Advertisement
ಜಿಲ್ಲೆ

2018 ರ ಪ್ರಕೃತಿ ವಿಕೋಪದ ಸಂತ್ರಸ್ತರಿಗೆ “ಪರಿಹಾರ ಅದಾಲತ್ ” : 405 ಅರ್ಜಿ ಸ್ಥಳದಲ್ಲೇ ಇತ್ಯರ್ಥ

Share

 

Advertisement

ಮಡಿಕೇರಿ: ಕಳೆದ ವರ್ಷ ಕಳೆದ ವರ್ಷ ಪ್ರಕೃತಿ ವಿಕೋಪದಿಂದಾಗಿ ಉಂಟಾದ ಮನೆ ಹಾಗೂ ಬೆಳೆ ಹಾನಿ ಸಂಬಂಧ ಸಂತ್ರಸ್ತರರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ವತಿಯಿಂದ 3 ದಿನಗಳ ಕಾಲ ಏರ್ಪಡಿಸಲಾಗಿರುವ ಪರಿಹಾರ ಅದಾಲತ್‍ನಲ್ಲಿ  ಸಂತ್ರಸ್ತರು ಪಾಲ್ಗೊಂಡು ತಮ್ಮ ಅಹವಾಲು ಸಲ್ಲಿಸಿದರು.  ಸೋಮವಾರ 648 ಅರ್ಜಿಗಳು ಬಂದಿದ್ದು ಇದರಲ್ಲಿ 405 ಅರ್ಜಿಗಳನ್ನು ಸ್ಥಳದಲ್ಲೇ ಇತ್ಯರ್ಥ ಮಾಡಲಾಗಿದೆ. ಮೇ.29 ರವರೆಗೆ ಈ ಅದಾಲತ್ ನಡೆಯಲಿದೆ.

 

ಕಳೆದ ಬಾರಿ ಸಂಭವಿಸಿದ ಪ್ರಕೃತಿ ವಿಕೋಪದಿಂದಾಗಿ ಸಾಕಷ್ಟು ನಷ್ಟ ಉಂಟಾಯಿತು. ಜಾನುವಾರು, ಬೆಳೆ, ಮನೆ ಹಾನಿಯಾಯಿತು. ಆ ನಿಟ್ಟಿನಲ್ಲಿ ಜಿಲ್ಲಾಡಳಿತ ವತಿಯಿಂದ ಸಾಕಷ್ಟು  ಪರಿಹಾರ ವಿತರಿಸಲಾಗಿದೆ. ಪರಿಹಾರ ನೀಡಲು ಬಿಟ್ಟು ಹೋಗಿದ್ದಲ್ಲಿ ಪರಿಹಾರ ಭರಿಸುವಂತಾಗಲು ಜಿಲ್ಲಾಡಳಿತ ವತಿಯಿಂದ ಪರಿಹಾರ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ. ಶೇ.90ರಷ್ಟು ಪರಿಹಾರ ತಲುಪಿದೆ. ಇನ್ನೂ ಶೇ.10 ರಷ್ಟು ಪರಿಹಾರ ಸಂತ್ರಸ್ತರಿಗೆ ತಲುಪದಿದ್ದಲ್ಲಿ ಅಂತಹ ಸಂತ್ರಸ್ತರು ಮೇ, 29 ರವರೆಗೆ ನಡೆಯುವ ಪರಿಹಾರ ಅದಾಲತ್‍ನಲ್ಲಿ ಪರಿಹರಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.

 

 

ಪ್ರಕೃತಿ ವಿಕೋಪದಿಂದ ಅನೇಕ ಮನೆಗಳ ಹಾನಿ ಮತ್ತು ಭೂಕುಸಿತ ಉಂಟಾಗಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಗದ್ದೆ, ತೋಟಗಳು ಕೊಚ್ಚಿ ಹೋಗಿದ್ದು, ಕೆಲವು ಭಾಗಗಳಲ್ಲಿ ಗದ್ದೆ ತೋಟಗಳಲ್ಲಿ ಮಣ್ಣು ತುಂಬಿಕೊಂಡು ಇನ್ನೂ ಕೆಲವು ಭಾಗಗಳಲ್ಲಿ ಅತಿಯಾದ ಮಳೆಯಿಂದ ಫಸಲು ಕೊಳೆತು ಹೋಗಿ ಅಪಾರ ಬೆಳೆಹಾನಿ ಸಂಭವಿಸಿತ್ತು.  ಬೆಳೆಹಾನಿ ಪ್ರಕರಣಗಳಲ್ಲಿ ಸರಕಾರವು ಆದ್ಯತೆ ಮೇರೆಗೆ ಪರಿಹಾರವನ್ನು ನೇರ ಪಾವತಿ ಮೂಲಕ ಸಂತ್ರಸ್ಥರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಿರುತ್ತದೆ. ಮನೆಹಾನಿ ಪ್ರಕರಣಗಳಲ್ಲಿ ಪೂರ್ಣ, ತೀವ್ರ ಮನೆಹಾನಿ ಸಂತ್ರಸ್ಥರನ್ನು ಮೊದಲ ಪಟ್ಟಿಯಲ್ಲಿ ಮತ್ತು ವಾಸಿಸಲು ಯೋಗ್ಯವಲ್ಲದ ಪ್ರದೇಶದಲ್ಲಿರುವ ಮತ್ತು ಅಪಾಯದ ಪ್ರದೇಶದಲ್ಲಿರುವ ಮನೆಗಳ ಸಂತ್ರಸ್ಥರನ್ನು ಎರಡನೇ ಪಟ್ಟಿಯಲ್ಲಿ ಸೇರಿಸಲಾಗಿದೆ. ಮೊದಲ ಪಟ್ಟಿಯಲ್ಲಿರುವ ಪೂರ್ಣ, ತೀವ್ರ ಮನೆಹಾನಿ ಪ್ರಕರಣಗಳಿಗೆ ನವೆಂಬರ್-2018 ರಿಂದ ಬಾಡಿಗೆ ಹಣವನ್ನು ಸಂತ್ರಸ್ತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.

ಉಪ ವಿಭಾಗಾಧಿಕಾರಿ ಟಿ.ಜವರೇಗೌಡ ಅವರ ಉಪಸ್ಥಿತಿಯಲ್ಲಿ ಪರಿಹಾರ ಅದಾಲತ್ ನಡೆಯಿತು. ತಹಶೀಲ್ದಾರ್ ನಟೇಶ್, ಕಂದಾಯ ಇಲಾಖೆ ನಾನಾ ಅಧಿಕಾರಿಗಳು ಇತರರು ಹಾಜರಿದ್ದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ

ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಆರಂಭವಾಗಿದೆ.…

6 hours ago

13 ಟನ್ ಅಕ್ರಮ ಅಡಿಕೆ ವಶ : ಕರಾವಳಿ ರಕ್ಷಣಾ ಪಡೆಯ ದಾಳಿ

ಸುಂದರ್‌ಬನ್ಸ್‌ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…

6 hours ago

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

23 hours ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

23 hours ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

23 hours ago

ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು

ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…

23 hours ago