Advertisement
MIRROR FOCUS

20,000 ರೈತರಿಂದ ನಾಳೆ `ದೆಹಲಿ ಚಲೋ’ಗೆ ಕರೆ | 200 ಕ್ಕೂ ಅಧಿಕ ಸಂಘಟನೆಗಳು ಭಾಗಿ | ಬೆಳೆಗಳಿಗೆ ಬೆಂಬಲ ಬೆಲೆ ಸೇರಿದಂತೆ ವಿವಿಧ ಬೇಡಿಕೆ

Share

ರೈತ(Farmer) ದೇಶದ ಬೆನ್ನೆಲುಬು. ಅನ್ನದಾತ ಚೆನ್ನಾಗಿದ್ದರೆ ದೇಶ(Country) ಸುಭೀಕ್ಷವಾಗಿರಲು ಸಾಧ್ಯ. ಆದರೆ ರೈತರ ಕಷ್ಟ, ಸಂಕಷ್ಟಗಳಿಗೆ ಯಾರೂ ಕಿವಿಗೊಡುವುದಿಲ್ಲ. ಆದರೆ ಕೃಷಿಕರಿಗಿರುವ ಹಕ್ಕನ್ನು ಹೋರಾಟ, ಪ್ರತಿಭಟಿಸಿ(Protest) ಪಡೆದುಕೊಳ್ಳುವ ಸಂದರ್ಭಗಳು ಆಗಾಗ ಬರುತ್ತಲೇ ಇದೆ. ಬೆಳೆಗಳಿಗೆ(Crop) ಕನಿಷ್ಠ ಬೆಂಬಲ ಬೆಲೆ(Minimum support price) ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲು ಸುಮಾರು 200 ರೈತ ಸಂಘಟನೆಗಳು ಮಂಗಳವಾರ (ಫೆ.13) ದೆಹಲಿ ಚಲೋಗೆ (Delhi Chalo) ಕರೆ ನೀಡಿವೆ.

`ದೆಹಲಿ ಚಲೋ’ ನಲ್ಲಿ ಸುಮಾರು 20,000 ರೈತರು (Farmers) ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಈಗಾಗಲೇ ಹಲವು ಕಡೆ ಗಡಿಗಳನ್ನು ಬ್ಯಾರಿಕೇಡ್‌ಗಳಿಂದ ಬಂದ್ ಮಾಡಲಾಗಿದೆ. ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಈ ಪ್ರತಿಭಟನೆಗೆ 200 ರೈತ ಸಂಘಟನೆಗಳು ಬೆಂಬಲ ನೀಡಿದ್ದು, ಸುಮಾರು 20,000 ರೈತರು ಪಾಲ್ಗೊಳ್ಳಲಿದ್ದಾರೆ ಎಂದು ಗುಪ್ತಚರ ಇಲಾಖೆ ಅಂದಾಜಿಸಿದೆ.

ಈ ಹಿನ್ನೆಲೆಯಲ್ಲಿ ರೈತರು ಅಂಬಾಲ-ಸಿಂಘು, ಕನೌರಿ-ಜಿಂದ್, ಮತ್ತು ದಬಾವಲಿ ಗಡಿಗಳ ಮೂಲಕ ರಾಜಧಾನಿ ಪ್ರವೇಶಕ್ಕೆ ರೈತರು ಯೋಜಿಸಿದ್ದಾರೆ. ಈಗಾಗಲೇ ಪಂಜಾಬ್ ಹಾಗೂ ಹರಿಯಾಣದ ಟ್ರ್ಯಾಕ್ಟರ್‌ಗಳಲ್ಲಿ ಹೊರಟಿದ್ದಾರೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದೆಹಲಿಯ ಗಡಿ ಭಾಗಗಳನ್ನ ಬ್ಯಾರಿಕೇಡ್‌ಗಳಿಂದ (Barricading) ಬಂದ್ ಮಾಡಲಾಗಿದೆ.

 

ಗಡಿಗಳಲ್ಲಿ ಕ್ರೇನ್ ಮತ್ತು ಕಂಟೇನರ್‌ಗಳನ್ನು ತಂದಿಡಲಾಗಿದ್ದು, ರೈತರು ದೆಗಲಿ ಪ್ರವೇಶ ಮಾಡಲು ಯತ್ನಿಸಿದ್ರೆ ಹೆದ್ದಾರಿಯನ್ನೇ ಬಂದ್ ಮಾಡಲು ಪೊಲೀಸರು ಯೋಜಿಸಿದ್ದಾರೆ. ಇದರೊಂದಿಗೆ ಯಾವುದೇ ಅನಾಹುತಕಾರಿ ಘಟನೆಗಳನ್ನು ತಡೆಯಲು ಹೆಚ್ಚುವರಿ ಪೊಲೀಸ್ ಭದ್ರತೆಯನ್ನ ಆಯಕಟ್ಟಿನ ಸ್ಥಳಗಳಲ್ಲಿ ನಿಯೋಜಿಸಲಾಗಿದೆ. ಆದ್ರೆ ಬ್ಯಾರಿಕೇಡ್‌ಗಳ ಅಸ್ತ್ರವನ್ನು ಭೇದಿಸಲು ರೈತರು ತಮ್ಮ ಟ್ರ್ಯಾಕ್ಟರ್‌ಗಳನ್ನೇ ಹಿಟಾಚಿ ರೂಪಕ್ಕೆ ಪರಿವರ್ತಿಸಿದ್ದಾರೆ ಎಂದು ಹೇಳಲಾಗಿದೆ.

– ಅಂತರ್ಜಾಲ ಮಾಹಿತಿ

Ahead of the Feb 13, `Delhi Chalo' march organised by approximately 200 farmers’ unions, Haryana has sealed its borders with Punjab in several places, including Ambala, Jind and Fatehabad districts, with concrete blocks, spikes and barbed wire. Haryana has also imposed Section 144 in 15 districts and has banned any demonstrations or tractor marches. Similarly, Chandigarh has also imposed Section 144 ahead of the farmers’ march.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

5 hours ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

13 hours ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

20 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

21 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

22 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

1 day ago