Advertisement
ರಾಷ್ಟ್ರೀಯ

2021 ರ ವೇಳೆಗೆ ದೇಶದ ಆರ್ಥಿಕ ಬೆಳವಣಿಗೆ ಚೇತರಿಕೆ

Share

ಮುಂಬಯಿ: ದೇಶದ ಆರ್ಥಿಕ ಬೆಳವಣಿಗೆಯು 2021 ರ  ವೇಳೆಗೆ ಚೇತರಿಸಿಕೊಳ್ಳಲಿದೆ. ಆ ಬಳಿಕ ದೇಶದ ಆರ್ಥಿಕ ಸ್ಥಿತಿ ಸುಧಾರಣೆಯಾಗಲಿದೆ ಎಂದು ಸೆಂಟ್ರಮ್ ಬ್ರೋಕರೇಜ್ ಸಂಸ್ಥೆಯ ವರದಿಯೊಂದು ತಿಳಿಸಿದೆ. 

Advertisement

ಹಣಕಾಸು ಸೇವೆಗಳ ಸೆಂಟ್ರಮ್ ಬ್ರೋಕರೇಜ್ ಸಂಸ್ಥೆಯ ಈ ಅಧ್ಯಯನ  ವರದಿಯ ಪ್ರಕಾರ ಕಳೆದ 20 ವರ್ಷಗಳಲ್ಲಿ ಪ್ರಸ್ತುತ ಕುಸಿತವು ಅತ್ಯಂತ ತೀವ್ರವಾಗಿದೆ. ಇದರ ಪರಿಣಾಮ ಗ್ರಾಮೀಣ ಮತ್ತು ನಗರ ಬೇಡಿಕೆಯ ಮೇಲೆ ಪರಿಣಾಮ ಬೀರಿದೆ. ಇದು 2021 ರ ಮೊದಲ ಅಥವಾ ಎರಡನೇ ತ್ರೈಮಾಸಿಕದ ವೇಳೆಗೆ ಆರ್ಥಿಕ  ಬೆಳವಣಿಗೆಯು ಮರುಕಳಿಸುತ್ತದೆ ಎಂದು ಹೇಳಿದೆ. ಈ ಹಿಂಜರಿತಕ್ಕೆ ನೋಟ್ ರದ್ದತಿ ಹಾಗೂ ಜಿಎಸ್‌ಟಿ ಏಕಕಾಲದಲ್ಲಿ  ದೇಶವು ಎದುರಿಸಿದಾಗ ಉಂಟಾದ ಆಘಾತಗಳ ಪರಿಣಾಮವಾಗಿ ಆರ್ಥಿಕ ಹಿಂಜರಿತವುಂಟಾಗಿದೆ ಎಂದು ಬ್ರೋಕರೇಜ್ ತಿಳಿಸಿದೆ. 3 ವರ್ಷಗಳಲ್ಲಿ ಸತತ 3 ಆಘಾತಗಳನ್ನು ದೇಶವು ತಾಳಿಕೊಂಡಿತು. ಈಗ ಸರಕಾರದ ಮಧ್ಯಪ್ರವೇಶದಿಂದ ನಿಧಾನವಾಗಿ ಸರಿಯಾಗುತ್ತಿದೆ.  2021 ರ ಹಣಕಾಸು ವರ್ಷದ ಮೊದಲನೆ ಹಾಗೂ ಎರಡನೆ ತ್ರೈಮಾಸಿಕದಲ್ಲಿ ಆರ್ಥಿಕತೆಯು  ಸಹಜತೆಯತ್ತ ಮರಳುವ ಸಾಧ್ಯತೆಯಿದೆ ಎಂದು ಅದು ಹೇಳಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

5 hours ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

6 hours ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

6 hours ago

ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು

ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…

6 hours ago

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

1 day ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

2 days ago