2021 ರ ವೇಳೆಗೆ ದೇಶದ ಆರ್ಥಿಕ ಬೆಳವಣಿಗೆ ಚೇತರಿಕೆ

November 6, 2019
7:49 AM

ಮುಂಬಯಿ: ದೇಶದ ಆರ್ಥಿಕ ಬೆಳವಣಿಗೆಯು 2021 ರ  ವೇಳೆಗೆ ಚೇತರಿಸಿಕೊಳ್ಳಲಿದೆ. ಆ ಬಳಿಕ ದೇಶದ ಆರ್ಥಿಕ ಸ್ಥಿತಿ ಸುಧಾರಣೆಯಾಗಲಿದೆ ಎಂದು ಸೆಂಟ್ರಮ್ ಬ್ರೋಕರೇಜ್ ಸಂಸ್ಥೆಯ ವರದಿಯೊಂದು ತಿಳಿಸಿದೆ. 

ಹಣಕಾಸು ಸೇವೆಗಳ ಸೆಂಟ್ರಮ್ ಬ್ರೋಕರೇಜ್ ಸಂಸ್ಥೆಯ ಈ ಅಧ್ಯಯನ  ವರದಿಯ ಪ್ರಕಾರ ಕಳೆದ 20 ವರ್ಷಗಳಲ್ಲಿ ಪ್ರಸ್ತುತ ಕುಸಿತವು ಅತ್ಯಂತ ತೀವ್ರವಾಗಿದೆ. ಇದರ ಪರಿಣಾಮ ಗ್ರಾಮೀಣ ಮತ್ತು ನಗರ ಬೇಡಿಕೆಯ ಮೇಲೆ ಪರಿಣಾಮ ಬೀರಿದೆ. ಇದು 2021 ರ ಮೊದಲ ಅಥವಾ ಎರಡನೇ ತ್ರೈಮಾಸಿಕದ ವೇಳೆಗೆ ಆರ್ಥಿಕ  ಬೆಳವಣಿಗೆಯು ಮರುಕಳಿಸುತ್ತದೆ ಎಂದು ಹೇಳಿದೆ. ಈ ಹಿಂಜರಿತಕ್ಕೆ ನೋಟ್ ರದ್ದತಿ ಹಾಗೂ ಜಿಎಸ್‌ಟಿ ಏಕಕಾಲದಲ್ಲಿ  ದೇಶವು ಎದುರಿಸಿದಾಗ ಉಂಟಾದ ಆಘಾತಗಳ ಪರಿಣಾಮವಾಗಿ ಆರ್ಥಿಕ ಹಿಂಜರಿತವುಂಟಾಗಿದೆ ಎಂದು ಬ್ರೋಕರೇಜ್ ತಿಳಿಸಿದೆ. 3 ವರ್ಷಗಳಲ್ಲಿ ಸತತ 3 ಆಘಾತಗಳನ್ನು ದೇಶವು ತಾಳಿಕೊಂಡಿತು. ಈಗ ಸರಕಾರದ ಮಧ್ಯಪ್ರವೇಶದಿಂದ ನಿಧಾನವಾಗಿ ಸರಿಯಾಗುತ್ತಿದೆ.  2021 ರ ಹಣಕಾಸು ವರ್ಷದ ಮೊದಲನೆ ಹಾಗೂ ಎರಡನೆ ತ್ರೈಮಾಸಿಕದಲ್ಲಿ ಆರ್ಥಿಕತೆಯು  ಸಹಜತೆಯತ್ತ ಮರಳುವ ಸಾಧ್ಯತೆಯಿದೆ ಎಂದು ಅದು ಹೇಳಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ
July 2, 2026
10:25 PM
by: ದ ರೂರಲ್ ಮಿರರ್.ಕಾಂ
34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!
June 27, 2026
9:07 PM
by: ಮಿರರ್‌ ಡೆಸ್ಕ್
ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ
June 25, 2026
7:34 AM
by: ದ ರೂರಲ್ ಮಿರರ್.ಕಾಂ
ಅಕ್ರಮವಾಗಿ ಅಡಿಕೆ ಆಮದು ಪ್ರಕರಣಕ್ಕೆ ಮತ್ತೊಂದು ಹಿನ್ನಡೆ – ₹2.22 ಕೋಟಿ ಅಡಿಕೆ ಜಪ್ತಿ ಪ್ರಕರಣದಲ್ಲಿ ಕಸ್ಟಮ್ಸ್ ಕ್ರಮಕ್ಕೆ ಹೈಕೋರ್ಟ್ ಮನ್ನಣೆ
June 22, 2026
7:56 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror