2020ರ ವೇಳೆಗೆ ಮತ್ತೊಂದು ಚಂದ್ರಯಾನಕ್ಕೆ ಸಿದ್ಧತೆ…..

September 22, 2019
9:40 AM

ನಾವು ಗುರಿ ತಲಿಪಿಯೇ ಸಿದ್ಧ…. ಸೋಲೆಂಬುದು ನಮಗಿಲ್ಲ, ಮುಂದಕ್ಕೆ ಹಾಕಿರುವ ಗೆಲವು ಮಾತ್ರಾ ನಮ್ಮಲ್ಲಿ…. ಇದು ಭಾರತೀಯರ ವಿಶ್ವಾಸ, ಭಾರತೀಯರ ಧೈರ್ಯ, ಹೆಮ್ಮೆಯ ನುಡಿ. ಇದಕ್ಕೆ ಸಾಕ್ಷಿ ಎಂಬಂತೆ ಚಂದ್ರಯಾನ-2 ಯಶಸ್ಸು ಕಂಡಿದ್ದರೂ ಗುರಿ ತಲಪಲು ಸಾಧ್ಯವಾಗಿಲ್ಲ. ಹೀಗಾಗಿ ಮತ್ತೊಂದು ಚಂದ್ರಯಾನಕ್ಕೆ ಸಿದ್ಧತೆ ನಡೆಯುತ್ತಿದೆ. 2020 ರ ವೇಳೆ ಈ ಯಾನ ನಡೆಯಲಿದೆ.

Advertisement
Advertisement

ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಮಹತ್ವಾಕಾಂಕ್ಷಿ ಚಂದ್ರಯಾನ-2 ಯೋಜನೆಯ ವಿಕ್ರಮ್ ಲ್ಯಾಂಡರ್ ಸತತ ಪ್ರಯತ್ನದ ಬಳಿಕವೂ ಸಂಪರ್ಕ ಸಾದ್ಯವಾಗಿಲ್ಲ. ಆದರೆ ಇದರಿಂದ ಧೈರ್ಯ , ವಿಶ್ವಾಸ ಕಳೆದುಕೊಂಡಿಲ್ಲ, ಗಗನ್ ಯಾನ್ ಇಸ್ರೋ ಮುಂದಿನ ಆದ್ಯತೆಯಾಗಿದ್ದು, 2020ರ ವೇಳೆಗೆ ಮತ್ತೊಂದು ಚಂದ್ರಯಾನ ಕೈಗೊಳ್ಳುತ್ತಿದೆ.

ಇಸ್ರೋ ಅಧ್ಯಕ್ಷ ಕೆ.ಶಿವನ್ ಈ ವಿಷಯವನ್ನು ಸ್ಪಷ್ಟಪಡಿಸಿದ್ದು, ಗಗನ್ ಯಾನ್ ಇಸ್ರೋ ಮುಂದಿನ ಆದ್ಯತೆಯಾಗಿದ್ದು, 2020ರ ವೇಳೆಗೆ ಮತ್ತೊಂದು ಚಂದ್ರಯಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಆರ್ಬಿಟರ್ ನಲ್ಲಿ 8 ಉಪಕರಗಳಿವೆ, ಪ್ರತಿಯೊಂದೂ ಉಪಕರಣಗಳು ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸುತ್ತಿವೆ. ಲ್ಯಾಂಡರ್ ಜೊತೆ ಸಂಪರ್ಕ ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ.

ಇಸ್ರೋ ಉಡಾವಣೆ ಮಾಡಿದ್ದ ಚಂದ್ರಯಾನ-2 ಯೋಜನೆಯ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲ್ಮೈ ಮೇಲೆ ಇಳಿಯುವ ವೇಳೆ ಸಂಪರ್ಕ ಕಡಿತಗೊಂಡಿತ್ತು. ಚಂದ್ರನ ಮೇಲ್ಮೈ ಮೇಲೆ ಇಳಿಯಲು ಕೇವಲ 2.1 ಕಿ.ಮೀ ಅಂತರವಿದ್ದಾಗ ವಿಕ್ರಮ್ ಲ್ಯಾಂಡರ್ ನ ಸಂಪರ್ಕ ಕಡಿತವಾಗಿತ್ತು. ಹೀಗಾಗಿ ಇಡೀ ಯೋಜನೆ ವಿಫಲವಾಯಿತು ಎಂದು ಪಾಕಿಸ್ತಾನ ಸೇರಿದಂತೆ ಅದರ ಪರ ರಾಷ್ಟ್ರಗಳು ಟೀಕಿಸಿದ್ದವು. ಆದರೆ ಅಮೆರಿಕದ ನಾಸಾ, ರಷ್ಯಾದ ಬಾಹ್ಯಾಕಾಶ ಸಂಸ್ಥೆ, ಆಸ್ಟ್ರೇಲಿಯಾದ ಬಾಹ್ಯಾಕಾಶ ಸಂಸ್ಥೆಗಳು ಇಸ್ರೋ ಸಾಧನೆಯನ್ನು ಮುಕ್ತ ಕಂಠದಿಂದ ಶ್ಲಾಘಿಸಿವೆ. ಇದೀಗ ಇಸ್ರೋ ಧೈರ್ಯದಿಂದ ಇನ್ನೊಂದು ಯಾನಕ್ಕೆ ಸಿದ್ಧತೆ ನಡೆಸಿದೆ.

ಚಂದ್ರಯಾನ-2 ಯೋಜನೆಯ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲ್ಮೈ ಮೇಲೆ ಇಳಿಯಲು ಕೇವಲ 2.1 ಕಿಮೀ ದೂರವಿದ್ದಾಗ ಅದರ ಸಂಪರ್ಕ ಕಡಿತವಾಗಿತ್ತು. ಹೀಗಾಗಿ ಭಾರತದ ಈ ಮಹತ್ವಾಕಾಂಕ್ಷಿ ಯೋಜವೆ ಸಂಪೂರ್ಣ ಯಶಸ್ವಿಯಾಗಿರಲಿಲ್ಲ. ಆದರೆ ಆರ್ಬಿಟರ್ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಚಂದ್ರನ ಕುರಿತ ಮತ್ತಷ್ಟು ಮಾಹಿತಿಗಳನ್ನು  ಜಗತ್ತಿಗೆ ತಿಳಿಸಲಿದೆ.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಲೆ ಮಹದೇಶ್ವರ ಅರಣ್ಯದಲ್ಲಿ 4 ಹುಲಿಗಳ ಅಸಹಜ ಸಾವು | ತನಿಖೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ
June 27, 2025
6:38 AM
by: The Rural Mirror ಸುದ್ದಿಜಾಲ
ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆ | ರಾಜ್ಯದ ಪ್ರಮುಖ ನದಿ ನೀರಿನ ಒಳ ಹರಿವಿನ ಪ್ರಮಾಣ ಹೆಚ್ಚಳ
June 27, 2025
6:31 AM
by: ದ ರೂರಲ್ ಮಿರರ್.ಕಾಂ
ಕೃಷಿ ಮತ್ತು ಆಹಾರೋತ್ಪನ್ನ ವಲಯದಲ್ಲಿ ಹೂಡಿಕೆಗೆ ಅವಕಾಶ
June 27, 2025
6:26 AM
by: The Rural Mirror ಸುದ್ದಿಜಾಲ
ಬಾಹ್ಯಾಕಾಶ ಕೇಂದ್ರ ತಲುಪಿದ ಶುಭಾಂಶು ಶುಕ್ಲ | ಬಾಹ್ಯಾಕಾಶದಲ್ಲಿ ಧಾರವಾಡದ ಹೆಸರು, ಮೆಂತೆಕಾಳು
June 26, 2025
9:54 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group