ಮುಂಬಯಿ: ದೇಶದ ಆರ್ಥಿಕ ಬೆಳವಣಿಗೆಯು 2021 ರ ವೇಳೆಗೆ ಚೇತರಿಸಿಕೊಳ್ಳಲಿದೆ. ಆ ಬಳಿಕ ದೇಶದ ಆರ್ಥಿಕ ಸ್ಥಿತಿ ಸುಧಾರಣೆಯಾಗಲಿದೆ ಎಂದು ಸೆಂಟ್ರಮ್ ಬ್ರೋಕರೇಜ್ ಸಂಸ್ಥೆಯ ವರದಿಯೊಂದು ತಿಳಿಸಿದೆ.
ಹಣಕಾಸು ಸೇವೆಗಳ ಸೆಂಟ್ರಮ್ ಬ್ರೋಕರೇಜ್ ಸಂಸ್ಥೆಯ ಈ ಅಧ್ಯಯನ ವರದಿಯ ಪ್ರಕಾರ ಕಳೆದ 20 ವರ್ಷಗಳಲ್ಲಿ ಪ್ರಸ್ತುತ ಕುಸಿತವು ಅತ್ಯಂತ ತೀವ್ರವಾಗಿದೆ. ಇದರ ಪರಿಣಾಮ ಗ್ರಾಮೀಣ ಮತ್ತು ನಗರ ಬೇಡಿಕೆಯ ಮೇಲೆ ಪರಿಣಾಮ ಬೀರಿದೆ. ಇದು 2021 ರ ಮೊದಲ ಅಥವಾ ಎರಡನೇ ತ್ರೈಮಾಸಿಕದ ವೇಳೆಗೆ ಆರ್ಥಿಕ ಬೆಳವಣಿಗೆಯು ಮರುಕಳಿಸುತ್ತದೆ ಎಂದು ಹೇಳಿದೆ. ಈ ಹಿಂಜರಿತಕ್ಕೆ ನೋಟ್ ರದ್ದತಿ ಹಾಗೂ ಜಿಎಸ್ಟಿ ಏಕಕಾಲದಲ್ಲಿ ದೇಶವು ಎದುರಿಸಿದಾಗ ಉಂಟಾದ ಆಘಾತಗಳ ಪರಿಣಾಮವಾಗಿ ಆರ್ಥಿಕ ಹಿಂಜರಿತವುಂಟಾಗಿದೆ ಎಂದು ಬ್ರೋಕರೇಜ್ ತಿಳಿಸಿದೆ. 3 ವರ್ಷಗಳಲ್ಲಿ ಸತತ 3 ಆಘಾತಗಳನ್ನು ದೇಶವು ತಾಳಿಕೊಂಡಿತು. ಈಗ ಸರಕಾರದ ಮಧ್ಯಪ್ರವೇಶದಿಂದ ನಿಧಾನವಾಗಿ ಸರಿಯಾಗುತ್ತಿದೆ. 2021 ರ ಹಣಕಾಸು ವರ್ಷದ ಮೊದಲನೆ ಹಾಗೂ ಎರಡನೆ ತ್ರೈಮಾಸಿಕದಲ್ಲಿ ಆರ್ಥಿಕತೆಯು ಸಹಜತೆಯತ್ತ ಮರಳುವ ಸಾಧ್ಯತೆಯಿದೆ ಎಂದು ಅದು ಹೇಳಿದೆ.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…