ಎಥೆನಾಲ್‌ನೊಂದಿಗೆ ಪೆಟ್ರೋಲ್ ಪೂರೈಸಲು ಪ್ರಾರಂಭಿಸಲಿದೆ. ತೈಲ ಆಮದು ಅವಲಂಬನೆಯನ್ನು ಕಡಿತಗೊಳಿಸಲು ಮತ್ತು ಪರಿಸರ ಸಮಸ್ಯೆಗಳನ್ನು ಬಗೆಹರಿಸಲು ಸರಬರಾಜನ್ನು ಮತ್ತಷ್ಟು ಹೆಚ್ಚಿಸಲಾಗುತ್ತೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.
20 ಪ್ರತಿಶತ ಎಥೆನಾಲ್ ಮಿಶ್ರಿತ ಪೆಟ್ರೋಲ್, E20, 2025 ರ ವೇಳೆಗೆ ಭಾರತದಾದ್ಯಂತ ಲಭ್ಯವಿರುತ್ತದೆ. ನಿನ್ನೆ ನಡೆದ ಭಾರತೀಯ ಮರ್ಚೆಂಟ್ಸ್ ಚೇಂಬರ್‌ಗಳ ವರ್ಚುವಲ್ ಸಭೆಯ ನಂತರ ಮಾತನಾಡಿದ ಸಚಿವ ಹರ್ದೀಪ್ ಸಿಂಗ್ ಪುರಿ ಅವರು, ಮೊದಲ E20 ವಿಶೇಷ ಇಂಧನ ಔಟ್ಲೆಟ್ ಅನ್ನು ಈ ವರ್ಷದ ಫೆಬ್ರವರಿಯಲ್ಲಿ ತೆರೆಯಲಾಗಿತ್ತು, ನಂತರ ಇದರ ಸಂಖ್ಯೆ ಈಗಾಗಲೇ 600 ದಾಟಿದೆ. 2025 ರ ವೇಳೆಗೆ ದೇಶಾದ್ಯಂತ E20 ವಿಶೇಷ ಇಂಧನ ಔಟ್ಲೆಟ್​ಗಳು ಲಭ್ಯವಿರಲಿವೆ ಎಂದರು.

ಕಳೆದ ಒಂಬತ್ತು ವರ್ಷಗಳಲ್ಲಿ ಭಾರತವು ಪ್ರತಿಯೊಂದು ಕ್ಷೇತ್ರದಲ್ಲೂ ಬೆಳವಣಿಗೆಯನ್ನು ಕಂಡಿದೆ. ದೇಶವು ಈಗ ವಿಶ್ವದ ಮೂರನೇ ಅತಿದೊಡ್ಡ ಇಂಧನ ಗ್ರಾಹಕ, ಮೂರನೇ ಅತಿದೊಡ್ಡ ತೈಲ ಗ್ರಾಹಕ ಮತ್ತು ಮೂರನೇ ಅತಿದೊಡ್ಡ ಎಲ್‌ಪಿಜಿ ಗ್ರಾಹಕನಾಗಿ ನಿಂತಿರುವುದರಿಂದ ಬೆಳವಣಿಗೆ ಮತ್ತು ಶಕ್ತಿಯ ಪರಸ್ಪರ ಸಂಬಂಧವು ಸ್ಪಷ್ಟವಾಗಿ ಗೋಚರಿಸುತ್ತದೆ ಎಂದು ಅವರು ಹೇಳಿದರು. ದೇಶವು ನಾಲ್ಕನೇ ಅತಿದೊಡ್ಡ ಎಲ್‌ಎನ್‌ಜಿ ಆಮದುದಾರ, ನಾಲ್ಕನೇ ಅತಿದೊಡ್ಡ ರಿಫೈನರ್ ಮತ್ತು ವಿಶ್ವದ ನಾಲ್ಕನೇ ಅತಿದೊಡ್ಡ ಆಟೋಮೊಬೈಲ್ ಮಾರುಕಟ್ಟೆಯಲ್ಲಿ ನಿಂತಿದೆ. ಭಾರತದ ಬೆಳವಣಿಗೆಯು ಜಗತ್ತಿನಾದ್ಯಂತ ವಿಸ್ಮಯ ಮತ್ತು ವಿಶ್ವಾಸವನ್ನು ಹುಟ್ಟುಹಾಕಿದೆ. ಮತ್ತು ಪ್ರತಿಯೊಬ್ಬ ಭಾರತೀಯನ ಭರವಸೆ ಮತ್ತು ಹೆಮ್ಮೆಯ ಮೂಲವಾಗಿದೆ ಎಂದು ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

22 hours ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

1 day ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

1 day ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

1 day ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

1 day ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

1 day ago