ಮುಂಬಯಿ: ದೇಶದ ಆರ್ಥಿಕ ಬೆಳವಣಿಗೆಯು 2021 ರ ವೇಳೆಗೆ ಚೇತರಿಸಿಕೊಳ್ಳಲಿದೆ. ಆ ಬಳಿಕ ದೇಶದ ಆರ್ಥಿಕ ಸ್ಥಿತಿ ಸುಧಾರಣೆಯಾಗಲಿದೆ ಎಂದು ಸೆಂಟ್ರಮ್ ಬ್ರೋಕರೇಜ್ ಸಂಸ್ಥೆಯ ವರದಿಯೊಂದು ತಿಳಿಸಿದೆ.
ಹಣಕಾಸು ಸೇವೆಗಳ ಸೆಂಟ್ರಮ್ ಬ್ರೋಕರೇಜ್ ಸಂಸ್ಥೆಯ ಈ ಅಧ್ಯಯನ ವರದಿಯ ಪ್ರಕಾರ ಕಳೆದ 20 ವರ್ಷಗಳಲ್ಲಿ ಪ್ರಸ್ತುತ ಕುಸಿತವು ಅತ್ಯಂತ ತೀವ್ರವಾಗಿದೆ. ಇದರ ಪರಿಣಾಮ ಗ್ರಾಮೀಣ ಮತ್ತು ನಗರ ಬೇಡಿಕೆಯ ಮೇಲೆ ಪರಿಣಾಮ ಬೀರಿದೆ. ಇದು 2021 ರ ಮೊದಲ ಅಥವಾ ಎರಡನೇ ತ್ರೈಮಾಸಿಕದ ವೇಳೆಗೆ ಆರ್ಥಿಕ ಬೆಳವಣಿಗೆಯು ಮರುಕಳಿಸುತ್ತದೆ ಎಂದು ಹೇಳಿದೆ. ಈ ಹಿಂಜರಿತಕ್ಕೆ ನೋಟ್ ರದ್ದತಿ ಹಾಗೂ ಜಿಎಸ್ಟಿ ಏಕಕಾಲದಲ್ಲಿ ದೇಶವು ಎದುರಿಸಿದಾಗ ಉಂಟಾದ ಆಘಾತಗಳ ಪರಿಣಾಮವಾಗಿ ಆರ್ಥಿಕ ಹಿಂಜರಿತವುಂಟಾಗಿದೆ ಎಂದು ಬ್ರೋಕರೇಜ್ ತಿಳಿಸಿದೆ. 3 ವರ್ಷಗಳಲ್ಲಿ ಸತತ 3 ಆಘಾತಗಳನ್ನು ದೇಶವು ತಾಳಿಕೊಂಡಿತು. ಈಗ ಸರಕಾರದ ಮಧ್ಯಪ್ರವೇಶದಿಂದ ನಿಧಾನವಾಗಿ ಸರಿಯಾಗುತ್ತಿದೆ. 2021 ರ ಹಣಕಾಸು ವರ್ಷದ ಮೊದಲನೆ ಹಾಗೂ ಎರಡನೆ ತ್ರೈಮಾಸಿಕದಲ್ಲಿ ಆರ್ಥಿಕತೆಯು ಸಹಜತೆಯತ್ತ ಮರಳುವ ಸಾಧ್ಯತೆಯಿದೆ ಎಂದು ಅದು ಹೇಳಿದೆ.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…