Advertisement
MIRROR FOCUS

2020ರ ವೇಳೆಗೆ ಮತ್ತೊಂದು ಚಂದ್ರಯಾನಕ್ಕೆ ಸಿದ್ಧತೆ…..

Share

ನಾವು ಗುರಿ ತಲಿಪಿಯೇ ಸಿದ್ಧ…. ಸೋಲೆಂಬುದು ನಮಗಿಲ್ಲ, ಮುಂದಕ್ಕೆ ಹಾಕಿರುವ ಗೆಲವು ಮಾತ್ರಾ ನಮ್ಮಲ್ಲಿ…. ಇದು ಭಾರತೀಯರ ವಿಶ್ವಾಸ, ಭಾರತೀಯರ ಧೈರ್ಯ, ಹೆಮ್ಮೆಯ ನುಡಿ. ಇದಕ್ಕೆ ಸಾಕ್ಷಿ ಎಂಬಂತೆ ಚಂದ್ರಯಾನ-2 ಯಶಸ್ಸು ಕಂಡಿದ್ದರೂ ಗುರಿ ತಲಪಲು ಸಾಧ್ಯವಾಗಿಲ್ಲ. ಹೀಗಾಗಿ ಮತ್ತೊಂದು ಚಂದ್ರಯಾನಕ್ಕೆ ಸಿದ್ಧತೆ ನಡೆಯುತ್ತಿದೆ. 2020 ರ ವೇಳೆ ಈ ಯಾನ ನಡೆಯಲಿದೆ.


ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಮಹತ್ವಾಕಾಂಕ್ಷಿ ಚಂದ್ರಯಾನ-2 ಯೋಜನೆಯ ವಿಕ್ರಮ್ ಲ್ಯಾಂಡರ್ ಸತತ ಪ್ರಯತ್ನದ ಬಳಿಕವೂ ಸಂಪರ್ಕ ಸಾದ್ಯವಾಗಿಲ್ಲ. ಆದರೆ ಇದರಿಂದ ಧೈರ್ಯ , ವಿಶ್ವಾಸ ಕಳೆದುಕೊಂಡಿಲ್ಲ, ಗಗನ್ ಯಾನ್ ಇಸ್ರೋ ಮುಂದಿನ ಆದ್ಯತೆಯಾಗಿದ್ದು, 2020ರ ವೇಳೆಗೆ ಮತ್ತೊಂದು ಚಂದ್ರಯಾನ ಕೈಗೊಳ್ಳುತ್ತಿದೆ.

ಇಸ್ರೋ ಅಧ್ಯಕ್ಷ ಕೆ.ಶಿವನ್ ಈ ವಿಷಯವನ್ನು ಸ್ಪಷ್ಟಪಡಿಸಿದ್ದು, ಗಗನ್ ಯಾನ್ ಇಸ್ರೋ ಮುಂದಿನ ಆದ್ಯತೆಯಾಗಿದ್ದು, 2020ರ ವೇಳೆಗೆ ಮತ್ತೊಂದು ಚಂದ್ರಯಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಆರ್ಬಿಟರ್ ನಲ್ಲಿ 8 ಉಪಕರಗಳಿವೆ, ಪ್ರತಿಯೊಂದೂ ಉಪಕರಣಗಳು ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸುತ್ತಿವೆ. ಲ್ಯಾಂಡರ್ ಜೊತೆ ಸಂಪರ್ಕ ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ.

ಇಸ್ರೋ ಉಡಾವಣೆ ಮಾಡಿದ್ದ ಚಂದ್ರಯಾನ-2 ಯೋಜನೆಯ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲ್ಮೈ ಮೇಲೆ ಇಳಿಯುವ ವೇಳೆ ಸಂಪರ್ಕ ಕಡಿತಗೊಂಡಿತ್ತು. ಚಂದ್ರನ ಮೇಲ್ಮೈ ಮೇಲೆ ಇಳಿಯಲು ಕೇವಲ 2.1 ಕಿ.ಮೀ ಅಂತರವಿದ್ದಾಗ ವಿಕ್ರಮ್ ಲ್ಯಾಂಡರ್ ನ ಸಂಪರ್ಕ ಕಡಿತವಾಗಿತ್ತು. ಹೀಗಾಗಿ ಇಡೀ ಯೋಜನೆ ವಿಫಲವಾಯಿತು ಎಂದು ಪಾಕಿಸ್ತಾನ ಸೇರಿದಂತೆ ಅದರ ಪರ ರಾಷ್ಟ್ರಗಳು ಟೀಕಿಸಿದ್ದವು. ಆದರೆ ಅಮೆರಿಕದ ನಾಸಾ, ರಷ್ಯಾದ ಬಾಹ್ಯಾಕಾಶ ಸಂಸ್ಥೆ, ಆಸ್ಟ್ರೇಲಿಯಾದ ಬಾಹ್ಯಾಕಾಶ ಸಂಸ್ಥೆಗಳು ಇಸ್ರೋ ಸಾಧನೆಯನ್ನು ಮುಕ್ತ ಕಂಠದಿಂದ ಶ್ಲಾಘಿಸಿವೆ. ಇದೀಗ ಇಸ್ರೋ ಧೈರ್ಯದಿಂದ ಇನ್ನೊಂದು ಯಾನಕ್ಕೆ ಸಿದ್ಧತೆ ನಡೆಸಿದೆ.

ಚಂದ್ರಯಾನ-2 ಯೋಜನೆಯ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲ್ಮೈ ಮೇಲೆ ಇಳಿಯಲು ಕೇವಲ 2.1 ಕಿಮೀ ದೂರವಿದ್ದಾಗ ಅದರ ಸಂಪರ್ಕ ಕಡಿತವಾಗಿತ್ತು. ಹೀಗಾಗಿ ಭಾರತದ ಈ ಮಹತ್ವಾಕಾಂಕ್ಷಿ ಯೋಜವೆ ಸಂಪೂರ್ಣ ಯಶಸ್ವಿಯಾಗಿರಲಿಲ್ಲ. ಆದರೆ ಆರ್ಬಿಟರ್ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಚಂದ್ರನ ಕುರಿತ ಮತ್ತಷ್ಟು ಮಾಹಿತಿಗಳನ್ನು  ಜಗತ್ತಿಗೆ ತಿಳಿಸಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

19 hours ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

19 hours ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

3 days ago