ಮುಂಬಯಿ: ದೇಶದ ಆರ್ಥಿಕ ಬೆಳವಣಿಗೆಯು 2021 ರ ವೇಳೆಗೆ ಚೇತರಿಸಿಕೊಳ್ಳಲಿದೆ. ಆ ಬಳಿಕ ದೇಶದ ಆರ್ಥಿಕ ಸ್ಥಿತಿ ಸುಧಾರಣೆಯಾಗಲಿದೆ ಎಂದು ಸೆಂಟ್ರಮ್ ಬ್ರೋಕರೇಜ್ ಸಂಸ್ಥೆಯ ವರದಿಯೊಂದು ತಿಳಿಸಿದೆ.
ಹಣಕಾಸು ಸೇವೆಗಳ ಸೆಂಟ್ರಮ್ ಬ್ರೋಕರೇಜ್ ಸಂಸ್ಥೆಯ ಈ ಅಧ್ಯಯನ ವರದಿಯ ಪ್ರಕಾರ ಕಳೆದ 20 ವರ್ಷಗಳಲ್ಲಿ ಪ್ರಸ್ತುತ ಕುಸಿತವು ಅತ್ಯಂತ ತೀವ್ರವಾಗಿದೆ. ಇದರ ಪರಿಣಾಮ ಗ್ರಾಮೀಣ ಮತ್ತು ನಗರ ಬೇಡಿಕೆಯ ಮೇಲೆ ಪರಿಣಾಮ ಬೀರಿದೆ. ಇದು 2021 ರ ಮೊದಲ ಅಥವಾ ಎರಡನೇ ತ್ರೈಮಾಸಿಕದ ವೇಳೆಗೆ ಆರ್ಥಿಕ ಬೆಳವಣಿಗೆಯು ಮರುಕಳಿಸುತ್ತದೆ ಎಂದು ಹೇಳಿದೆ. ಈ ಹಿಂಜರಿತಕ್ಕೆ ನೋಟ್ ರದ್ದತಿ ಹಾಗೂ ಜಿಎಸ್ಟಿ ಏಕಕಾಲದಲ್ಲಿ ದೇಶವು ಎದುರಿಸಿದಾಗ ಉಂಟಾದ ಆಘಾತಗಳ ಪರಿಣಾಮವಾಗಿ ಆರ್ಥಿಕ ಹಿಂಜರಿತವುಂಟಾಗಿದೆ ಎಂದು ಬ್ರೋಕರೇಜ್ ತಿಳಿಸಿದೆ. 3 ವರ್ಷಗಳಲ್ಲಿ ಸತತ 3 ಆಘಾತಗಳನ್ನು ದೇಶವು ತಾಳಿಕೊಂಡಿತು. ಈಗ ಸರಕಾರದ ಮಧ್ಯಪ್ರವೇಶದಿಂದ ನಿಧಾನವಾಗಿ ಸರಿಯಾಗುತ್ತಿದೆ. 2021 ರ ಹಣಕಾಸು ವರ್ಷದ ಮೊದಲನೆ ಹಾಗೂ ಎರಡನೆ ತ್ರೈಮಾಸಿಕದಲ್ಲಿ ಆರ್ಥಿಕತೆಯು ಸಹಜತೆಯತ್ತ ಮರಳುವ ಸಾಧ್ಯತೆಯಿದೆ ಎಂದು ಅದು ಹೇಳಿದೆ.
ಮಂಗಳೂರು ತಾಲೂಕಿನ ಎಲ್ಲಾ ಗ್ರಾಮಗಳು ಮಳೆಯಾಶ್ರಿತ ಕೃಷಿಯ ಮೇಲೆ ಹೆಚ್ಚು ಅವಲಂಬಿತವಾಗಿರುವುದರಿಂದ ಹವಾಮಾನ…
ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ನೋಂದಾವಣೆಗೊಂಡ ರೈತರ ತಾಲೂಕಿನಲ್ಲಿ ವಿಮೆ ಮಾಡಿಸಲಾಗಿರುವ…
ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಪ್ರಮುಖವಾಗಿ ಕುಮುಟಾ ಮತ್ತು ಅಂಕೋಲಾದಲ್ಲಿ…
ಬೆಂಗಳೂರಿನ ಲಾಲ್ ಬಾಗ್ ನಲ್ಲಿರುವ ಡಾ. ಎಂ.ಎಚ್ ಮರೀಗೌಡ ಸಭಾಂಗಣದಲ್ಲಿ ಮೂರು ದಿನಗಳ…
ಜೇನು ಕೃಷಿ ಲಾಭದಾಯಕವಾಗಿದ್ದು, ರೈತರು ಈ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕೇಂದ್ರ…
24.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…