Advertisement
ಪ್ರಮುಖ

#EthanolBlendedPetrol | ದೇಶಾದ್ಯಂತ 20% ಎಥೆನಾಲ್ ಮಿಶ್ರಿತ ಪೆಟ್ರೋಲ್, E20 ಶೀಘ್ರದಲ್ಲಿ ಲಭ್ಯ | ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ

Share

ದೇಶದ ಅತೀ ದೊಡ್ಡ ಆಮದು ಸಗಟು ಅಂದ್ರೆ ಅದು ಪೆಟ್ರೋಲಿಯಂ ಉತ್ಪನ್ನ. ದೇಶದ ಆರ್ಥಿಕತೆಗೆ ಬಹುದೊಡ್ಡ ಹೊರೆ ಜೊತೆಗೆ ಪರಿಸರ ಹಾನಿಗೂ ಕಾರಣವಾಗುತ್ತಿದೆ. ಅದಕ್ಕೆ ಆದಷ್ಟು ಕಡಿವಾಣ ಹಾಕಲು ಕೇಂದ್ರ ಸರ್ಕಾರ ಅನೇಕ ಪರ್ಯಾಯಗಳನ್ನು ಕಂಡು ಹಿಡಿಯುತ್ತಲೇ ಇದೆ. ಇದೀಗ ಒಂದು ಹೆಜ್ಜೆಯಾಗಿ 20 ಪ್ರತಿಶತ ಎಥೆನಾಲ್ ಮಿಶ್ರಿತ ಪೆಟ್ರೋಲ್, E20, 2025 ರ ವೇಳೆಗೆ ಭಾರತದಾದ್ಯಂತ ಲಭ್ಯವಾಗಲಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.

ಭಾರತವು ಮುಂದಿನ ವರ್ಷದ ಏಪ್ರಿಲ್‌ನಿಂದ ಆಯ್ದ ಪೆಟ್ರೋಲ್ ಪಂಪ್‌ಗಳಲ್ಲಿ ಶೇಕಡಾ 20 ರಷ್ಟು ಎಥೆನಾಲ್‌ನೊಂದಿಗೆ ಪೆಟ್ರೋಲ್ ಪೂರೈಸಲು ಪ್ರಾರಂಭಿಸಲಿದೆ. ತೈಲ ಆಮದು ಅವಲಂಬನೆಯನ್ನು ಕಡಿತಗೊಳಿಸಲು ಮತ್ತು ಪರಿಸರ ಸಮಸ್ಯೆಗಳನ್ನು ಬಗೆಹರಿಸಲು ಸರಬರಾಜನ್ನು ಮತ್ತಷ್ಟು ಹೆಚ್ಚಿಸಲಾಗುತ್ತೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.
20 ಪ್ರತಿಶತ ಎಥೆನಾಲ್ ಮಿಶ್ರಿತ ಪೆಟ್ರೋಲ್, E20, 2025 ರ ವೇಳೆಗೆ ಭಾರತದಾದ್ಯಂತ ಲಭ್ಯವಿರುತ್ತದೆ. ನಿನ್ನೆ ನಡೆದ ಭಾರತೀಯ ಮರ್ಚೆಂಟ್ಸ್ ಚೇಂಬರ್‌ಗಳ ವರ್ಚುವಲ್ ಸಭೆಯ ನಂತರ ಮಾತನಾಡಿದ ಸಚಿವ ಹರ್ದೀಪ್ ಸಿಂಗ್ ಪುರಿ ಅವರು, ಮೊದಲ E20 ವಿಶೇಷ ಇಂಧನ ಔಟ್ಲೆಟ್ ಅನ್ನು ಈ ವರ್ಷದ ಫೆಬ್ರವರಿಯಲ್ಲಿ ತೆರೆಯಲಾಗಿತ್ತು, ನಂತರ ಇದರ ಸಂಖ್ಯೆ ಈಗಾಗಲೇ 600 ದಾಟಿದೆ. 2025 ರ ವೇಳೆಗೆ ದೇಶಾದ್ಯಂತ E20 ವಿಶೇಷ ಇಂಧನ ಔಟ್ಲೆಟ್​ಗಳು ಲಭ್ಯವಿರಲಿವೆ ಎಂದರು.

ಕಳೆದ ಒಂಬತ್ತು ವರ್ಷಗಳಲ್ಲಿ ಭಾರತವು ಪ್ರತಿಯೊಂದು ಕ್ಷೇತ್ರದಲ್ಲೂ ಬೆಳವಣಿಗೆಯನ್ನು ಕಂಡಿದೆ. ದೇಶವು ಈಗ ವಿಶ್ವದ ಮೂರನೇ ಅತಿದೊಡ್ಡ ಇಂಧನ ಗ್ರಾಹಕ, ಮೂರನೇ ಅತಿದೊಡ್ಡ ತೈಲ ಗ್ರಾಹಕ ಮತ್ತು ಮೂರನೇ ಅತಿದೊಡ್ಡ ಎಲ್‌ಪಿಜಿ ಗ್ರಾಹಕನಾಗಿ ನಿಂತಿರುವುದರಿಂದ ಬೆಳವಣಿಗೆ ಮತ್ತು ಶಕ್ತಿಯ ಪರಸ್ಪರ ಸಂಬಂಧವು ಸ್ಪಷ್ಟವಾಗಿ ಗೋಚರಿಸುತ್ತದೆ ಎಂದು ಅವರು ಹೇಳಿದರು. ದೇಶವು ನಾಲ್ಕನೇ ಅತಿದೊಡ್ಡ ಎಲ್‌ಎನ್‌ಜಿ ಆಮದುದಾರ, ನಾಲ್ಕನೇ ಅತಿದೊಡ್ಡ ರಿಫೈನರ್ ಮತ್ತು ವಿಶ್ವದ ನಾಲ್ಕನೇ ಅತಿದೊಡ್ಡ ಆಟೋಮೊಬೈಲ್ ಮಾರುಕಟ್ಟೆಯಲ್ಲಿ ನಿಂತಿದೆ. ಭಾರತದ ಬೆಳವಣಿಗೆಯು ಜಗತ್ತಿನಾದ್ಯಂತ ವಿಸ್ಮಯ ಮತ್ತು ವಿಶ್ವಾಸವನ್ನು ಹುಟ್ಟುಹಾಕಿದೆ. ಮತ್ತು ಪ್ರತಿಯೊಬ್ಬ ಭಾರತೀಯನ ಭರವಸೆ ಮತ್ತು ಹೆಮ್ಮೆಯ ಮೂಲವಾಗಿದೆ ಎಂದು ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

1 day ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

1 day ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

1 day ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

2 days ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

2 days ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

2 days ago