Advertisement
ಪ್ರಮುಖ

#EthanolBlendedPetrol | ದೇಶಾದ್ಯಂತ 20% ಎಥೆನಾಲ್ ಮಿಶ್ರಿತ ಪೆಟ್ರೋಲ್, E20 ಶೀಘ್ರದಲ್ಲಿ ಲಭ್ಯ | ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ

Share

ದೇಶದ ಅತೀ ದೊಡ್ಡ ಆಮದು ಸಗಟು ಅಂದ್ರೆ ಅದು ಪೆಟ್ರೋಲಿಯಂ ಉತ್ಪನ್ನ. ದೇಶದ ಆರ್ಥಿಕತೆಗೆ ಬಹುದೊಡ್ಡ ಹೊರೆ ಜೊತೆಗೆ ಪರಿಸರ ಹಾನಿಗೂ ಕಾರಣವಾಗುತ್ತಿದೆ. ಅದಕ್ಕೆ ಆದಷ್ಟು ಕಡಿವಾಣ ಹಾಕಲು ಕೇಂದ್ರ ಸರ್ಕಾರ ಅನೇಕ ಪರ್ಯಾಯಗಳನ್ನು ಕಂಡು ಹಿಡಿಯುತ್ತಲೇ ಇದೆ. ಇದೀಗ ಒಂದು ಹೆಜ್ಜೆಯಾಗಿ 20 ಪ್ರತಿಶತ ಎಥೆನಾಲ್ ಮಿಶ್ರಿತ ಪೆಟ್ರೋಲ್, E20, 2025 ರ ವೇಳೆಗೆ ಭಾರತದಾದ್ಯಂತ ಲಭ್ಯವಾಗಲಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.

ಭಾರತವು ಮುಂದಿನ ವರ್ಷದ ಏಪ್ರಿಲ್‌ನಿಂದ ಆಯ್ದ ಪೆಟ್ರೋಲ್ ಪಂಪ್‌ಗಳಲ್ಲಿ ಶೇಕಡಾ 20 ರಷ್ಟು ಎಥೆನಾಲ್‌ನೊಂದಿಗೆ ಪೆಟ್ರೋಲ್ ಪೂರೈಸಲು ಪ್ರಾರಂಭಿಸಲಿದೆ. ತೈಲ ಆಮದು ಅವಲಂಬನೆಯನ್ನು ಕಡಿತಗೊಳಿಸಲು ಮತ್ತು ಪರಿಸರ ಸಮಸ್ಯೆಗಳನ್ನು ಬಗೆಹರಿಸಲು ಸರಬರಾಜನ್ನು ಮತ್ತಷ್ಟು ಹೆಚ್ಚಿಸಲಾಗುತ್ತೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.
20 ಪ್ರತಿಶತ ಎಥೆನಾಲ್ ಮಿಶ್ರಿತ ಪೆಟ್ರೋಲ್, E20, 2025 ರ ವೇಳೆಗೆ ಭಾರತದಾದ್ಯಂತ ಲಭ್ಯವಿರುತ್ತದೆ. ನಿನ್ನೆ ನಡೆದ ಭಾರತೀಯ ಮರ್ಚೆಂಟ್ಸ್ ಚೇಂಬರ್‌ಗಳ ವರ್ಚುವಲ್ ಸಭೆಯ ನಂತರ ಮಾತನಾಡಿದ ಸಚಿವ ಹರ್ದೀಪ್ ಸಿಂಗ್ ಪುರಿ ಅವರು, ಮೊದಲ E20 ವಿಶೇಷ ಇಂಧನ ಔಟ್ಲೆಟ್ ಅನ್ನು ಈ ವರ್ಷದ ಫೆಬ್ರವರಿಯಲ್ಲಿ ತೆರೆಯಲಾಗಿತ್ತು, ನಂತರ ಇದರ ಸಂಖ್ಯೆ ಈಗಾಗಲೇ 600 ದಾಟಿದೆ. 2025 ರ ವೇಳೆಗೆ ದೇಶಾದ್ಯಂತ E20 ವಿಶೇಷ ಇಂಧನ ಔಟ್ಲೆಟ್​ಗಳು ಲಭ್ಯವಿರಲಿವೆ ಎಂದರು.

ಕಳೆದ ಒಂಬತ್ತು ವರ್ಷಗಳಲ್ಲಿ ಭಾರತವು ಪ್ರತಿಯೊಂದು ಕ್ಷೇತ್ರದಲ್ಲೂ ಬೆಳವಣಿಗೆಯನ್ನು ಕಂಡಿದೆ. ದೇಶವು ಈಗ ವಿಶ್ವದ ಮೂರನೇ ಅತಿದೊಡ್ಡ ಇಂಧನ ಗ್ರಾಹಕ, ಮೂರನೇ ಅತಿದೊಡ್ಡ ತೈಲ ಗ್ರಾಹಕ ಮತ್ತು ಮೂರನೇ ಅತಿದೊಡ್ಡ ಎಲ್‌ಪಿಜಿ ಗ್ರಾಹಕನಾಗಿ ನಿಂತಿರುವುದರಿಂದ ಬೆಳವಣಿಗೆ ಮತ್ತು ಶಕ್ತಿಯ ಪರಸ್ಪರ ಸಂಬಂಧವು ಸ್ಪಷ್ಟವಾಗಿ ಗೋಚರಿಸುತ್ತದೆ ಎಂದು ಅವರು ಹೇಳಿದರು. ದೇಶವು ನಾಲ್ಕನೇ ಅತಿದೊಡ್ಡ ಎಲ್‌ಎನ್‌ಜಿ ಆಮದುದಾರ, ನಾಲ್ಕನೇ ಅತಿದೊಡ್ಡ ರಿಫೈನರ್ ಮತ್ತು ವಿಶ್ವದ ನಾಲ್ಕನೇ ಅತಿದೊಡ್ಡ ಆಟೋಮೊಬೈಲ್ ಮಾರುಕಟ್ಟೆಯಲ್ಲಿ ನಿಂತಿದೆ. ಭಾರತದ ಬೆಳವಣಿಗೆಯು ಜಗತ್ತಿನಾದ್ಯಂತ ವಿಸ್ಮಯ ಮತ್ತು ವಿಶ್ವಾಸವನ್ನು ಹುಟ್ಟುಹಾಕಿದೆ. ಮತ್ತು ಪ್ರತಿಯೊಬ್ಬ ಭಾರತೀಯನ ಭರವಸೆ ಮತ್ತು ಹೆಮ್ಮೆಯ ಮೂಲವಾಗಿದೆ ಎಂದು ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

7 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

2 days ago