Advertisement
ರಾಷ್ಟ್ರೀಯ

2021 ರ ವೇಳೆಗೆ ದೇಶದ ಆರ್ಥಿಕ ಬೆಳವಣಿಗೆ ಚೇತರಿಕೆ

Share

ಮುಂಬಯಿ: ದೇಶದ ಆರ್ಥಿಕ ಬೆಳವಣಿಗೆಯು 2021 ರ  ವೇಳೆಗೆ ಚೇತರಿಸಿಕೊಳ್ಳಲಿದೆ. ಆ ಬಳಿಕ ದೇಶದ ಆರ್ಥಿಕ ಸ್ಥಿತಿ ಸುಧಾರಣೆಯಾಗಲಿದೆ ಎಂದು ಸೆಂಟ್ರಮ್ ಬ್ರೋಕರೇಜ್ ಸಂಸ್ಥೆಯ ವರದಿಯೊಂದು ತಿಳಿಸಿದೆ. 

ಹಣಕಾಸು ಸೇವೆಗಳ ಸೆಂಟ್ರಮ್ ಬ್ರೋಕರೇಜ್ ಸಂಸ್ಥೆಯ ಈ ಅಧ್ಯಯನ  ವರದಿಯ ಪ್ರಕಾರ ಕಳೆದ 20 ವರ್ಷಗಳಲ್ಲಿ ಪ್ರಸ್ತುತ ಕುಸಿತವು ಅತ್ಯಂತ ತೀವ್ರವಾಗಿದೆ. ಇದರ ಪರಿಣಾಮ ಗ್ರಾಮೀಣ ಮತ್ತು ನಗರ ಬೇಡಿಕೆಯ ಮೇಲೆ ಪರಿಣಾಮ ಬೀರಿದೆ. ಇದು 2021 ರ ಮೊದಲ ಅಥವಾ ಎರಡನೇ ತ್ರೈಮಾಸಿಕದ ವೇಳೆಗೆ ಆರ್ಥಿಕ  ಬೆಳವಣಿಗೆಯು ಮರುಕಳಿಸುತ್ತದೆ ಎಂದು ಹೇಳಿದೆ. ಈ ಹಿಂಜರಿತಕ್ಕೆ ನೋಟ್ ರದ್ದತಿ ಹಾಗೂ ಜಿಎಸ್‌ಟಿ ಏಕಕಾಲದಲ್ಲಿ  ದೇಶವು ಎದುರಿಸಿದಾಗ ಉಂಟಾದ ಆಘಾತಗಳ ಪರಿಣಾಮವಾಗಿ ಆರ್ಥಿಕ ಹಿಂಜರಿತವುಂಟಾಗಿದೆ ಎಂದು ಬ್ರೋಕರೇಜ್ ತಿಳಿಸಿದೆ. 3 ವರ್ಷಗಳಲ್ಲಿ ಸತತ 3 ಆಘಾತಗಳನ್ನು ದೇಶವು ತಾಳಿಕೊಂಡಿತು. ಈಗ ಸರಕಾರದ ಮಧ್ಯಪ್ರವೇಶದಿಂದ ನಿಧಾನವಾಗಿ ಸರಿಯಾಗುತ್ತಿದೆ.  2021 ರ ಹಣಕಾಸು ವರ್ಷದ ಮೊದಲನೆ ಹಾಗೂ ಎರಡನೆ ತ್ರೈಮಾಸಿಕದಲ್ಲಿ ಆರ್ಥಿಕತೆಯು  ಸಹಜತೆಯತ್ತ ಮರಳುವ ಸಾಧ್ಯತೆಯಿದೆ ಎಂದು ಅದು ಹೇಳಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

12 hours ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

14 hours ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

15 hours ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

18 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

19 hours ago