2021 ರ ವೇಳೆಗೆ ದೇಶದ ಆರ್ಥಿಕ ಬೆಳವಣಿಗೆ ಚೇತರಿಕೆ

November 6, 2019
7:49 AM

ಮುಂಬಯಿ: ದೇಶದ ಆರ್ಥಿಕ ಬೆಳವಣಿಗೆಯು 2021 ರ  ವೇಳೆಗೆ ಚೇತರಿಸಿಕೊಳ್ಳಲಿದೆ. ಆ ಬಳಿಕ ದೇಶದ ಆರ್ಥಿಕ ಸ್ಥಿತಿ ಸುಧಾರಣೆಯಾಗಲಿದೆ ಎಂದು ಸೆಂಟ್ರಮ್ ಬ್ರೋಕರೇಜ್ ಸಂಸ್ಥೆಯ ವರದಿಯೊಂದು ತಿಳಿಸಿದೆ. 

ಹಣಕಾಸು ಸೇವೆಗಳ ಸೆಂಟ್ರಮ್ ಬ್ರೋಕರೇಜ್ ಸಂಸ್ಥೆಯ ಈ ಅಧ್ಯಯನ  ವರದಿಯ ಪ್ರಕಾರ ಕಳೆದ 20 ವರ್ಷಗಳಲ್ಲಿ ಪ್ರಸ್ತುತ ಕುಸಿತವು ಅತ್ಯಂತ ತೀವ್ರವಾಗಿದೆ. ಇದರ ಪರಿಣಾಮ ಗ್ರಾಮೀಣ ಮತ್ತು ನಗರ ಬೇಡಿಕೆಯ ಮೇಲೆ ಪರಿಣಾಮ ಬೀರಿದೆ. ಇದು 2021 ರ ಮೊದಲ ಅಥವಾ ಎರಡನೇ ತ್ರೈಮಾಸಿಕದ ವೇಳೆಗೆ ಆರ್ಥಿಕ  ಬೆಳವಣಿಗೆಯು ಮರುಕಳಿಸುತ್ತದೆ ಎಂದು ಹೇಳಿದೆ. ಈ ಹಿಂಜರಿತಕ್ಕೆ ನೋಟ್ ರದ್ದತಿ ಹಾಗೂ ಜಿಎಸ್‌ಟಿ ಏಕಕಾಲದಲ್ಲಿ  ದೇಶವು ಎದುರಿಸಿದಾಗ ಉಂಟಾದ ಆಘಾತಗಳ ಪರಿಣಾಮವಾಗಿ ಆರ್ಥಿಕ ಹಿಂಜರಿತವುಂಟಾಗಿದೆ ಎಂದು ಬ್ರೋಕರೇಜ್ ತಿಳಿಸಿದೆ. 3 ವರ್ಷಗಳಲ್ಲಿ ಸತತ 3 ಆಘಾತಗಳನ್ನು ದೇಶವು ತಾಳಿಕೊಂಡಿತು. ಈಗ ಸರಕಾರದ ಮಧ್ಯಪ್ರವೇಶದಿಂದ ನಿಧಾನವಾಗಿ ಸರಿಯಾಗುತ್ತಿದೆ.  2021 ರ ಹಣಕಾಸು ವರ್ಷದ ಮೊದಲನೆ ಹಾಗೂ ಎರಡನೆ ತ್ರೈಮಾಸಿಕದಲ್ಲಿ ಆರ್ಥಿಕತೆಯು  ಸಹಜತೆಯತ್ತ ಮರಳುವ ಸಾಧ್ಯತೆಯಿದೆ ಎಂದು ಅದು ಹೇಳಿದೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!
September 6, 2026
11:11 AM
by: ದ ರೂರಲ್ ಮಿರರ್.ಕಾಂ
ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?
September 5, 2026
10:11 PM
by: ದ ರೂರಲ್ ಮಿರರ್.ಕಾಂ
3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror