ಮುಂಬಯಿ: ದೇಶದ ಆರ್ಥಿಕ ಬೆಳವಣಿಗೆಯು 2021 ರ ವೇಳೆಗೆ ಚೇತರಿಸಿಕೊಳ್ಳಲಿದೆ. ಆ ಬಳಿಕ ದೇಶದ ಆರ್ಥಿಕ ಸ್ಥಿತಿ ಸುಧಾರಣೆಯಾಗಲಿದೆ ಎಂದು ಸೆಂಟ್ರಮ್ ಬ್ರೋಕರೇಜ್ ಸಂಸ್ಥೆಯ ವರದಿಯೊಂದು ತಿಳಿಸಿದೆ.
ಹಣಕಾಸು ಸೇವೆಗಳ ಸೆಂಟ್ರಮ್ ಬ್ರೋಕರೇಜ್ ಸಂಸ್ಥೆಯ ಈ ಅಧ್ಯಯನ ವರದಿಯ ಪ್ರಕಾರ ಕಳೆದ 20 ವರ್ಷಗಳಲ್ಲಿ ಪ್ರಸ್ತುತ ಕುಸಿತವು ಅತ್ಯಂತ ತೀವ್ರವಾಗಿದೆ. ಇದರ ಪರಿಣಾಮ ಗ್ರಾಮೀಣ ಮತ್ತು ನಗರ ಬೇಡಿಕೆಯ ಮೇಲೆ ಪರಿಣಾಮ ಬೀರಿದೆ. ಇದು 2021 ರ ಮೊದಲ ಅಥವಾ ಎರಡನೇ ತ್ರೈಮಾಸಿಕದ ವೇಳೆಗೆ ಆರ್ಥಿಕ ಬೆಳವಣಿಗೆಯು ಮರುಕಳಿಸುತ್ತದೆ ಎಂದು ಹೇಳಿದೆ. ಈ ಹಿಂಜರಿತಕ್ಕೆ ನೋಟ್ ರದ್ದತಿ ಹಾಗೂ ಜಿಎಸ್ಟಿ ಏಕಕಾಲದಲ್ಲಿ ದೇಶವು ಎದುರಿಸಿದಾಗ ಉಂಟಾದ ಆಘಾತಗಳ ಪರಿಣಾಮವಾಗಿ ಆರ್ಥಿಕ ಹಿಂಜರಿತವುಂಟಾಗಿದೆ ಎಂದು ಬ್ರೋಕರೇಜ್ ತಿಳಿಸಿದೆ. 3 ವರ್ಷಗಳಲ್ಲಿ ಸತತ 3 ಆಘಾತಗಳನ್ನು ದೇಶವು ತಾಳಿಕೊಂಡಿತು. ಈಗ ಸರಕಾರದ ಮಧ್ಯಪ್ರವೇಶದಿಂದ ನಿಧಾನವಾಗಿ ಸರಿಯಾಗುತ್ತಿದೆ. 2021 ರ ಹಣಕಾಸು ವರ್ಷದ ಮೊದಲನೆ ಹಾಗೂ ಎರಡನೆ ತ್ರೈಮಾಸಿಕದಲ್ಲಿ ಆರ್ಥಿಕತೆಯು ಸಹಜತೆಯತ್ತ ಮರಳುವ ಸಾಧ್ಯತೆಯಿದೆ ಎಂದು ಅದು ಹೇಳಿದೆ.
ಕೇಂದ್ರ ಬಜೆಟ್ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…