ಮುಂಬಯಿ: ದೇಶದ ಆರ್ಥಿಕ ಬೆಳವಣಿಗೆಯು 2021 ರ ವೇಳೆಗೆ ಚೇತರಿಸಿಕೊಳ್ಳಲಿದೆ. ಆ ಬಳಿಕ ದೇಶದ ಆರ್ಥಿಕ ಸ್ಥಿತಿ ಸುಧಾರಣೆಯಾಗಲಿದೆ ಎಂದು ಸೆಂಟ್ರಮ್ ಬ್ರೋಕರೇಜ್ ಸಂಸ್ಥೆಯ ವರದಿಯೊಂದು ತಿಳಿಸಿದೆ.
ಹಣಕಾಸು ಸೇವೆಗಳ ಸೆಂಟ್ರಮ್ ಬ್ರೋಕರೇಜ್ ಸಂಸ್ಥೆಯ ಈ ಅಧ್ಯಯನ ವರದಿಯ ಪ್ರಕಾರ ಕಳೆದ 20 ವರ್ಷಗಳಲ್ಲಿ ಪ್ರಸ್ತುತ ಕುಸಿತವು ಅತ್ಯಂತ ತೀವ್ರವಾಗಿದೆ. ಇದರ ಪರಿಣಾಮ ಗ್ರಾಮೀಣ ಮತ್ತು ನಗರ ಬೇಡಿಕೆಯ ಮೇಲೆ ಪರಿಣಾಮ ಬೀರಿದೆ. ಇದು 2021 ರ ಮೊದಲ ಅಥವಾ ಎರಡನೇ ತ್ರೈಮಾಸಿಕದ ವೇಳೆಗೆ ಆರ್ಥಿಕ ಬೆಳವಣಿಗೆಯು ಮರುಕಳಿಸುತ್ತದೆ ಎಂದು ಹೇಳಿದೆ. ಈ ಹಿಂಜರಿತಕ್ಕೆ ನೋಟ್ ರದ್ದತಿ ಹಾಗೂ ಜಿಎಸ್ಟಿ ಏಕಕಾಲದಲ್ಲಿ ದೇಶವು ಎದುರಿಸಿದಾಗ ಉಂಟಾದ ಆಘಾತಗಳ ಪರಿಣಾಮವಾಗಿ ಆರ್ಥಿಕ ಹಿಂಜರಿತವುಂಟಾಗಿದೆ ಎಂದು ಬ್ರೋಕರೇಜ್ ತಿಳಿಸಿದೆ. 3 ವರ್ಷಗಳಲ್ಲಿ ಸತತ 3 ಆಘಾತಗಳನ್ನು ದೇಶವು ತಾಳಿಕೊಂಡಿತು. ಈಗ ಸರಕಾರದ ಮಧ್ಯಪ್ರವೇಶದಿಂದ ನಿಧಾನವಾಗಿ ಸರಿಯಾಗುತ್ತಿದೆ. 2021 ರ ಹಣಕಾಸು ವರ್ಷದ ಮೊದಲನೆ ಹಾಗೂ ಎರಡನೆ ತ್ರೈಮಾಸಿಕದಲ್ಲಿ ಆರ್ಥಿಕತೆಯು ಸಹಜತೆಯತ್ತ ಮರಳುವ ಸಾಧ್ಯತೆಯಿದೆ ಎಂದು ಅದು ಹೇಳಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…