2020-2021ನೇ ಸಾಲಿನ ಬಜೆಟ್ : ಯಾವುದರ ದರ ಏರಲಿದೆ-ಯಾವುದು ಇಳಿಯಲಿದೆ…?

February 2, 2020
7:21 AM

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ 2020-2021ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದಾರೆ. ಇದರ ಆಧಾರದಲ್ಲಿ ದರೆ ಏರಿಕೆ ಹಾಗೂ ಇಳಿಕೆಯಾಗುವ ವಸ್ತುಗಳು ಯಾವ್ಯಾವು ?

ವಿದೇಶಗಳಿಂದ ಆಮದು ಮಾಡಿಕೊಂಡ ನ್ಯೂಸ್ ಪ್ರಿಂಟ್ ಮೇಲಿನ ತೆರಿಗೆಯನ್ನು ತಗ್ಗಿಸಲಾಗಿದೆ. ಅದೇ ರೀತಿ ಎಲೆಕ್ಟ್ರಿಕ್ ವಾಹನಗಳು ಮತ್ತು ಮೊಬೈಲ್ ಫೋನ್‌ಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲಾಗಿದೆ. ಪ್ಲಾಸ್ಟಿಕ್ ಆಧಾರಿತ ಕಚ್ಚಾ ವಸ್ತುಗಳ ಮೇಲಿನ ಕಸ್ಟಮ್ಸ್ ತೆರಿಗೆ ಇಳಿಸಲಾಗಿದೆ.

Advertisement

ಕಸ್ಟಮ್ಸ್ ಸುಂಕ ಹೆಚ್ಚಳದಿಂದಾಗಿ ಪೀಠೋಪಕರಣ, ಪಾದರಕ್ಷೆ ಬೆಲೆಗಳು ಏರಿಕೆಯಾಗಲಿವೆ. ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಬೆಲೆಗಳು ಏರಿಕೆಯಾಗಲಿವೆ.

ದರ ಇಳಿಕೆಯಾಗಲಿರುವ ವಸ್ತುಗಳು:

Advertisement

ನ್ಯೂಸ್ ಪ್ರಿಂಟ್, ಹಗುರವಾದ ಕೋಟೆಡ್ ಕಾಗದ ಮೇಲೆ ಸುಂಕ ಶೇ 5ರಷ್ಟು ಇಳಿಕೆ

ಜವಳಿ ಹಾಗೂ ಪ್ಲಾಸ್ಟಿಕ್ ಉತ್ಪನ್ನ ತಯಾರಿಕೆಯಲ್ಲಿ ಬಳಸುವ ಶುದ್ಧೀಕರಿಸಿದ ತೆರೆಫಾಥಾಲಿಕ್ ಆಮ್ಲದ ಮೇಲಿನ ಸುಂಕ ಕಡಿತ.

Advertisement

ಕೃಷಿ-ಪಶು ಆಧಾರಿತ ಉತ್ಪನ್ನ, ತುನಾ ಬೈಟ್, ಸ್ಕಿಮ್ಡ್ ಹಾಲು, ಕೆಲವು ಆಲ್ಕೋಹಾಲ್ ಯುಳ್ಳ ಪೇಯಗಳು  ಮೇಲೆ ಸೀಮಾ ಸುಂಕ ತೆಗೆದು ಹಾಕಲಾಗಿದೆ. ಮೊಬೈಲ್ ಫೋನ್‌ಗಳಿಗಾಗಿ ಬಿಡಿಭಾಗಗಳು.

ಎಲೆಕ್ಟ್ರಿಕ್ ವಾಹನ ಖರೀದಿಗೆ ಉತ್ತೇಜನ ಎಲೆಕ್ಟ್ರಿಕ್ ವಾಹನ ಖರೀದಿಗೆ ಉತ್ತೇಜನ , ಸೌರಫಲಕ, ಇಟ್ಟಿಗೆ, ಕಿವುಡು ಮೂಗರಿಗೆ ಬಳಸುವ ಸಾಧನಗಳು ಇತ್ಯಾದಿಗಳ ಮೇಲಿನ ಬೆಲೆ ಇಳಿಕೆಯಾಗಿದೆ.

Advertisement

ದರ ಏರಿಕೆಯಾಗಲಿರುವ ವಸ್ತುಗಳ:

ಪೀಠೋಪಕರಣಗಳು, ಸ್ಯಾಂಡಲ್ , ಸಿಗರೇಟ್, ತಂಬಾಕು ಉತ್ಪನ್ನಗಳು, ವೈದ್ಯಕೀಯ ಉಪಕರಣಗಳು, ಅಡುಗೆಮನೆಯಲ್ಲಿ ಬಳಸುವ ವಸ್ತುಗಳು
ಕ್ಲೇ ಐರನ್, ಸ್ಟೀಲ್, ಕಾಪರ್, ವಾಣಿಜ್ಯ ವಾಹನಗಳಿಗೆ ಬಿಡಿಭಾಗಗಳು, ವಾಲ್ ಪ್ಯಾನ್ ಗಳು

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ
June 26, 2026
1:15 PM
by: ದ ರೂರಲ್ ಮಿರರ್.ಕಾಂ
ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”
June 26, 2026
12:52 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ
June 25, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು
ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ
June 25, 2026
8:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror