20,000 ರೈತರಿಂದ ನಾಳೆ `ದೆಹಲಿ ಚಲೋ’ಗೆ ಕರೆ | 200 ಕ್ಕೂ ಅಧಿಕ ಸಂಘಟನೆಗಳು ಭಾಗಿ | ಬೆಳೆಗಳಿಗೆ ಬೆಂಬಲ ಬೆಲೆ ಸೇರಿದಂತೆ ವಿವಿಧ ಬೇಡಿಕೆ

February 12, 2024
1:03 PM

ರೈತ(Farmer) ದೇಶದ ಬೆನ್ನೆಲುಬು. ಅನ್ನದಾತ ಚೆನ್ನಾಗಿದ್ದರೆ ದೇಶ(Country) ಸುಭೀಕ್ಷವಾಗಿರಲು ಸಾಧ್ಯ. ಆದರೆ ರೈತರ ಕಷ್ಟ, ಸಂಕಷ್ಟಗಳಿಗೆ ಯಾರೂ ಕಿವಿಗೊಡುವುದಿಲ್ಲ. ಆದರೆ ಕೃಷಿಕರಿಗಿರುವ ಹಕ್ಕನ್ನು ಹೋರಾಟ, ಪ್ರತಿಭಟಿಸಿ(Protest) ಪಡೆದುಕೊಳ್ಳುವ ಸಂದರ್ಭಗಳು ಆಗಾಗ ಬರುತ್ತಲೇ ಇದೆ. ಬೆಳೆಗಳಿಗೆ(Crop) ಕನಿಷ್ಠ ಬೆಂಬಲ ಬೆಲೆ(Minimum support price) ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲು ಸುಮಾರು 200 ರೈತ ಸಂಘಟನೆಗಳು ಮಂಗಳವಾರ (ಫೆ.13) ದೆಹಲಿ ಚಲೋಗೆ (Delhi Chalo) ಕರೆ ನೀಡಿವೆ.

Advertisement

`ದೆಹಲಿ ಚಲೋ’ ನಲ್ಲಿ ಸುಮಾರು 20,000 ರೈತರು (Farmers) ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಈಗಾಗಲೇ ಹಲವು ಕಡೆ ಗಡಿಗಳನ್ನು ಬ್ಯಾರಿಕೇಡ್‌ಗಳಿಂದ ಬಂದ್ ಮಾಡಲಾಗಿದೆ. ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಈ ಪ್ರತಿಭಟನೆಗೆ 200 ರೈತ ಸಂಘಟನೆಗಳು ಬೆಂಬಲ ನೀಡಿದ್ದು, ಸುಮಾರು 20,000 ರೈತರು ಪಾಲ್ಗೊಳ್ಳಲಿದ್ದಾರೆ ಎಂದು ಗುಪ್ತಚರ ಇಲಾಖೆ ಅಂದಾಜಿಸಿದೆ.

ಈ ಹಿನ್ನೆಲೆಯಲ್ಲಿ ರೈತರು ಅಂಬಾಲ-ಸಿಂಘು, ಕನೌರಿ-ಜಿಂದ್, ಮತ್ತು ದಬಾವಲಿ ಗಡಿಗಳ ಮೂಲಕ ರಾಜಧಾನಿ ಪ್ರವೇಶಕ್ಕೆ ರೈತರು ಯೋಜಿಸಿದ್ದಾರೆ. ಈಗಾಗಲೇ ಪಂಜಾಬ್ ಹಾಗೂ ಹರಿಯಾಣದ ಟ್ರ್ಯಾಕ್ಟರ್‌ಗಳಲ್ಲಿ ಹೊರಟಿದ್ದಾರೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದೆಹಲಿಯ ಗಡಿ ಭಾಗಗಳನ್ನ ಬ್ಯಾರಿಕೇಡ್‌ಗಳಿಂದ (Barricading) ಬಂದ್ ಮಾಡಲಾಗಿದೆ.

 

ಗಡಿಗಳಲ್ಲಿ ಕ್ರೇನ್ ಮತ್ತು ಕಂಟೇನರ್‌ಗಳನ್ನು ತಂದಿಡಲಾಗಿದ್ದು, ರೈತರು ದೆಗಲಿ ಪ್ರವೇಶ ಮಾಡಲು ಯತ್ನಿಸಿದ್ರೆ ಹೆದ್ದಾರಿಯನ್ನೇ ಬಂದ್ ಮಾಡಲು ಪೊಲೀಸರು ಯೋಜಿಸಿದ್ದಾರೆ. ಇದರೊಂದಿಗೆ ಯಾವುದೇ ಅನಾಹುತಕಾರಿ ಘಟನೆಗಳನ್ನು ತಡೆಯಲು ಹೆಚ್ಚುವರಿ ಪೊಲೀಸ್ ಭದ್ರತೆಯನ್ನ ಆಯಕಟ್ಟಿನ ಸ್ಥಳಗಳಲ್ಲಿ ನಿಯೋಜಿಸಲಾಗಿದೆ. ಆದ್ರೆ ಬ್ಯಾರಿಕೇಡ್‌ಗಳ ಅಸ್ತ್ರವನ್ನು ಭೇದಿಸಲು ರೈತರು ತಮ್ಮ ಟ್ರ್ಯಾಕ್ಟರ್‌ಗಳನ್ನೇ ಹಿಟಾಚಿ ರೂಪಕ್ಕೆ ಪರಿವರ್ತಿಸಿದ್ದಾರೆ ಎಂದು ಹೇಳಲಾಗಿದೆ.

– ಅಂತರ್ಜಾಲ ಮಾಹಿತಿ

Ahead of the Feb 13, `Delhi Chalo' march organised by approximately 200 farmers’ unions, Haryana has sealed its borders with Punjab in several places, including Ambala, Jind and Fatehabad districts, with concrete blocks, spikes and barbed wire. Haryana has also imposed Section 144 in 15 districts and has banned any demonstrations or tractor marches. Similarly, Chandigarh has also imposed Section 144 ahead of the farmers’ march.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ
April 19, 2026
11:26 PM
by: ದ ರೂರಲ್ ಮಿರರ್.ಕಾಂ
ರಕ್ಷಾ ಸ್ವರ್ಣಪ್ರಾಶನ | ಮಕ್ಕಳ ರೋಗ ನಿರೋಧಕ ಶಕ್ತಿಗೆ ವಿಶೇಷ ಔಷಧಿ
April 19, 2026
10:56 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ
April 19, 2026
11:59 AM
by: ಸಾಯಿಶೇಖರ್ ಕರಿಕಳ
ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್
April 19, 2026
7:45 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror